ಬುದ್ಧ ಸಂದೇಶ ವಿಶ್ವಕ್ಕೆ ಮಾದರಿ: ಸಿದ್ಧರಾಮ ಶ್ರೀ

•ದುಶ್ಚಟಕ್ಕೆ ಬಲಿಯಾದ ಯುವಕರ ಸಮಯ ವ್ಯರ್ಥ•ಕಷ್ಟಪಟ್ಟು ಜ್ಞಾನ ಸಂಪಾದಿಸಿ ಸಂವಿಧಾನ ರಚಿಸಿದ ಡಾ|ಅಂಬೇಡ್ಕರ್‌

Team Udayavani, May 20, 2019, 4:28 PM IST

20-May-31

ಬಸವಕಲ್ಯಾಣ: ಸಸ್ತಾಪೂರ ಗ್ರಾಮದಲ್ಲಿ ನಡೆದ ಬುದ್ಧ ಜಯಂತಿ ಹಾಗೂ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಶ್ರೀ ಸಿದ್ಧರಾಮ ಬೆಲ್ದಾಳ ಶರಣರು ಮಾತನಾಡಿದರು.

ಬಸವಕಲ್ಯಾಣ: ಗೌತಮ ಬುದ್ಧ ವಿಶ್ವಕ್ಕೆ ಶಾಂತಿ ಸಂದೇಶ ಸಾರಿ ಹೋಗಿದ್ದಾರೆ. ಅವರ ಸಂದೇಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳುವುದು ತುಂಬಾ ಅವಶ್ಯವಾಗಿದೆ ಎಂದು ಶ್ರೀ ಸಿದ್ಧರಾಮ ಬೆಲ್ದಾಳ ಶರಣರು ಹೇಳಿದರು.

ಸಸ್ತಾಪೂರ ಗ್ರಾಮದಲ್ಲಿ ನಡೆದ ಗೌತಮ ಬುದ್ಧರ 2563ನೇ ಜಯಂತಿ ಹಾಗೂ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂದಿನ ಯುವಕರು ದುಶ್ಚಟಕ್ಕೆ ಬಲಿಯಾಗಿ ಸಮಯವನ್ನು ವ್ಯರ್ಥ ಮಾಡುತ್ತಿದ್ದಾರೆ. ಮದ್ಯಪಾನದಿಂದ ಜೀವನ ಹಾಳಾಗಿ, ಕುಟುಂಬವನ್ನೆ ಬೀದಿಪಾಲು ಮಾಡುವಂತಹ ಪ್ರಸಂಗಗಳು ನಡೆಯುತ್ತಿವೆ. ಪ್ರತಿಯೊಬ್ಬರು ಇದಕ್ಕೆ ಕಡಿವಾಣ ಹಾಕಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಡಾ|ಬಾಬಾಸಾಹೇಬ ಅಂಬೇಡ್ಕರ್‌ ಅವರು ಕಷ್ಟಪಟ್ಟು ಜ್ಞಾನ ಸಂಪಾದನೆ ಮಾಡಿ ತಮ್ಮ ಕುಟುಂಬದ ಬಗ್ಗೆ ಕಾಳಜಿ ವಹಿಸದೆ ಇಡೀ ದೇಶಕ್ಕಾಗಿ ಸಂವಿಧಾನ ಬರೆದಿದ್ದಾರೆ. ಪ್ರತಿಯೊಬ್ಬರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಒಂದು ವೇಳೆ ನಮ್ಮ ದೇಶದಲ್ಲಿ ಸಂವಿಧಾನ ಇರದಿದ್ದರೆ, ನಾವು ಯಾರೂ ಈ ಉನ್ನತ ಸ್ಥಾನದಲ್ಲಿ ಇರುತ್ತಿರಲಿಲ್ಲ. ಕೆಳಮಟ್ಟದಲ್ಲಿ ನಾವೆಲ್ಲರು ಕಷ್ಟದ ಜೀವನ ನಡೆಸ ಬೇಕಾಗುತ್ತಿತ್ತು. ಅಂಬೇಡ್ಕರ ಅವರ ಆಶೀರ್ವಾದದಿಂದ ಗ್ರಾಮ ಪಂಚಾಯಿತಿ ಮಟ್ಟದಿಂದ ಹಿಡಿದು ಶಾಸಕರು, ಸಂಸದರು ಪ್ರಧಾನಮಂತ್ರಿ ಆಗಲು ಅವಕಾಶಗಳಿವೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ನಾಲಂದಾ ಬುದ್ಧ ವಿಹಾರ ಟ್ರಸ್ಟ್‌ ಅಧ್ಯಕ್ಷ ಸಿಕಿಂದರ ಸಿಂಧೆ ಮಾತನಾಡಿ, ಬುದ್ಧರ ನೂತನ ಮೂರ್ತಿಯಯನ್ನು ಎಲ್ಲರ ಸಹಕಾರದಿಂದ ಥೈಲ್ಯಾಂಡ್‌ದಿಂದ ಸಸ್ತಾಪುರ ಗ್ರಾಮಕ್ಕೆ ತರಲಾಗಿದೆ. ಇಂತಹ ಒಳ್ಳೆಯ ಮೂರ್ತಿ ಪ್ರತಿಷ್ಠಾಪಿಸಲು ಸಮುದಾಯ ಭವನದ ಕೊರತೆಯಿದೆ. ಅದಕ್ಕಾಗಿ ಶಾಸಕರ ಅನುದಾನದಲ್ಲಿ ಭವನ ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.

ಉಮ್ಮಾಪುರ ಬೌದ್ದ್ಧ ಧಮ್ಮ ಪ್ರಚಾರಕ ಮಿಲಿಂದ ಗುರೂಜಿ ಮಾತನಾಡಿದರು. ಸಿಪಿಐ ಮಲ್ಲಿಕಾರ್ಜುನ ಯಾತನೂರ, ತಾಪಂ ಸದಸ್ಯ ಬಾಲಾಜಿರೆಡ್ಡಿ ಟೇಕಲೆ, ಇಸ್ಮಾಯಿಲ್ ಚಂಡಕಾಪುರೆ, ಗ್ರಾ.ಪಂ. ಉಪಾಧ್ಯಕ್ಷೆ ಉತ್ತಮ ಬಾಯಿ, ಆನಂದ ಗಾಯಕವಾಡ ಮತ್ತಿತರರು ಇದ್ದರು. ಸಹ ಶಿಕ್ಷಕ ದಿಲೀಪ ಗಾಯಕವಾಡ ಸ್ವಾಗತಿಸಿದರು. ರಾಜೇಶ್‌ ಗಾಯಕವಾಡ ನಿರೂಪಿಸಿದರು. ಧಮ್ಮಾನಂದ ಗಾಯಕವಾಡ ವಂದಿಸಿದರು.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.