ನಾಡು-ನುಡಿಗಾಗಿ ಒಗ್ಗೂಡಿ ಹೋರಾಡೋಣ
ಹಾವಗಿಲಿಂಗೇಶ್ವರ ಮಠದ ಜಾತ್ರಾಮಹೋತ್ಸವ ಗಡಿಗೌಡಗಾಂವನಲ್ಲಿ ಯುವ ಸಾಹಿತ್ಯ ಸಮ್ಮೇಳನ
Team Udayavani, Apr 8, 2019, 3:20 PM IST
ಬಸವಕಲ್ಯಾಣ: ಹುಲಸೂರು ತಾಲೂಕಿನ ಗಡಿಗೌಡಗಾಂವ ಗ್ರಾಮದಲ್ಲಿ ನಡೆದ ಯುವ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಸಮ್ಮೇಳನಾಧ್ಯಕ್ಷ ವೀರಣ್ಣಾ ಮಂಠಾಳಕರ್ ದಂಪತಿಯನ್ನು ಸನ್ಮಾನಿಸಲಾಯಿತು.
ಬಸವಕಲ್ಯಾಣ: ನಾಡು-ನುಡಿ ವಿಷಯ ಬಂದಾಗ ಎಲ್ಲರೂ ಒಂದಾಗಿ ಹೋರಾಡಬೇಕು. ಆಗ ಮಾತ್ರ ಕನ್ನಡ ಉಳಿದು ಬೆಳೆಯಲು ಸಾಧ್ಯವಾಗುತ್ತದೆ ಎಂದು ಕಲಬುರಗಿಯ ಸಾಹಿತಿ ಡಾ| ಸುಜಾತಾ ಜಂಗಮಶೆಟ್ಟಿ ಹೇಳಿದರು.
ಹುಲಸೂರು ತಾಲೂಕಿನ ಗಡಿಗೌಡಗಾಂವ ಗ್ರಾಮದ ಹಾವಗಿಲಿಂಗೇಶ್ವರ ಮಠದ ಜಾತ್ರಾಮಹೋತ್ಸವ ಅಂಗವಾಗಿ ನಡೆದ ಯುವ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ
ಅವರು ಮಾತನಾಡಿದರು.
ಬೀದರ್ ಜಿಲ್ಲೆಯ ಭಾಲ್ಕಿ ಹಿರೇಮಠದಲ್ಲಿ ಹೊರಗಡೆ ಉರ್ದು ಬೋರ್ಡ್ ಹಾಕಿ ಒಳಗೆ ಕನ್ನಡ ಕಲಿಸಿದ ಕಿರ್ತಿ ಮಠಕ್ಕೆ ಸಲ್ಲುತ್ತದೆ. ಅಲ್ಲದೆ ಹುಲಸೂರು ಮಠದಲ್ಲಿ ಡಾ|ಶಿವಾನಂದ ಮಹಾಸ್ವಾಮಿಗಳು ಶಿವಶರಣರ ವಚನಗಳೊಂದಿಗೆ ಕನ್ನಡ ಸಾಹಿತ್ಯವನ್ನು ಕೂಡ ಪಾದಯಾತ್ರೆ ಮೂಲಕ ಪ್ರಚಾರ ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.
ಗಡಿಭಾಗದಲ್ಲಿ ಇಂತಹ ಸಮ್ಮೇಳನ ನಡೆಸುವ ಮೂಲಕ ಸಾಹಿತ್ಯ ಉಳಿಸಿ ಬೆಳೆಸುವ ಕಾರ್ಯವನ್ನು ಕಸಾಪ ಜಿಲ್ಲಾಧ್ಯಕ್ಷ ಸುರೇಶ
ಚನ್ನಶೆಟ್ಟಿ ಹಾಗೂ ಎಲ್ಲ ಸಾಹಿತಿಗಳ ಸಹಕಾರದಿಂದ ಮಾಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಅಭಿಪ್ರಾಯಪಟ್ಟರು.
ಸಾನ್ನಿಧ್ಯ ವಹಿಸಿದ್ದ ಗಡಿಗೌಡಗಾಂವ ಗ್ರಾಮದ ಶ್ರೀ ಹಾವಲಿಂಗೇಶ್ವರ ಮಠದ ಶ್ರೀ ಶಾಂತವೀರ ಶಿವಾಚಾರ್ಯ ಮಾತನಾಡಿ, ಪ್ರತಿ ಸಲ ಬೇರೆ ಬೇರೆ ಮಠಗಳಲ್ಲಿ ಸಮ್ಮೇಳನಗಳನ್ನು ನಡೆಸಲಾಗುತಿತ್ತು. ಆದರೆ ಈ ಬಾರಿ ಗಡಿಗೌಡಗಾಂವ ಮಠದಲ್ಲಿ 25
ವರ್ಷಗಳ ನಂತರ ಪ್ರಥಮ ಬಾರಿಗೆ ಕನ್ನಡ ಹಬ್ಬ ನಡೆಸುತ್ತಿರುವುದು ಸಂತೋಷದ ಸಂಗತಿಯಾಗಿದೆ ಎಂದು ನುಡಿದರು.
ಹುಲಸೂರಿನ ಶ್ರೀ ಗುರುಬಸವೇಶ್ವರ ಸಂಸ್ಥಾನ ಮಠದ ಡಾ| ಶಿವಾನಂದ ಮಹಾಸ್ವಾಮಿಗಳು ಮಾತನಾಡಿದರು. ತಾಲೂಕು ಕಸಾಪ ಅಧ್ಯಕ್ಷ ಡಾ| ರುದ್ರಮಣಿ ಮಠಪತಿ ಪ್ರಾಸ್ತಾವಿಕ
ಮಾತನಾಡಿದರು. ಗ್ರಾಪಂ ಅಧ್ಯಕ್ಷ ದತ್ತಾತ್ರಿ ರಾಘು, ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚೆನ್ನಶೆಟ್ಟಿ, ಅನೀಲ ತಾಂಬಳೆ, ಬಾಬುರಾವ್ ಪಾಟೀಲ, ಸಂಗಪ್ಪ ತಾಂಬಳೆ, ರೆವಣಸಿದ್ದ ಚಿಲ್ಲಾಬಟ್ಟೆ,
ರಾಜಕುಮಾರ ಪಾಲಾಪುರೆ, ಶ್ರೀ ಶಾಂತವೀರ ಶಿವಾಚಾರ್ಯ ಸ್ವಾಮಿ, ಉಪಾಧ್ಯಕ್ಷ ರಮೇಶ ಉಮ್ಮಾಪುರೆ, ಸಾಲಿವಾನ ಕಾಕನಾಳೆ,
ಕಲ್ಯಾಣರಾವ್ ಮದರಗಾಂವಕರ್, ಧನರಾಜ ರಾಜೋಳೆ, ಡಾ| ಭೀಮಾಶಂಕರ ಬಿರಾದಾರ, ದೇವಿಂದ್ರ ಬರಗಾಲೆ, ಕೆಜಿ ಶರಣಪ್ಪಾ, ಶಂಕರ ಕುಕ್ಕಾಪಾಟೀಲ ಇದ್ದರು. ಕಸಾಪ ಉಪಾಧ್ಯಕ್ಷ ರಮೇಶ ಉಮ್ಮಾಪುರೆ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ