ಶಾಲೆಯಿಂದ-ಶಾಲೆಗೆ ಶಿಕ್ಷಕರ ನಿಯೋಜಿಸದಿರಿ

ಶಿಥಿಲಾವಸ್ಥೆ ಶಾಲಾ ಕಟ್ಟಡ ತೆರವುಗೊಳಿಸಿ •ನೀರಿನ ಸಮಸ್ಯೆ ಇರುವಲ್ಲಿ ಶಾಶ್ವತ ಪರಿಹಾರ ಹುಡುಕಿ

Team Udayavani, Aug 7, 2019, 10:30 AM IST

7-Agust-4

ಬಸವಕಲ್ಯಾಣ: ನಗರದ ತಾಲೂಕು ಪಂಚಾಯತ್‌ ಕೆಡಿಪಿ ಸಭೆಯಲ್ಲಿ ಶಾಸಕ ಬಿ. ನಾರಾಯಣರಾವ್‌ ಮಾತನಾಡಿದರು.

ಬಸವಕಲ್ಯಾಣ: ಶಿಕ್ಷಕರನ್ನು ಶಾಲೆಯಿಂದ- ಶಾಲೆಗೆ ನಿಯೋಜನೆ ಮಾಡುವುದರಿಂದ ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತಿದೆ. ಹಾಗಾಗಿ ಶಿಕ್ಷಕರನ್ನು ಯಾವುದೇ ಕಾರಣಕ್ಕೂ ನಿಯೋಜನೆ ಮಾಡಬಾರದು ಎಂದು ಶಾಸಕ ಬಿ.ನಾರಾಯಣರಾವ್‌ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದಲ್ಲಿ ಮಂಗಳವಾರ ನಡೆದ ತಾಲೂಕು ಪಂಚಾಯತ್‌ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ನಿಯಮದ ಪ್ರಕಾರ ವರ್ಗಾವಣೆ ಆಗಲಿ, ಹೊರತು ನಿಮ್ಮ ಕಚೇರಿಯಿಂದ ಶಿಕ್ಷಕರನ್ನು ನಿಯೋಜನೆ ಮಾಡುವ ಕೆಲಸ ಆಗಬಾರದು ಎಂದರು.

ಕಳೆದ ವರ್ಷ ತಾಲೂಕಿನ ಎಸ್‌ಎಸ್‌ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.40 ಫಲಿತಾಂಶ ಬಂದಿದ್ದು, ಇದರ ಬಗ್ಗೆ ಶಿಕ್ಷಕರು ಹೆಚ್ಚು ಗಮನ ಹರಿಸಬೇಕು ಎಂದು ಸ್ಥಳದಲ್ಲಿದ್ದ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ತಾಲೂಕಿನಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಣೆಗಳನ್ನು ತೆರವುಗೊಳಿಸಿ, ಆಟಕ್ಕಾಗಿ ಸ್ಥಳ ಬಿಟ್ಟು ಉಜಳಂಬ ಗ್ರಾಮದ ಮಾದರಿಯಲ್ಲಿ ನೂತನ ಶಾಲಾ ಕಟ್ಟಡಗಳನ್ನು ನಿರ್ಮಿಸಬೇಕು ಎಂದು ಸಂಬಂಧ ಪಟ್ಟ ಗುತ್ತಿಗೆದಾರರಿಗೆ ಹೇಳಿದರು.

ತಾಲೂಕು ಪಂಚಾಯತ್‌ ವ್ಯವಸ್ಥಾಪಕ ಜಯಪ್ರಕಾಶ ಚವ್ಹಾಣ ಮಾತನಾಡಿ, ಟ್ಯಾಂಕರ್‌ಗಳಿಂದ ಗ್ರಾಮಗಳಿಗೆ ನೀರು ಸರಬರಾಜು ಮಾಡಿದ 28 ಲಕ್ಷ ರೂ. ಬಾಕಿ ಉಳಿದುಕೊಂಡಿದೆ ಎಂದು ಸಭೆಯ ಗಮನಕ್ಕೆ ತಂದಾಗ, ಶಾಸಕ ಬಿ.ನಾರಾಯಣರಾವ್‌ ಅವರು, ಟ್ಯಾಂಕರ್‌ನಿಂದ ನೀರು ಪೂರೈಸುವ ಗ್ರಾಮಗಳಲ್ಲಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕಿ. ಇದರಿಂದ ಸಾಕಷ್ಟು ಹಣ ಉಳಿಯುತ್ತದೆ ಎಂದರು.

ತಾಪಂ ಅಧ್ಯಕ್ಷೆ ಯಶೋಧಾ ನೀಲಕಂಠ ರಾಠೊಡ ಮಾತನಾಡಿ, ಅಧಿಕಾರಿಗಳು ಸಮಯ ಪಾಲನೆ ಮಾಡುವುದರ ಜೊತೆಗೆ, ಕಚೇರಿಗೆ ಸಮಸ್ಯೆ ಎಂದು ಬರುವ ಸಾರ್ವಜನಿಕರನ್ನು ಗೌರವ ದಿಂದ ಕಾಣಬೇಕು ಎಂದು ಸಲಹೆ ನೀಡಿದರು.

ಪಿಆರ್‌ಈ ಅಧಿಕಾರಿ ರಾಜಕುಮಾರ ಸಾಹುಕಾರ, ಎಚ್ಕೆಆರ್‌ಡಿಬಿ ಯೋಜನೆಯಡಿ 2015-18 ವರೆಗೆ ಕಾಮಗಾರಿ ಪೂರ್ಣಗೊಂಡಿದ್ದು, 2017-18ರ 77 ಕಾಮಗಾರಿ ಪೈಕಿ 71 ಮುಗಿಸಲಾಗಿದೆ. ಹಾಗೂ 2018-19ನೇ ಸಾಲಿನ ಒಟ್ಟು 125ರ ಪೈಕಿ 40 ಮುಗಿಸಲಾಗಿದೆ. 85 ಕಾಮಗಾರಿಗಳು ಚಾಲ್ತಿಯಲ್ಲಿವೆ ಎಂದು ಸಭೆಯ ಗಮನಕ್ಕೆ ತಂದರು. ನಂತರ ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಣ್ಣನಿರಾವರಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಯಿತು.

ಸ್ಥಾಯಿ ಸಮಿತಿ ಅಧ್ಯಕ್ಷ ಓಂಕಾರ ಪಾಟೀಲ ಮಾತನಾಡಿದರು. ತಾಪಂ ಉಪಾಧ್ಯಕ್ಷ ಸಂಗಮೇಶ ಬಿರಾದಾರ್‌, ಪ್ರಭಾರಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.