ನಿರ್ವಹಣೆಯಿಲ್ಲದೇ ಬಾಲವನ ಪಾಳು

ಸಾರ್ವಜನಿಕರು ತಿರುಗಿ ನೋಡಲಾಗದ ಸ್ಥಿತಿ •ಖರ್ಚು ಮಾಡಿದ ಹಣ ನೀರಲ್ಲಿ ಹೋಮ

Team Udayavani, May 22, 2019, 11:04 AM IST

22-May-8

ಬಸವಕಲ್ಯಾಣ: ನಗರದ ಬಾಲವನದ ಹುಲ್ಲಿನ ಹಾಸಿಗೆ ನಿರ್ವಹಣೆ ಕೊರತೆಯಿಂದ ಸಂಪೂರ್ಣ ಒಣಗಿದೆ.

ಬಸವಕಲ್ಯಾಣ: ಸರ್ಕಾರದ ಲಕ್ಷಾಂತರ ರೂಪಾಯಿ ಖರ್ಚು ಮಾಡಿ, ನಗರದ ನುಲಿಯ ಚಂದಯ್ಯನವರ ಗವಿ ಪಕ್ಕದಲ್ಲಿ ನಿರ್ಮಿಸಲಾದ ಬಾಲ-ವನ ನಿರ್ವಹಣೆ ಕೊರತೆಯಿಂದ ಸಾರ್ವಜನಿಕರು ಮತ್ತು ಮಕ್ಕಳು ಅತ್ತ ತಿರುಗಿ ನೋಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ನಗರದಲ್ಲಿ ನರಸಭೆ ವ್ಯಾಪ್ತಿಗೆ ಒಳಪಡುವ ಬಹುತೇಕ ಉದ್ಯಾನಗಳು ಕೆಲವು ವರ್ಷಗಳ ಹಿಂದೆಯೇ ನಿರ್ವಹಣೆ ಇಲ್ಲದೆ ಹಾಳಾಗಿವೆ. ಮತ್ತೆ ಕೆಲವು ಅತಿಕ್ರಮಣಗೊಂಡು ಹಾಳಾಗಿರುವುದು ಒಂದುಕಡೆಯಾದರೆ, ಈಚೆಗೆ ಮಕ್ಕಳಿಗಾಗಿ ನಿರ್ಮಿಸಲಾದ ಬಾಲವನ ನಿರ್ವಹಣೆಗೆ ಅಧಿಕಾರಿಗಳು ನಿರ್ಲಕ್ಷ ತೋರಿರುವುದು ಆಕ್ರೋಷಕ್ಕೆ ಕಾರಣವಾಗಿದೆ.

ಗವಿ ಹಾಗೂ ಕೆರೆಯ ದಡದ ಹತ್ತಿರ ವಿಶಾಲ ಪ್ರದೇಶದಲ್ಲಿ ನಿರ್ಮಿಸಲಾದ ಬಾಲವನದಲ್ಲಿ ಸಾಕಷ್ಟು ಹಣ ಖರ್ಚು ಮಾಡಿ, ಆರಂಭದಲ್ಲಿ ಹುಲ್ಲಿನ ಹಾಸಿಗೆ, ಬಗೆ ಬಗೆಯ ಮರಗಳು, ಮಕ್ಕಳ ಆಟಿಕೆಗಳು, ಪ್ರತ್ಯೇಕ ಶೌಚಾಲಯ ಮತ್ತು ಕ್ಯಾಂಟೀನ್‌ ಕಟ್ಟಡ ವ್ಯವಸ್ಥೆ ಮಾಡಲಾಗಿತ್ತು.

ಆದರೆ ನೀರಿನ ಕೊರತೆಯೊ ಅಥವಾ ನಿರ್ಲಕ್ಷ್ಯವೊ ಬಾಲವನ ಸಧ್ಯ ಕಸದ ತೊಟ್ಟಿಯಾಗಿ ಕೇಳುವವರು, ಹೇಳವರು ಇಲ್ಲದಂತಾಗಿದೆ. ಪುಂಡ- ಪೋಕರಿಗಳ ಠಿಕಾಣಿ ಹೂಡುವ ಸ್ಥಳವಾಗಿರುವುದು ಮಾತ್ರ ಶೋಚನೀಯ ಸಂಗತಿಯಾಗಿದೆ.

ಇದರಿಂದ ಬಾಲವನದಲ್ಲಿ ಪ್ಲಾಸ್ಟಿಕ್‌ ಚೀಲಗಳು ಮತ್ತು ಬಾಟಲ್ಗಳ ಸೇರಿದಂತೆ ತ್ಯಾಜ್ಯದ ರಾಶಿ ಬಿದ್ದಿದೆ. ಇಲ್ಲಿಗೆ ಬಂದವರು ಮೂಗು ಮುಚ್ಚಿಕೊಂಡು ಹಿಂತಿರುಗಿ ಬರುವಂತ ವಾತವರಣ ನಿರ್ಮಾಣವಾದೆ ಎಂಬುದು ಸಾರ್ವಜನಿಕರ ಆರೋಪವಾಗಿವೆ. ಮಕ್ಕಳು ಮತ್ತು ಸಾರ್ವಜನಿಕರ ಆಕರ್ಷಣೆಗಾಗಿ ಬಾಲವನದಲ್ಲಿ ಈಗಾಗಲೇ ಅಳವಡಿಸಲಾದ ಕುರ್ಚಿಗಳು ಹಾಳಾಗಿವೆ. ಮಕ್ಕಳ ಆಟಿಕೆ ವಸ್ತುಗಳು ಮುರಿದು ಬಿದ್ದಿವೆ. ಮರಗಳು, ಹುಲ್ಲಿನ ಹಾಸಿಗೆ ಸಂಪೂರ್ಣ ಒಣಗಿ, ಯಾವ ವಸ್ತುಗಳೂ ಉಪಯೋಗಕ್ಕೆ ಬಾರದಂತಾಗಿವೆ. ಆದರೂ ಸಂಬಂಧ ಪಟ್ಟವರು ನಿರ್ವಹಣೆ ಮಾಡುವುದು ಹೋಗಲಿ, ಇರುವ ವಸ್ತುಗಳನ್ನೂ ಸಂರಕ್ಷಣೆ ಮಾಡಲು ಮುಂದಾಗುತ್ತಿಲ್ಲ. ಕನಿಷ್ಟ ಪ್ರವೇಶದ ಬಾಗಿಲಿಗೆ ಒಂದು ಕೀಲಿಯನ್ನು ಕೂಡ ಹಾಕದೇ ಹಾಗೇ ಬೀಡಲಾಗಿದೆ ಎಂಬುದು ಜನರ ಆರೋಪವಾಗಿದೆ.

ಪಾಳುಬಿದ್ದ ಕ್ಯಾಂಟಿನ್‌ ಕಟ್ಟಡ: ಬಾಲವನದಲ್ಲಿ ನಿರ್ಮಿಸಲಾದ ಕ್ಯಾಂಟಿನ್‌ ಕಟ್ಟಡ ನಿರ್ವಹಣೆ ಕೊರತೆಯಿಂದ ಸಂಪೂರ್ಣ ಪಾಳು ಬಿದ್ದಿದೆ. ಕೋಣೆಗಳ ಬಾಗಿಲು, ಕಿಡಕಿ ಮುರಿದು ಹಾಕಲಾಗಿದೆ. ವಿದ್ಯುತ್‌ ಬೋರ್ಡ್‌ ಜೋತು ಬಿದ್ದಿವೆ. ಕಬ್ಬಿಣ ಸರಳುಗಳು ಹಾಳಾಗಿವೆ.

ಸಾವಿರಾರು ರೂ. ಖರ್ಚು ಮಾಡಿ ನೆಟ್ಟಿದ್ದ ಮರಗಳು ಮತ್ತು ಹುಲ್ಲಿನ ಹಾಸಿಗೆ ಸಂಪೂರ್ಣ ಒಣಗಿ ಹೋಗಿದೆ. ಇದರಿಂದ ಸದಾ ಜನ ಇರುವ ವನ ಈಗ ಯಾರೂ ಇಲ್ಲದೆ ಬಿಕೋ ಎನ್ನುತ್ತಿದೆ. ಒಂದು ವೇಳೆ ಬಾಲವನದಲ್ಲಿ ನೀರಿನ ಕೊರತೆ ಎದುರಾದಲ್ಲಿ, ಕನಿಷ್ಟ ಇರುವ ವಸ್ತುಗಳು ಮತ್ತು ಕ್ಯಾಂಟಿನ್‌ ಕಟ್ಟಡವನ್ನಾದರೂ ಹಾಳಾಗದಂತೆ ನೋಡಿಕೊಳ್ಳಬೇಕು. ಇನ್ನೂ ಕೆಲವು ದಿನ ಹಾಗೇ ಬಿಟ್ಟರೆ, ಒಂದು ವಸ್ತುಕೂಡ ಕೆಲಸಕ್ಕೆ ಬರುವುದಿಲ್ಲ. ಆದ್ದರಿಂದ ಸಂಬಂಧಪಟ್ಟವರು ಇತ್ತ ಗಮನ ಹರಿಸಿ ಬಾಲವನ ನಿರ್ವಹಣೆ ಮಾಡಲು ಮುಂದಾಗಬೇಕಾಗಿದೆ.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.