ಚತುಷ್ಪಥ ಹೆದ್ದಾರಿಗೆ ಬಲಿಯಾದ ಸಾಲು ಮರಗಳು

ಹಚ್ಚುಹಸಿರಾಗಿದ್ದ ಮಾರ್ಗ ಈಗ ಬೋಳು

Team Udayavani, Jul 31, 2019, 10:22 AM IST

31-JUly-5

ಬಸವಕಲ್ಯಾಣ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಮರಗಳನ್ನು ಕಡಿದಿರುವುದರಿಂದ ಅಲ್ಲಿನ ಪರಿಸರ ಬೋಳಾಗಿದೆ.

ಬಸವಕಲ್ಯಾಣ: ನಗರದ ಬಂಗ್ಲಾ ಬಳಿ ಹಾದು ಹೋಗಿರುವ ಮುಂಬೈ-ಹೈದರಾಬಾದ ರಾಷ್ಟ್ರೀಯ ಹೆದ್ದಾರಿ-65ಅನ್ನು ಅಗಲೀಕರಿಸಿ, ಚತುಷ್ಪಥವಾಗಿ ಪರಿವರ್ತನೆ ಮಾಡಲಾಗಿದ್ದು, ಇದರಿಂದ ಹೆದ್ದಾರಿ ಪಕ್ಕದಲ್ಲಿ ಈ ಹಿಂದೆ ಇದ್ದ ನೂರಾರು ಮರಗಳನ್ನು ಕಡಿಯಲಾಗಿದೆ.

ಈಗ ಚತುಷ್ಪಥವಾಗಿರುವ ಹೆದ್ದಾರಿಯ ಎರಡೂ ಬದಿಯಲ್ಲಿ ನಾಲ್ಕೈದು ವರ್ಷಗಳ ಹಿಂದೆ ಬೃಹತ್‌ ಮರಗಳು ಹಚ್ಚು ಹಸಿರಿನಿಂದ ಕಂಗೊಳಿಸುತ್ತಿದ್ದವು. ಇಲ್ಲಿ ಕುಟುಂಬ ಸಮೇತ ಪ್ರಯಾಣಿಸುವವರಿಗೆ ಮತ್ತು ಪರಿಸರ ಪ್ರೇಮಿಗಳಿಗೆ ಇದು ಖುಷಿ ನೀಡುವ ತಾಣವಾಗಿತ್ತು. ಆದರೆ ಅಭಿವೃದ್ಧಿ ದೃಷ್ಟಿಯಿಂದ ಈ ಮರಗಳನ್ನು ಕಡಿಯುವುದು ಅನಿವಾರ್ಯವಾಗಿತ್ತಾದರೂ, ಉತ್ತಮ ಗಾಳಿ, ನೆರಳು ಹಾಗೂ ಫಲ ನೀಡುವ ನೂರಾರು ಮರಗಳನ್ನು ಕಡಿದಿರುವುದು ಪರಿಸರ ಪ್ರೇಮಿಗಳಿಗೆ ನೋವನ್ನುಂಟು ಮಾಡಿದೆ.

ಹೆದ್ದಾರಿ ಚತುಷ್ಪಥವಾಗಿರುವುದು ವಾಹನ ಚಾಲಕರು, ವ್ಯಾಪಾರಸ್ಥರಿಗೆ ಅನುಕೂಲವಾಗಿದ್ದರೆ, ಮರ ಕಡಿದಿರುವುದು ಪರಿಸರ ಪ್ರೇಮಿಗಳು ಮತ್ತು ರೈತರಿಗೆ ನೋವಿನ ಸಂಗತಿಯಾಗಿದೆ. ಹೀಗೆ ಹೆಚ್ಚುತ್ತಿರುವ ಜನಸಂಖ್ಯೆ ಹಿನ್ನೆಲೆಯಲ್ಲಿ ಅಭಿವೃದ್ಧಿಗಾಗಿ ಒಂದನ್ನು ಪಡೆದುಕೊಳ್ಳಲು ಇನ್ನೊಂದನ್ನು ಕಳೆದುಕೊಳ್ಳುವುದು ಅನಿವಾರ್ಯ ವಾಗಿದೆ.

ಈ ಮಾರ್ಗದಲ್ಲಿದ್ದ ಮರಗಳನ್ನು ಸಂಪೂರ್ಣ ಕಡಿದಿರುವುದರಿಂದ, ಇಲ್ಲಿ ಸಂಚರಿಸುವವರು ನೆರಳಿನಲ್ಲಿ ಕುಳಿತುಕೊಳ್ಳಬೇಕೆಂದರೆ ಒಂದು ಚಿಕ್ಕ ಮರ ಕೂಡ ಸಿಗದಂತಾಗಿದೆ. ಆದರೆ, ಹೆದ್ದಾರಿ ಚತುಷ್ಪಥವಾಗಿ ಪರಿವರ್ತನೆಯಾಗಿರುವುದರಿಂದ ಈ ಮಾರ್ಗದಲ್ಲಿ ಮುಂಬೈ ಹಾಗೂ ಹೈದ್ರಾಬಾದ್‌ ಪ್ರಯಾಣದ ಅವಧಿ ಕಡಿಮೆಯಾಗಿ ವಾಹನ ಚಾಲಕರಿಗೆ, ವ್ಯಾಪಾರಸ್ಥ ಪ್ರಯಾಣಿಕರಿಗೆ ಅನುಕೂಲವಾಗಿದೆ. ಅಲ್ಲದೇ ಏಕಮುಖ ಸಂಚಾರದಿಂದ ರಸ್ತೆ ಅಪಘಾತಗಳು ಕಡಿಮೆ ಯಾಗಿವೆ. ಸರಕು ಸಾಗಣೆಗೆ ಅನುಕೂಲವಾಗಿದ್ದು, ಹೆದ್ದಾರಿ ಬದಿಯಲ್ಲಿ ಅಂಗಡಿಗಳು ಹೆಚ್ಚಿ ವ್ಯಾಪಾರ ವಹಿವಾಟು ಹೆಚ್ಚುತ್ತಿವೆ.

ಆದರೆ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಮಧ್ಯದಲ್ಲಿ ಬರುವ ಗ್ರಾಮಗಳಲ್ಲಿ ಸೇತುವೆ ನಿರ್ಮಾಣದಿಂದ ಗ್ರಾಮಸ್ಥರ ವ್ಯಾಪಾರಕ್ಕೆ ಅಡಚಣೆಯಾಗುತ್ತದೆ. ರಸ್ತೆ ನಿರ್ಮಾಣಕ್ಕಾಗಿ ಫಲವತ್ತಾದ ಭೂಮಿ ವಶಕ್ಕೆ ಪಡೆದುಕೊಳ್ಳುವುದರಿಂದ ಕೃಷಿ ಚಟುವಟಿಕೆಗೆ ತೊಂದರೆಯಾಗಿ ರೈತರು ಸಮಸ್ಯೆ ಎದುರಿಸಬೇಕಾಗುತ್ತದೆ.

ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಈ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಮತ್ತೆ ಸಸಿಗಳನ್ನು ನೆಟ್ಟು ಸಂರಕ್ಷಿಸಿ ಈ ಹಿಂದೆ ಇದ್ದಂತೆ ಮರಗಳನ್ನು ಬೆಳೆಸುವುದು ತುಂಬಾ ಅವಶ್ಯವಾಗಿದೆ. ಇಲ್ಲದಿದ್ದರೆ ಇದೇ ರೀತಿ ಮರಗಳನ್ನು ಕಡಿಯುತ್ತಿದ್ದರೆ ಪರಿಸರದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.