ಬಾಗಿದ ವಿದ್ಯುತ್‌ ಕಂಬ; ಭಯದಲ್ಲೇ ಸಂಚಾರ

ಬಸವಕಲ್ಯಾಣ-ನಾರಾಯಣಪೂರ ರಸ್ತೆಯಲ್ಲಿ ಸಂಚಾರಕ್ಕೆ ಆತಂಕ

Team Udayavani, Jul 8, 2019, 1:22 PM IST

08-July-24

ಬಸವಕಲ್ಯಾಣ: ಹೊಲವೊಂದರಲ್ಲಿ ಬಾಗಿ ನಿಂತ ವಿದ್ಯುತ್‌ ಕಂಬಗಳು.

ಬಸವಕಲ್ಯಾಣ: ಬಸವಕಲ್ಯಾಣದಿಂದ ನಾರಾಯಣಪೂರಕ್ಕೆ ಹೋಗುವ ಪ್ರಮುಖ ರಸ್ತೆಯ ಎಡ-ಬಲ ಭಾಗದಲ್ಲಿ ಅಳವಡಿಸಲಾದ ವಿದ್ಯುತ್‌ ಕಂಬಗಳು ಬಾಗಿ ಈಗೋ-ಆಗೋ ಬೀಳುವ ಸ್ಥಿತಿಯಲ್ಲಿ ನಿಂತಿದ್ದು, ಈ ಮಾರ್ಗದಲ್ಲಿ ಬೈಕ್‌ ಸವಾರರು ಮತ್ತು ವಾಹನ ಚಾಲಕರು ಭಯದಲ್ಲಿ ಸಂಚರಿಸುವಂತಾಗಿದೆ.

ನಗರದಿಂದ ಅನತಿ ದೂರದಲ್ಲೇ ಇರುವ ಜಿಪಂ ಕ್ಷೇತ್ರವಾದ ನಾರಾಯಣಪೂರ ಗ್ರಾಮವು ವ್ಯವಹಾರಕ್ಕಾಗಿ ಸಂಪೂರ್ಣವಾಗಿ ಬಸವಕಲ್ಯಾಣದ ಮೇಲೆ ಅವಲಂಬಿತವಾಗಿದೆ. ಹೀಗಾಗಿ ನಸುಕಿನ ಸಮಯದಿಂದಲೇ ಗ್ರಾಮಸ್ಥರು ಒಂದಲ್ಲ ಒಂದು ಕೆಲಸಕ್ಕೆ ಸೈಕಲ್ ಮತ್ತು ವಾಹನಗಳ ಮೇಲೆ ಬಸವಕಲ್ಯಾಣಕ್ಕೆ ಓಡಾಡುವುದು ಸಾಮಾನ್ಯ. ಈ ರಸ್ತೆಯ ಮಾರ್ಗವಾಗಿ ಬೀದರ, ಹುಮನಾಬಾದ, ಘೋಡವಾಡಿ ಸೇರಿದಂತೆ ವಿವಿಧ ಗ್ರಾಮೀಣ ಪ್ರದೇಶಗಳಿಗೆ ನಿತ್ಯ ಸರ್ಕಾರಿ ಹಾಗೂ ಖಾಸಗಿ ಬಸ್‌ಗಳು ಸಂಚರಿಸುತ್ತವೆ.

ಬೆಳಗ್ಗೆ 8 ಗಂಟೆಗೆ ವಾಯು ವಿಹಾರಕ್ಕೆಂದು ನೂರಾರು ಜನ ಈ ರಸ್ತೆಗೆ ಬರುತ್ತಾರೆ. ನಾರಾಯಣಪೂರ ಸಮೀಪದ ಗೋಕುಳ, ಕಿಟ್ಟಾ, ಹುಲಗುತ್ತಿ ಗ್ರಾಮಗಳ ಚಿಕ್ಕ-ಚಿಕ್ಕ ಮಕ್ಕಳು ಮತ್ತು ವಿದ್ಯಾರ್ಥಿಗಳು ತುಂಬಿರುವ ಶಾಲಾ ವಾಹನಗಳು ಇಲ್ಲಿಂದಲೇ ಸಂಚರಿಸುತ್ತವೆ. ಆದರೆ ರಸ್ತೆಯ ಪಕ್ಕದ ಹೊಲದಲ್ಲಿ ಅಳವಡಿಸಲಾದ ವಿದ್ಯುತ್‌ ಕಂಬಗಳನ್ನು ನೋಡಿದರೆ ಯಾವಾಗ ಬಿಳುತ್ತವೊ ಎಂದು ಭಯವಾಗುತ್ತದೆ.

ಪೋಷಕರು ಮಕ್ಕಳನ್ನು ಬೈಕ್‌ ಮೇಲೆ ಕರೆದುಕೊಂಡು ಹೋಗುವಾಗ ಮತ್ತು ರೈತರು ಕೃಷಿ ಚಟುವಟಿಕೆ ಮಾಡುವಾಗ ವಿದ್ಯುತ್‌ ಕಂಬಗಳು ಮೈ ಮೇಲೆ ಬಿದ್ದು ಏನಾದರೂ ಅವಘಡ ಸಂಭವಿಸಬಹುದು ಎಂಬ ಆತಂಕದಲ್ಲಿ ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸುವ ಸ್ಥಿತಿ ನಿಮಾರ್ಣವಾಗಿದೆ.

ಮಳೆಗಾಲದಲ್ಲಿ ಭೂಮಿ ಹಸಿ ಹಿಡಿಯುವುದರಿಂದ ಕಂಬಗಳು ಯಾವಾಗಬೇಕಾದರೂ ಬೀಳುವ ಸಾಧ್ಯತೆ ಹೆಚ್ಚಾಗಿದೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಬಾಗಿದ ಕಂಬಗಳನ್ನು ದುರಸ್ಥಿ ಮಾಡುವ ಗೋಜಿಗೆ ಹೋಗುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪ.

ಅವಘಡ ಸಂಭವಿಸಿ, ಜೀವ ಹಾನಿ ಆಗುವುದಕ್ಕೆ ಮುನ್ನ ಸಂಬಂಧ ಪಟ್ಟ ಅಧಿಕಾರಿಗಳು ಬಾಗಿದ ವಿದ್ಯುತ್‌ ಕಂಬಗಳನ್ನು ದುರಸ್ಥಿ ಮಾಡಿ ಭಯದಲ್ಲಿ ತಿರುಗಾಡುವ ಸಾರ್ವಜನಿಕರು ಮತ್ತು ವಾಹನ ಚಾಲಕರಿಗೆ ಸಮಸ್ಯೆಯಿಂದ ಮುಕ್ತಿ ಗೊಳಿಸಬೇಕಾಗಿದೆ.

ಶಾಲಾ ವಾನಗಳು ಹಾಗೂ ನಿತ್ಯ ಸಾವಿರಾರು ಜನ ಓಡಾಡುವ ರಸ್ತೆ ಇದಾಗಿದೆ. ಹಾಗಾಗಿ ಅವಘಡ ಸಂಭವಿಸುವ ಮುನ್ನ ಸಂಬಂಧ ಪಟ್ಟ ಅಧಿಕಾರಿಗಳು ಬಾಗಿದ ವಿದ್ಯುತ್‌ ಕಂಬಗಳನ್ನು ದುರಸ್ಥಿ ಮಾಡಲು ಮುಂದಾಗಬೇಕು.
ಅನೀಲಕುಮಾರ ರಾಜಪೂತ,
ನಾರಾಯಣಪೂರ ನಿವಾಸಿ

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.