ಅನುಭವ ಮಂಟಪಕ್ಕೆ ಸಿಕ್ಕೀತೆ ಅನುದಾನ?

ಉಜಳಂಬಕ್ಕೆ ಸಿಎಂ ಬಂದಾಗ ಬಸವಕಲ್ಯಾಣಕ್ಕೆ ಕೊಡುಗೆ ನೀಡುವ ನಿರೀಕ್ಷೆ

Team Udayavani, Jun 15, 2019, 10:34 AM IST

15-June-6

ಬಸವಕಲ್ಯಾಣ: ನಗರದ ಹೊರವಲಯದಲ್ಲಿರುವ ಇಗಿನ ಅನುಭವ ಮಂಟಪ.

ವೀರಾರೆಡ್ಡಿ ಆರ್‌.ಎಸ್‌.
ಬಸವಕಲ್ಯಾಣ:
ಉಜಳಂಬ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಜೂ.27ರಂದು ಗ್ರಾಮ ವಾಸ್ತವ್ಯ ಮಾಡಲು ಆಗಮಿಸುತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶರಣರ ನಾಡು, ವಿಶ್ವಗುರು ಬಸವಣ್ಣನವರ ಕರ್ಮಭೂಮಿಯಾದ ಬಸವಕಲ್ಯಾಣಕ್ಕೆ ಏನಾದರೂ ಕೊಡುಗೆ ನೀಡಬಹುದಾ ಎಂಬ ನಿರೀಕ್ಷೆಯನ್ನು ಇಲ್ಲಿನ ಜನರು ಇಟ್ಟುಕೊಂಡಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ವಿವಿಧ ಪಕ್ಷಗಳ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಆಗಮಿಸಿ ಅನುಭವ ಮಂಟಪ ಕುರಿತು ನೀಡಲಾದ ಭರವಸೆಗಳನ್ನು ಇಂದಿಗೂ ಈಡೇರಿಸದೇ ಮರೆತು ಬಿಟ್ಟಿರುವುದು ಬಸವಾಭಿಮಾನಿಗಳು ಮತ್ತು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯ ನಾಯಕರು ತಮ್ಮ ಸ್ವಾರ್ಥಕ್ಕಾಗಿ ಅನುಭವ ಮಂಟಪಕ್ಕೆ ಆಗಮಿಸುತ್ತಾರೆ ವಿನಃ ನಿಸ್ವಾರ್ಥದಿಂದ ಸಮಾಜದಲ್ಲಿನ ತೊಡಕುಗಳನ್ನು ಹೋಗಲಾಡಿಸಲು ತಮ್ಮ ಪ್ರಾಣವನ್ನೆ ತ್ಯಾಗ ಮಾಡಿದ ಶರಣ-ಶರಣೆಯರ ಪವಿತ್ರ ಭೂಮಿ ಅಭಿವೃದ್ಧಿ ಮಾಡಲು ಅಲ್ಲ ಎಂಬುದು ಜನರ ಆರೋಪವಾಗಿದೆ.

ಈಗಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಸವಕಲ್ಯಾಣದ ಶರಣ ಕಮ್ಮಟ ಸಮಾರಂಭದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ನಾವು ಅಧಿಕಾರಕ್ಕೆ ಬಂದರೆ, ಅನುಭವ ಮಂಟಪದ ಸಮಗ್ರ ಅಭಿವೃದ್ಧಿ ಮಾಡಲಾಗುವುದು ಎಂಬ ಭರವಸೆ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು.

ಆದರೆ ಕುಮಾರಸ್ವಾಮಿ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ವರ್ಷ ಕಳೆಯುತ್ತ ಬಂದರೂ, ಅನುಭವ ಮಂಟಕ್ಕೆ ಭೇಟಿ ನೀಡದಿರುವುದು ಸಾಹಿತಿ, ಚಿಂತಕರು ಹಾಗೂ ಬಸವ ಭಕ್ತರಿಗೆ ಬೇಸರ ತರಿಸಿದೆ.

ನೂತನ ಅನುಭವ ಮಂಟಪ ನಿರ್ಮಾಣಕ್ಕಾಗಿ 650 ಕೋಟಿ ರೂ. ನೀಡುವುದಾಗಿ ರಾಜ್ಯದಲ್ಲಿ ಈ ಹಿಂದೆ ಇದ್ದ ಕಾಂಗ್ರೆಸ್‌ ಸರ್ಕಾರದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿರುವುದು ಎಲ್ಲರಿಗೆ ಗೊತ್ತಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೆ ಎರಡು ಬಾರಿ ಬಜೆಟ್ ಮಂಡಿಸಿದರೂ, ಅದರಲ್ಲಿ ಕೇವಲ 100 ಕೋಟಿ ರೂ. ಘೋಷಣೆ ಮಾಡಿದ್ದರು. ಘೋಷಣೆ ಮಾಡಲಾದ ಅನುದಾನದಲ್ಲಿ ಇಂದಿಗೂ ಒಂದು ಪೈಸೆ ಕೂಡ ಬಿಡುಗಡೆ ಮಾಡದಿರುವುದು ಎಲ್ಲರ ಮನಸ್ಸು ಕೆರಳಿಸುವಂತೆ ಮಾಡಿದೆ.

ವಿಶ್ವಕ್ಕೆ ಸಮಾನತೆ ಸಂದೇಶ ಸಾರಿದ ನೂತನ ಅನುಭವ ಮಂಟಪದ ಶಂಕು ಸ್ಥಾಪನೆಗೆ ಮತ್ತು ಶರಣರ ಸ್ಮಾರಕ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಅನುದಾನ ಘೋಷಣೆ ಮಾಡುತ್ತಾರೊ ಎಂಬುದನ್ನು ಕಾದು ನೋಡಬೇಕಾಗಿದೆ.

ಅನುಭವ ಮಂಟಪ ವೈಚಾರಿಕ ಜಗತ್ತಿನ, ಬೌದ್ಧಿಕ ಲೋಕದ ಹಾಗೂ ಭಾರತೀಯ ದಾರ್ಶನಿಕತೆಯ ಭಿತ್ತಿಯಾಗಿದೆ. ಶರಣ ಚಳವಳಿ, ವಚನ ಸಾಹಿತ್ಯ ಹಾಗೂ ಅನುಭವ ಮಂಟಪ ಕನ್ನಡ ಸಾಂಸ್ಕೃತಿಕತೆಯ ಅಸ್ಮಿತೆ ಯಾಗಿವೆ. ಇದರ ಪುನರ್‌ ನಿರ್ಮಾಣದಿಂದ ಶರಣರ ತಾತ್ವಿಕತೆಗೆ ಜಾಗತಿಕ ತತ್ವಶಾಸ್ತ್ರದಲ್ಲಿ ಹಾಗೂ ಬೌದ್ಧಿಕ ವಲಯದಲ್ಲಿ ಪ್ರಾಧಾನ್ನತೆ ಸಿಗುವ ಸಾಧ್ಯತೆ ಇದೆ. ಈ ಬಗೆಗೆ ಸರ್ಕಾರದ ಕಾಳಜಿ ಅಗತ್ಯ.
ಡಾ| ಭೀಮಾಶಂಕರ ಬಿರಾದಾರ್‌,
ಉಪನ್ಯಾಸಕರು

ನಿಯೋಜಿತ ಅನುಭವ ಮಂಟಪದ ಕಾರ್ಯ ಪೂರ್ಣಗೊಂಡರೆ, ಬಸವಕಲ್ಯಾಣಕ್ಕೆ ಅಂತಾರಾಷ್ಟ್ರೀಯ ಪ್ರವಾಸಿ ಕೇಂದ್ರದ ಮನ್ನಣೆ ದೊರೆಯುತ್ತದೆ. ನಮ್ಮ ಸರ್ಕಾರಗಳು ಅನುದಾನ ನೀಡುವ ವಾಗ್ಧಾನ ಪೂರೈಸುತ್ತವೆ ಎಂಬ ಆಶೆ ಈಗಲು ಇದೆ.
ದೇವೇಂದ್ರ ಬರಗಾಲೆ,
ಕಾರ್ಯದರ್ಶಿ ಲಿಗಾಡೆ ಪ್ರತಿಷ್ಠಾನ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.