ತೆಲಂಗಾಣದಲ್ಲಿ ಬಸವ ಭವನ ನಿರ್ಮಾಣ: ಸಂಸದ ಬಿ.ಬಿ. ಪಾಟೀಲ


Team Udayavani, Oct 13, 2019, 12:59 PM IST

13-October8

ಬಸವಕಲ್ಯಾಣ: ವಿಶ್ವಕ್ಕೆ ಸಮಾನತೆ ಹಕ್ಕು ನೀಡಿದ ಹಾಗೂ ದಾಸೋಹ ಪರಿಕಲ್ಪನೆ ತೋರಿಸಿಕೊಟ್ಟ ವಿಶ್ವಗುರು ಬಸವಣ್ಣನ ಭವನವನ್ನು ತೆಲಂಗಾಣದಲ್ಲಿ ನಿರ್ಮಿಸಲಾಗುವುದು ಎಂದು ಜಹೀರಾಬಾದ್‌ ಸಂಸದ ಬಿ.ಬಿ.ಪಾಟೀಲ ಹೇಳಿದರು.

ನಗರದ ಬಸವ ಮಹಾಮನೆ ಆವರಣದಲ್ಲಿ 18ನೇ ಕಲ್ಯಾಣ ಪರ್ವದ ಎರಡನೇ ದಿನವಾದ ಶನಿವಾರ ನಡೆದ ಧರ್ಮ ಚಿಂತನ ಗೋಷ್ಠಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈಗಾಗಲೇ ಒಂದು ಎಕರೆ ಸ್ಥಳ ಗುರುತಿಸಲಾಗಿದೆ. ಶೀಘ್ರವಾಗಿ ದಿನಾಂಕ ನಿಗದಿ ಪಡಿಸಿ ಎಲ್ಲರ ಸಮ್ಮುಖದಲ್ಲಿ ಭವನ ಉದ್ಘಾಟಿಸಲಾಗುವುದು ಎಂದು ಭರವಸೆ ನೀಡಿದರು.

ವಿಶ್ವಗುರು ಬಸವಣ್ಣನವರು ಹುಟ್ಟು ಹಾಕಿದ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಬೇಕು ಎಂದು ತೆಲಂಗಾಣ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಹೇಳಿದರು.

ನೇತೃತ್ವ ವಹಿಸಿದ್ದ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಪೀಠಾಧ್ಯಕ್ಷ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ವಿಶ್ವಗುರು ಬಸವಣ್ಣನ ತತ್ವ-ಆದರ್ಶಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಶ್ರೀ ಚನ್ನಬಸಲಿಂಗ ಪಟ್ಟದ್ದೇವರು ಅನುಭವ ಮಂಟಪ ನಿರ್ಮಾಣ ಮಾಡಿರುವುದು ಮತ್ತು ಲಿಂ. ಡಾ| ಮಾತೆ ಮಹಾದೇವಿ ಅವರು 108 ಅಡಿ ಬಸವಣ್ಣನ ಪುತ್ಥಳಿಯನ್ನು ಬಸವಕಲ್ಯಾಣದಲ್ಲಿ ನಿರ್ಮಾಣ ಮಾಡಿರುವುದನ್ನು ನಾವು ಎಂದಿಗೂ  ಮರೆಯುವಂತಿಲ್ಲ ಎಂದು ನುಡಿದರು.

ಜಗದ್ಗುರು ಮಾತೆ ಮಹಾದೇವಿ ಸಂಕಲ್ಪದಂತೆ ನಾವು ಮುಂದೆ ಹೋಗೋಣ. ನಮ್ಮ ಧರ್ಮಕ್ಕೆ ಜಯ ಸಿಕ್ಕೇ ಸಿಗುತ್ತದೆ. ಎಲ್ಲರ ಕನಸು ಕೆಲವೇ ದಿನಗಳಲ್ಲಿ ನನಸಾಗುತ್ತದೆ ಎಂದು ಭವಿಷ್ಯ ನುಡಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌. ಷಡಕ್ಷರಿ ಮಾತನಾಡಿ, 18 ವರ್ಷಗಳಿಂದ ಬಸವಕಲ್ಯಾಣದಲ್ಲಿ ಕಲ್ಯಾಣ ಪರ್ವ ಯಶಸ್ವಿಯಾಗಿ ನಡೆಯುತ್ತಿರುವುದು ಸಂತೋಷದ ವಿಷಯವಾಗಿದೆ. ಏಕೆಂದರೆ ಈ ಭೂಮಿಗೆ ಬಂದು ಒಂದು ವಚನ ಪಠಣ ಮಾಡಿದರೆ ಸಾಕು, ಸಂಚಲನ ಮೂಡಿದಂತಾಗುತ್ತದೆ ಎಂದರು.

ವಿಶ್ವಗುರು ಬಸವಣ್ಣನವರ ಚರಿತ್ರೆ ಪಠ್ಯಪುಸ್ತಕದಲ್ಲಿ ಸೇರಿಸಬೇಕು. ಯುವ ಶಕ್ತಿಯನ್ನು ಬಸವ ಶಕ್ತಿಯಲ್ಲಿ ತೊಡಗಿಸಿಕೊಳ್ಳಬೇಕು. ದೊಡ್ಡ ನಗರಗಳಲ್ಲಿ ಬಸವಣ್ಣನವರ ಮೂರ್ತಿ ಪ್ರತಿಷ್ಠಾಪಿಸುವ ಬದಲು, ಪ್ರತಿಯೊಂದು ಜಿಲ್ಲೆಯಲ್ಲಿ ಬೃಹತ್‌ ಮಟ್ಟದಲ್ಲಿ ಪುತ್ಥಳಿ
ನಿರ್ಮಾಣವಾಗಬೇಕು ಎಂದು ಹೇಳಿದರು.

ಜಗದೀಶಗೌಡ ಪಾಟೀಲ, ಜಗದ್ಗುರು ಶ್ರೀ ಚನ್ನಬಸವಾನಂದ ಸ್ವಾಮೀಜಿ ಮಾತನಾಡಿದರು. ಕೂಡಲ ಸಂಗಮ ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಶ್ರೀ ಜಗದ್ಗುರು ಮಾತೆ ಗಂಗಾದೇವಿ ಸಾನ್ನಿಧ್ಯ,
ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಸ್ವಾಮೀಜಿ ನೇತೃತ್ವ ವಹಿಸಿದ್ದರು.

ಬೆಂಗಳೂರು ಜಾಗತಿಕ ಲಿಂಗಾಯತ ಧರ್ಮ ಮಹಾ ಸಭಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಸ್‌.ಎಂ. ಜಾಮದಾರ, ಮಾಜಿ ಸಚಿವ ಎಂ.ಬಿ. ಪಾಟೀಲ, ಶಾಸಕ ಬಿ. ನಾರಾಯಣರಾವ್‌, ಕಾಂಗ್ರೆಸ್‌ ಮುಖಂಡ ಬಸವರಾಜ ಬುಳ್ಳಾ, ಕಲ್ಯಾಣ ಪರ್ವ ಕಾರ್ಯಾಧ್ಯಕ್ಷ ಹಾಗೂ ರಾಷ್ಟ್ರೀಯ ಬಸವ ದಳ ಅಧ್ಯಕ್ಷ ಬಸವರಾಜ ಧನ್ನೂರ, ಆನಂದ ದೇವಪ್ಪ, ಶಿವರಾಜ ನರಶೆಟ್ಟಿ, ಬಸವರಾಜ ಪಾಟೀಲ ಶಿವಪೂರ, ಶ್ರೀಕಾಂತ ಸ್ವಾಮಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.