ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಬಾಬಾ ರಾಮ್ದೇವ್ ಭೇಟಿ
Team Udayavani, Nov 20, 2019, 1:31 PM IST
ಬಂಟ್ವಾಳ: ಯೋಗಗುರು ಬಾಬಾ ರಾಮ್ದೇವ್ ಅವರು ಬುಧವಾರದಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಆಗಮಿಸಿ ವಿದ್ಯಾರ್ಥಿಗಳ ಸಾಹಸ ಪ್ರದರ್ಶನ ವೀಕ್ಷಿಸಿದರು.
ವಿದ್ಯಾಕೇಂದ್ರದ ಸಂಚಾಲಕ ಡಾ.ಪ್ರಭಾಕರ ಭಟ್ ಕಲ್ಲಡ್ಕ ಸ್ವಾಗತಿಸಿದರು. ಈ ವೇಳೆ ಯೋಗಗುರು ಶಿಶು ಮಂದಿರದ ವಿದ್ಯಾರ್ಥಿಗಳ ಜತೆ ಕೊಂಚ ಹೊತ್ತು ಕಾಲ ಕಳೆದರು. ವಿದ್ಯಾಕೇಂದ್ರದ ವಿವಿಧ ಭಾಗಗಳಿಗೆ ತೆರಳಿ ವೀಕ್ಷಿಸಿದರು.