ಬಿಡಾಡಿ ದನಗಳಿಗೆ ರಸ್ತೆಯೇ ಕೊಟ್ಟಿಗೆ
ರಸ್ತೆಗಳ ಮಧ್ಯೆಯೇ ಠಿಕಾಣಿ •ಜನರು-ವಾಹನ ಚಾಲಕರಿಗೆ ನಿತ್ಯ ಕಿರಿಕಿರಿ
Team Udayavani, Sep 20, 2019, 2:48 PM IST
ಬಸವಕಲ್ಯಾಣ: ಬಸ್ ನಿಲ್ದಾಣಕ್ಕೆ ತೆರಳುವ ರಸ್ತೆ ಮಧ್ಯದಲ್ಲಿ ಠಿಕಾಣಿ ಹೂಡಿರುವ ದನಗಳು.
ಬಸವಕಲ್ಯಾಣ: ನಗರದ ಪ್ರಮುಖ ರಸ್ತೆಗಳ ಮಧ್ಯದಲ್ಲಿ ಬಿಡಾಡಿ ದನಗಳು ಬೀಡು ಬಿಡುವುದರಿಂದ ಸುಗಮ ಸಂಚಾರಕ್ಕೆ ತೊಂದರೆ ಆಗುತ್ತಿದೆ.
ಕೇಂದ್ರ ಬಸ್ ನಿಲ್ದಾಣ, ಮಹಾತ್ಮಗಾಂಧಿ ವೃತ್ತ, ಹರಳಯ್ಯ ವೃತ್ತ ಹಾಗೂ ತರಕಾರಿ ಅಂಗಡಿ ಸೇರಿದಂತೆ ನಗರದ ಜನ ಸಾಂದ್ರತೆ ಇರುವ ಸ್ಥಳಗಳಲ್ಲಿ ಬಿಡಾಡಿ ದನಗಳ ಹಿಂಡೆ ಠಿಕಾಣಿ ಕಾಣುತ್ತಿವೆ. ಇದರಿಂದ ನಗರದ ರಸ್ತೆಗಳು ಸಾರ್ವಜನಿಕರು ಓಡಾಡುವ ರಸ್ತೆಯೊ ಅಥವಾ ಕೊಟ್ಟಿಗೆಯೊ ಎಂಬುವುದು ತಿಳಿಯದಂತಾಗಿದೆ. ಇದರಿಂದ ಮಕ್ಕಳು, ವೃದ್ಧರು ಓಡಾಟ ಹಾಗೂ ವಾಹನ ಸಂಚಾರಕ್ಕೆ ಸಮಸ್ಯೆ ಎದುರಾಗಿದೆ.
ಪಾದಚಾರಿಗಳು ಹೋಗುವಾಗ ಹಾಗೂ ವಾಹನಗಳು ಸಂಚರಿಸುವಾಗ ದನಗಳು ಅಡ್ಡಲಾಗಿ ಬಂದು ನಿಲ್ಲುತ್ತಿವೆ. ಹೀಗಾಗಿ ಸಾರ್ವಜನಿಕರು ದನಗಳು ಮೈಮೇಲೆ ಬರಬಹುದು ಎಂಬ ಭಯದಲ್ಲಿ ಅವು ಸ್ಥಳದಿಂದ ಕದಲುವವರೆಗೂ ಕಾಯುವಂತಾಗಿದೆ.
ಒಂದು ವೇಳೆ ವೇಗವಾಗಿ ಹೋಗಲು ಪ್ರಯತ್ನಿಸಿದರೆ, ಅವಘಡಗಳು ಸಂಭವಿಸುವ ಸಾಧ್ಯತೆ ಇರುತ್ತದೆ. ಸಾರ್ವಜನಿಕರು ತರಕಾರಿ ಹಾಗೂ ದಿನಸಿ ವಸ್ತುಗಳು ಬೈಕ್ ಅಥವಾ ಆಟೋದಲ್ಲಿ ಬಿಟ್ಟು ಹೋದರೆ ಅವುಗಳನ್ನು ಚೆಲ್ಲಾಪಿಲ್ಲಿ ಮಾಡುವುದು ಜಾನುವಾರುಗಳ ನಿತ್ಯದ ಕಾಯಕವಾಗಿದೆ. ಇದು ಜನರ ಪಾಲಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.
ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ನಮಗೂ ಬಿಡಾಡಿ ದನಗಳಿಗೂ ಯಾವುದೇ ಸಂಬಂಧವಿಲ್ಲದಂತೆ ವರ್ತಿಸುತ್ತಿದ್ದಾರೆ ಎಂದು ನಾಗರಿಕರು ಆರೋಪಿಸಿದ್ದಾರೆ. ಬಿಡಾಡಿ ದನಗಳಿಂದ ನಗರದಲ್ಲಿ ಆಗುತ್ತಿರುವ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟವರು ಕೂಡಲೇ ಕ್ರಮ ಕೈಗೊಳ್ಳಬೇಕು ಅಥವಾ ಖಾಸಗಿ ವ್ಯಕ್ತಿಗಳ ದನಗಳ ಆಗಿದ್ದರೆ, ಅವರ ಗಮನಕ್ಕೆ ತಂದು ಅವುಗಳನ್ನು ಹೊರಗಡೆ ಬಿಡದಂತೆ ಎಚ್ಚರಿಕೆ ನೀಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ