ಬಸವರಾಜ್ ಬೊಮ್ಮಾಯಿ ನೂತನ ಸಿಎಂ: ಶಾಸಕ ಯತ್ನಾಳ ಪ್ರತಿಕ್ರಿಯೆ ಏನು ?
Team Udayavani, Jul 27, 2021, 8:45 PM IST
ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅವರನ್ನು ನೇಮಕ ಮಾಡಿರುವುದಕ್ಕೆ ನಮ್ಮ ಸಮ್ಮತಿ ಇದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದರು.
ಇಂದು ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಸಿಎಂ ಘೋಷಣೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಯತ್ನಾಳ, ನಮ್ಮ ವರಿಷ್ಠರು ಎಲ್ಲರ ಅಭಿಪ್ರಾಯ ಪಡೆದು ಸರ್ವಾನುಮತದಿಂದ ಬೊಮ್ಮಾಯಿ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿದ್ದಾರೆ. ನಮ್ಮ ಹೈ ಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ಬೊಮ್ಮಾಯಿ ಅವರ ನೇತೃತ್ವದಲ್ಲಿ ನಾವು ಕೆಲಸ ಮಾಡುತ್ತೇವೆ ಎಂದರು.
ಇನ್ನು ಬಸವರಾಜ್ ಪಾಟೀಲ್ ಯತ್ನಾಳ ಅವರು ಯಡಿಯೂರಪ್ಪ ಹಾಗೂ ಅವರ ಕುಟುಂಬದವರ ವಿರುದ್ಧ ಬಹಿರಂಗ ಕಾಳಗ ನಡೆಸಿದ್ದರು. ಸಿಎಂ ಬದಲಾವಣೆಗೆ ಪಟ್ಟು ಹಿಡಿದಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ