ಶರಣರ ಪರಂಪರೆ ಉಳಿಸಿದ ಹಾರಕೂಡ ಮಠ

ಡಾ|ಚೆನ್ನವೀರ ಶಿವಾಚಾರ್ಯರ 57ನೇ ಜನ್ಮದಿನಾಚರಣೆಯಲ್ಲಿ ಸಂಶೋಧಕ ಡಾ| ಸವದತ್ತಿಮಠ ಅಭಿಮತ

Team Udayavani, Nov 9, 2019, 11:39 AM IST

9-November-5

ಬಸವಕಲ್ಯಾಣ: ಹಾರಕೂಡ ಎಂಬ ಚಿಕ್ಕ ಗ್ರಾಮದ ಸಂಸ್ಥಾನ ಹಿರೇಮಠಕ್ಕೆ ಲಿಂ. ಚನ್ನಬಸವ ಶಿವಯೋಗಿಗಳ ನಂತರ ಕೀರ್ತಿ ತಂದವರು ದಾಸೋಹ ರತ್ನ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ|ಚೆನ್ನವೀರ ಶಿವಾಚಾರ್ಯರು ಎಂದು ಧಾರವಾಡದ ಸಂಶೋಧಕ, ಹಿರಿಯ ಸಾಹಿತಿ ಡಾ|ಸಂಗಮೇಶ ಸವದತ್ತಿಮಠ ಹೇಳಿದರು.

ಹಾರಕೂಡದ ಡಾ|ಚೆನ್ನವೀರ ಶಿವಾಚಾರ್ಯರ 57ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ಬಿಕೆಡಿಬಿ ಸಭಾಭವನದಲ್ಲಿ ನಡೆದ “ಸಾಹಿತ್ಯ ಚಿಂತನ ಸಮಾವೇಶ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

40 ವರ್ಷಗಳಿಂದ ಮಠದಲ್ಲಿ ನಡೆಯುವ ಪ್ರತಿಯೊಂದು ಚಟುವಟಿಕಗಳನ್ನು ನಾನು ನೋಡುತ್ತಾ ಬಂದಿದ್ದೇನೆ. ಮಠದಲ್ಲಿ ಹಿಂದೂ-ಮುಸ್ಲಿಂ ಹಾಗೂ ಕ್ರಿಶ್ಚಿಯನ್‌ ಎಂಬ ಭಾವನೆ ಇಲ್ಲದೆ ಪ್ರತಿಯೊಬ್ಬ ಕಲಾವಿದರು ಹಾರಕೂಡ ಮಠದಲ್ಲಿ ಜರುಗುವ ಧಾರ್ಮಿಕ ಮತ್ತು ಸಾಹಿತ್ಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಏಕೈಕ ಮಠ ಇದಾಗಿದೆ.

ಶ್ರೀಗಳು ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶ ಕಲಾವಿದರನ್ನು ಗುರುತಿಸಿ ಪ್ರತಿವರ್ಷ ಪ್ರಶಸ್ತಿ ನೀಡುತ್ತಿರುವುದು ಕಲಾವಿದರಲ್ಲಿ ಪ್ರೋತ್ಸಾಹ ಹಾಗೂ ಉಲ್ಲಾಸ ತರುವಂತೆ ಮಾಡಿದೆ ಎಂದರು.

ಡಾ| ಚೆನ್ನವೀರ ಶಿವಾಚಾರ್ಯರು ಶರಣ ಪರಂಪರೆ ಸಮನ್ವಯತೆ ಕಾಪಾಡಿಕೊಡು ಬರುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಹೀಗಾಗಿ ಮಠವನ್ನು ಭಕ್ತಾದಿಗಳು ಕೇವಲ ಧರ್ಮೋದ್ಧಾರಕ್ಕಾಗಿ ಸಿಮೀತ ಮಾಡದೆ ಸಮನ್ವಯಕ್ಕೆ ಮಹತ್ವ ನೀಡಬೇಕು. ಹಾಗೂ ಶ್ರೀಗಳ 60ನೇ ಜನ್ಮದಿನವನ್ನು ರಾಷ್ಟ್ರಮಟ್ಟದಲ್ಲಿ ಆಚರಿಸಬೇಕು. 60 ಪುಸ್ತಕಗಳು ಪ್ರಕಟಗೊಳ್ಳಬೇಕು.

ಹಾರಕೂಡ ಮಠದ ಗ್ರಂಥ ದತ್ತಿ ಸ್ಥಾಪನೆ ಆಗಬೇಕು ಎಂದರು. ಸಾನ್ನಿಧ್ಯ ವಹಿಸಿದ್ದ ಅನುಭವ ಮಂಟಪ ಅಧ್ಯಕ್ಷ ಡಾ| ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಹಾರಕೂಡ ಹಾಗೂ ಭಾಲ್ಕಿ ಮಠಗಳು ಜನಮುಖೀ ಮಠಗಳಾಗಿವೆ. ಮಠದಲ್ಲಿ ಪ್ರತಿವರ್ಷ ಸಾಹಿತ್ಯ, ಸಂಗೀತ, ಸಂಸ್ಕೃತ ಮತ್ತು ನಾಟಕದಲ್ಲಿ ಸಾಧನೆ ಮಾಡಿದ ಕಲಾವಿದರಿಗೆ ನೀಡುವ ಶ್ರೀಚೆನ್ನ ಪ್ರಶಸ್ತಿ ಕಲ್ಯಾಣ ಕರ್ನಾಟಕ ಅತಿ ದೊಡ್ಡ ಪ್ರಶಸ್ತಿಯಾಗಿದೆ ಎಂದು ಬಣ್ಣಿಸಿದರು.

ಶ್ವಗುರು ಬಸವಣ್ಣನವರ ಸಾರವನ್ನು ಮನಸ್ಸಿನಲ್ಲಿ ತುಂಬಿಕೊಂಡಿದ್ದು, ಬಸವ ಸಿದ್ಧಾಂತ ಬದುಕುವುದು ಎಂದರ್ಥ. ಹೀಗಾಗಿ ಹಾರಕೂಡ ಶ್ರೀಗಳು ಆ ದಾರಿಯಲ್ಲಿ ನಡೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು. ನಂತರ ತಹಶೀಲ್ದಾರ್‌ ಸಾವಿತ್ರಿ ಶರಣು ಸಲಗರ, ಶ್ರೀದೇವಿ ಖಂಡಾಳೆ, ಡಾ|ಗವಿಸಿದ್ಧಪ್ಪಾ ಪಾಟೀಲ, ಹಿರೆನಾಗಾಂವ ಗ್ರಾಮದ ಶ್ರೀ ಜಯಶಾಂತಲಿಂಗ ಮಹಾಸ್ವಾಮಿಗಳು ಶ್ರೀಗಳ ಕುರಿತು ಮಾತನಾಡಿದರು. ಜನ್ಮದಿನೋತ್ಸವ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಬಿ.ನಾರಾಯಣರಾವ್‌ ಅಧ್ಯಕ್ಷತೆ ವಹಿಸಿದ್ದರು.

ಶ್ರೀ ಗುರುಬಸವ ಪಟ್ಟದ್ದೇವರು, ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮುತ್ತಿಮೂಡ, ಜಿಪಂ ಸದಸ್ಯರಾದ ಆನಂದ ಪಾಟೀಲ, ಗುಂಡುರೆಡ್ಡಿ ಹಣಮಂತವಾಡಿ(ಆರ್‌), ಅಣ್ಣಾರಾವ್‌ ರಾಠೊಡ, ತಾಪಂ ಅಧ್ಯಕ್ಷೆ ಯಶೋಧಾ ನೀಲಕಂಠ ರಾಠೊಡ, ಬಾಬು ಹೊನ್ನಾನಾಯಕ, ಪ್ರದೀಪ ವಾತಡೆ, ಜಗನ್ನಾಥ ಪಾಟೀಲ, ಮನೋಜ ಮಾಶೆಟ್ಟಿ, ಸುನೀಲ ಪಾಟೀಲ ಹಾಗೂ ಸ್ವಾಗತ ಸಮಿತಿ ಚಂದ್ರಕಾಂತ ಸ್ವಾಮಿ ನಾರಾಯಣಪೂರ, ಪ್ರಭುಲಿಂಗಯ್ನಾ ಟಂಕಸಾಲಿಮಠ, ಡಿ.ಕೆ.ದಾವುದ್‌, ಮಲ್ಲಯ್ನಾ ಸ್ವಾಮಿ ಹಿರೇಮಠ, ಸಿದ್ರಾಮ ಗುದಗೆ, ಶಿವರಾಜ ನರಶೆಟ್ಟಿ, ಸೂರ್ಯಕಾಂತ ಮಠ, ಸಿದ್ರಾಮ ಕವಳೆ, ಡಾ|ಬಸವರಾಜ ಸ್ವಾಮಿ, ರಾಜಕುಮಾರ ದೇಗಾಂವ, ಪ್ರೊ| ರುದ್ರೇಶ್ವರಸ್ವಾಮಿ ಗೋರ್ಟಾ ಮತ್ತಿತರರು ಇದ್ದರು.

‘ಶ್ರೀಚೆನ್ನ ಸಂಭ್ರಮ’ ಪುಸ್ತಕ ಬಿಡುಗಡೆ: ಕಾರ್ಯಕ್ರಮದಲ್ಲಿ ಸರಸ್ವತಿ ಪಾಟೀಲ ಬರೆದ “ಶ್ರೀಚೆನ್ನ ಸಂಭ್ರಮ’ ಪುಸ್ತಕವನ್ನು ತಹಶೀಲ್ದಾರ್‌ ಸಾವಿತ್ರಿ ಶರಣು ಸಲಗರ ಬಿಡುಗೊಡೆಗೊಳಿಸಿದರು. ಮತ್ತು ಹಾರಕೂಡದ ದಿನದರ್ಶಿಕೆ ಬಿಡುಗಡೆ ಮಾಡಲಾಯಿತು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.