ಮಹಿಳಾ ಪ್ರತಿಭೆಗೆ ಬೇಕು ಸಾಂಸ್ಕೃತಿಕ ಮಹತ್ವ: ಪ್ರೊ| ಮೀನಾಕ್ಷಿ

ಡಾ| ಜಯದೇವಿತಾಯಿ ಲಿಗಾಡೆ 107ನೇ ಜನ್ಮದಿನ

Team Udayavani, Jun 24, 2019, 3:55 PM IST

24-June-33

ಬಸವಕಲ್ಯಾಣ: ಸಂಕಲ್ಪ ವಿಜ್ಞಾನ ಕಾಲೇಜಿನಲ್ಲಿ ಡಾ| ಜಯದೇವಿತಾಯಿ ಲಿಗಾಡೆ ಅವರ 107ನೇ ಜನ್ಮದಿನಾಚರಣೆ ಹಾಗೂ ಉಪನ್ಯಾಸಕ ಕಾರ್ಯಕ್ರಮ ನಡೆಯಿತು.

ಬಸವಕಲ್ಯಾಣ: ಆತ್ಮವಿಶ್ವಾಸ ಮತ್ತು ಸ್ವಸಾಮರ್ಥ್ಯ ಮಹಿಳೆಯ ಅಸ್ತಿತ್ವದ ಪ್ರತೀಕವಾಗಿವೆ. ಸಾಂಸ್ಕೃತಿಕ ವಲಯದಲ್ಲಿ ಮಹಿಳಾ ಅಸ್ಮಿತೆಯ ಸಂಕಥನದ ಅಗತ್ಯವಿದೆ ಎಂದು ಬಸವಕಲ್ಯಾಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕಿ ಪ್ರೊ| ಮೀನಾಕ್ಷಿ ಬಿರಾದಾರ ಹೇಳಿದರು.

ನಗರದ ಸಂಕಲ್ಪ ವಿಜ್ಞಾನ ಕಾಲೇಜಿನಲ್ಲಿ ರವಿವಾರ ನಡೆದ ಡಾ| ಜಯದೇವಿತಾಯಿ ಲಿಗಾಡೆ ಅವರ 107ನೇ ಜನ್ಮದಿನ ಹಾಗೂ ಡಾ| ಜಯದೇವಿತಾಯಿ ಲಿಗಾಡೆ ಪ್ರತಿಷ್ಠಾನದ 40ನೇ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಮಹಿಳೆ ಮತ್ತು ಸಂವಿಧಾನ’ ಕುರಿತು ಅವರು ಮಾತನಾಡಿದರು.

ಮಹಿಳೆ ಸಾಮಾಜಿಕ ಹೇರಿಕೆಗಳಿಂದ ಮತ್ತು ಶೋಷಣೆಗಳಿಂದ ಹಿಂಜರಿಕೆ ಅನುಭವಿಸಿ ತನ್ನನು ತಾನು ಮಾನಸಿಕ ದೌರ್ಬಲ್ಯಳಾಗಿಸಿಕೊಂಡಿದ್ದಾಳೆ. ಮಹಿಳೆಯ ಪ್ರತಿಭೆಗೆ ಮಹತ್ವ ನೀಡುವ ಸಾಂಸ್ಕೃತಿಕ ವಲಯದ ಅಗತ್ಯವಿದೆ.

ಸಂವಿಧಾನದಿಂದ ದೊರೆತ ಅನೇಕ ನಿಯಮಗಳನ್ನು ಮಹಿಳೆ ತನ್ನ ಸಾಧನೆಯ ದಾರಿಯಾಗಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಮಹಿಳೆಗೂ ಕಾನೂನು ಪ್ರಜ್ಞೆಯ ಅಗ್ಯವಿದೆ ಎಂದರು.

ಮಹಿಳೆ ಮತ್ತು ಸಂವಿಧಾನ ಕುರಿತು ಕವಿ ಚೆನ್ನಬಸವ ಕೋಹಿನೂರ ಉಪನ್ಯಾಸ ನೀಡಿ, ಮಹಿಳೆಗೆ ಆರ್ಥಿಕ, ಸಾಮಾಜಿಕ, ರಾಜಕಿಯ, ಸಾಂಸ್ಕೃತಿಕ ಸಮಾನತೆ ಮತ್ತು ಅವಕಾಶವನ್ನು ನೀಡಿದ ಭಾರತೀಯ ಸಂವಿಧಾನವು ಬಹುದೊಡ್ಡ ಸ್ತ್ರೀವಾದವನ್ನು ಪ್ರತಿಪಾದಿಸುತ್ತದೆ ಎಂದರು.

ಬಸವಣ್ಣ ಮತ್ತು ಅಂಬೇಡ್ಕರರು ಮಹಿಳೆಯ ಸಾಂಸ್ಕೃತಿಕ ಅಸ್ತಿತ್ವ, ಸ್ವಾತಂತ್ರ್ಯ ಮತ್ತು ಸಾಮಾನತೆಯ ಬಗೆಗೆ ಆಲೋಚಿಸಿದ ಭಾರತದ ಸ್ತ್ರೀವಾದಿ ಚಿಂತಕರಾಗಿದ್ದಾರೆ. ಈ ನೆಲದ ಮಹತ್ವದ ಸಾಂಸ್ಕೃತಿಕ ಚಿಂತಕರಾದ ಬಸವಣನವರು ಮಹಿಳೆಗೆ ಸಾಮಾಜಿಕ ಸಮಾನತೆ ಒದಗಿಸುವ ಕನಸಿನಿಂದ, ಅನುಭವ ಮಂಟಪದ ಮೂಲಕ ಹಾಗೂ ಅಂಬೇಡ್ಕರರು ಸಂವಿಧಾನದ ಮೂಲಕ ಮಹಿಳಾ ಸ್ವಾತಂತ್ರ್ಯ, ಸಮಾನತೆ ಅನುಷ್ಠಾನಗೊಳಿಸಿದ ಇವರಿಬ್ಬರೂ ಭಾರತದ ಮಹತ್ವದ ಸ್ತ್ರೀವಾದಿ ಚಿಂತಕರಾಗಿದಾರೆ ಎಂದರು.

ಹುಲಸೂರು ಸರ್ಕಾರಿ ಪದವಿ ಕಾಲೇಜು ಪ್ರಾಚಾರ್ಯ ಪ್ರೊ| ಬಸವರಾಜ ಮೈಲಾರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭಾರತೀಯ ಚಾರಿತ್ರಿಕ ಮತ್ತು ಸಾಂಸ್ಕೃತಿಕ ಲೋಕದಲ್ಲಿ ಮಹಿಳೆಯರ ಕೊಡುಗೆ ಅನನ್ಯವಾದದ್ದು. ದೇಶ-ಕಾಲದ ಮತ್ತು ಸಾಮಾಜಿಕ ಸಂದರ್ಭದ ಬಿಕ್ಕಟ್ಟುಗಳನ್ನು ಮೀರಿ ಮಹಿಳೆಯರು ಮಹತ್ವದ ಸಾಧನೆ ಮಾಡಿದ್ದಾರೆ. ಭಾರತೀಯ ಸಂವಿಧಾನವು ಸಮಾನತೆ, ಸಮಾನ ಕೆಲಸ-ವೇತನ, ಮಹಿಳೆಯರಿಗೆ ವಿಶೇಷ ಹಕ್ಕು, ಚುನಾವಣಾ ಮೀಸಲಾತಿ ಮೊದಲಾದ ಅಂಶಗಳನ್ನು ಒಳಗೊಂಡಿದೆ. ಹೆಣ್ಣು ಭ್ರೂಣ ಹತ್ಯೆ, ಲೈಂಗಿಕ ದೌರ್ಜನ್ಯ, ವರದಕ್ಷಿಣೆ ಪಿಡುಗು, ನಿಂದನೆಗೆ ನೈತಿಕವಾಗಿ, ಸಮಾಜಿಕವಾಗಿ ಹಾಗೂ ಸಂವಿಧಾನಾತ್ಮಕವಾಗಿ ನಿಷೇಧವಿದೆ ಎಂದರು.

ಕಲಬುರಗಿಯ ಎನ್‌.ವಿ. ಕಾಲೇಜಿನ ಅಧ್ಯಾಪಕ ಡಾ|ಶಿವಾಜಿ ಮೇತ್ರೆ ಮಾತನಾಡಿ, ಬಸವಣ್ಣನವರ ಹಾಗೂ ಗಾಂಧೀಜಿಯವರ ತತ್ವವನ್ನೇ ಬದುಕಾಗಿಸಿಕೊಂಡ ಡಾ| ಜಯದೇವಿತಾಯಿ ಲಿಗಾಡೆ ಅವರು ಸ್ವಾತಂತ್ರ್ಯ ಚಳವಳಿ ಹಾಗೂ ಕರ್ನಾಟಕ ಏಕೀಕರಣ ಎರಡರಲ್ಲೂ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಮಹಿಳಾ ವಾದವನ್ನು ಕ್ರಿಯಾತ್ಮಕವಾಗಿಸಿದ ಶ್ರೇಯಸ್ಸು ಲಿಗಾಡೆತಾಯಿ ಅವರಿಗೆ ಸಲ್ಲುತದೆ ಎಂದರು.

ಕಾಲೇಜಿನ ಪ್ರಾಚಾರ್ಯ ವೇದಪ್ರಕಾಶ ಹುಲಸೂರಕರ್‌ ಅಧ್ಯಕ್ಷತೆ ವಹಿಸಿದ್ದರು. ಡಾ|ಭೀಮಾಶಂಕರ ಬಿರಾದಾರ ಪ್ರಾಸ್ತಾವಿಕ ಮಾತನಾಡಿದರು. ಪ್ರೊ| ಟಿ.ರಘುಪ್ರಸಾದ, ಹನುಮಂತರಾವ್‌ ವಿಸಾಜಿ, ಬಕ್ಕಯ್ಯ ಸ್ವಾಮಿ, ನಾಗಪ್ಪ ನಿಣ್ಣೆ, ಹರೀಶ ಕೋಹಿನೂರ, ವೈಶಾಲಿ ನಾಗರಾಳೆ, ಪ್ರಸಾದ ದೀಕ್ಷಿತ್‌ ಪ್ರಣಿತಾ ಕರಾಡೆ, ಮಹಾಂತೇಶ ಅಜೂರ, ತಸ್ಮಿಮ್‌ ಮಲಂಗ್‌, ಬಬಿತಾ ಬಿರಾದಾರ್‌ ಇದ್ದರು. ಪ್ರತಿಷ್ಠಾನದ ಕಾರ್ಯದರ್ಶಿ ದೇವೇಂದ್ರ ಬರಗಾಲೆ ಸ್ವಾಗತಿಸಿದರು. ಅಂಬರೀಶ ಬಿಮಾಣೆ ನಿರೂಪಿಸಿದರು. ಪ್ರತಿಷ್ಠಾನ ಅಧ್ಯಕ್ಷ ಎಸ್‌.ಜಿ.ಹುಡೇದ್‌ ವಂದಿಸಿದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.