ದೊಡ್ದಾಟದ ಹುಲಿಗೆ ರಂಗ ಪ್ರಶಸಿ

ಹಿರಿಯ ಜೀವಿಗೆ ನಾಟಕ ಅಕಾಡೆಮಿ ಪ್ರಶಸ್ತಿ ಗರಿ„"ಗಿರಿಜಾ ಕಲ್ಯಾಣ'ದ ಪರಿಣತ ಗುರುನಾಥ ಕೋಟೆಗೆ ಗೌರವ

Team Udayavani, Jan 6, 2020, 12:13 PM IST

6-Jnauary-5

ಬೀದರ: ವೃತ್ತಿಯಲ್ಲಿ ಕೃಷಿಕ- ಶಿಕ್ಷಕರಾಗಿ ಬದುಕಿನುದ್ದಕ್ಕೂ ರಂಗ ಕಲೆಯನ್ನು ಪ್ರವೃತ್ತಿಯನ್ನಾಗಿ ಮೈಗೂಡಿಸಿಕೊಂಡಿರುವ ಜಿಲ್ಲೆಯ ಹಿರಿಯ ಜೀವಿ ಗುರುನಾಥ ಕೋಟೆ ಅವರಿಗೆ ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ರಂಗ ಪ್ರಶಸ್ತಿ ಸಂದಿದೆ.

ದೊಡ್ಡಾಟದ “ಹುಲಿ’ ಎಂದೇ ಗುರುತಿಸಿಕೊಂಡಿರುವ ಕೋಟೆ, ಇಳಿ ವಯಸ್ಸಿನಲ್ಲೂ ದೊಡ್ಡಾಟ ಆಡಿಸುವ ಆಕಾಂಕ್ಷೆ ಹೊಂದಿದ್ದಾರೆ. ಔರಾದ ತಾಲೂಕಿನ ಜೀರ್ಗಾ(ಬಿ) ಗ್ರಾಮದ ಗುರುನಾಥ ಕೋಟೆ ದೊಡ್ಡಾಟದ ರಂಗ ಕಲೆ ಮೂಲಕ ಗ್ರಾಮದ ಖ್ಯಾತಿಯನ್ನು ರಾಜ್ಯಕ್ಕೆ ಬಿತ್ತರಿಸಿದ್ದಾರೆ. 16 ವರ್ಷದ ಬಾಲಕನಾಗಿದ್ದಾಗಲೇ ಕಲೆಯ ಅಭಿರುಚಿ ಬೆಳೆಸಿಕೊಂಡು ಬಂದಿರುವ ಕೋಟೆ, ಹಲವು ದಶಕಗಳಿಂದ ದೊಡ್ಡಾಟ ಆಡುತ್ತಾ, ತಂಡಗಳಿಗೆ ಆಡಿಸುತ್ತ ರಂಗಭೂಮಿಯನ್ನೇ ತಮ್ಮ ಉಸಿರಾಗಿಸಿಕೊಂಡಿದ್ದಾರೆ. 86 ವರ್ಷದ ಹಿರಿಯ ಜೀವಿಗೆ ಕಲೆ ಆಸಕ್ತಿ ಮಾತ್ರ ಕಡಿಮೆಯಾಗಿಲ್ಲ ಎಂಬುದು ವಿಶೇಷ.

ವೃತ್ತಿಯಿಂದ ರೈತರಾಗಿರುವ ಗುರುನಾಥ ಶಿಕ್ಷಕರಾಗಿಯೂ ಕೆಲಸ ಮಾಡಿದ್ದಾರೆ. ನಂತರ ಅವರನ್ನು ಸೆಳೆದದ್ದು ದೊಡ್ಡಾಟ. ಗ್ರಾಮದಲ್ಲಿ ನಡೆಯುತ್ತಿದ್ದ ದೊಡ್ಡಾಟ ವೀಕ್ಷಣೆಯಿಂದ ಆಸಕ್ತಿ ಬೆಳೆಸಿಕೊಂಡ ಅವರು, ನಂತರ ತಾವೇ ನಾಟಕಗಳಲ್ಲಿ ಅಭಿನಯಿಸುತ್ತ ಬಂದು, ತದನಂತರ ತಾವೇ ಆಡಿಸುತ್ತಾ (ನಿರ್ದೇಶನ) ಕಲೆಯನ್ನು ಬೆಳೆಸಿಕೊಂಡು ಬಂದಿದ್ದಾರೆ. ರಂಗ ಪ್ರಯೋಗಕ್ಕಾಗಿ ತಮ್ಮೂರಲ್ಲಿ ಹಿಂದೆ ದೊಡ್ಡಾಟದ ಒಂದು ಪಡೆಯನ್ನೂ ತಯಾರಿಸಿರುವುದು ವಿಶೇಷ.

“ಗಿರಿಜಾ ಕಲ್ಯಾಣ’ ಸವಾಲು: ದೊಡ್ಡಾಟದಲ್ಲಿ “ಗಿರಿಜಾ ಕಲ್ಯಾಣ’ ಪ್ರಯೋಗಕ್ಕೆ ಹೆಚ್ಚು ಒಲವು ಹೊಂದಿದ್ದಾರೆ. ದಕ್ಷಬ್ರಹ್ಮ, ಶಂಭುಕಾಸುರ ಮತ್ತು ದೈತ್ಯ ಎಂಬ ಮೂರು ದೊಡ್ಡಾಟಗಳನ್ನು ಆಡಿಸುವುದರಲ್ಲಿ ಪರಿಣತಿ ಹೊಂದಿದ್ದಾರೆ. ಅನ್ಯಾಯ, ದೌರ್ಜನ್ಯದ ಪ್ರತೀಕವಾಗಿರುವ ಅಸುರನನ್ನು ಸಂಹರಿಸುವ ಮೂಲಕ ಸತ್ಯ, ನ್ಯಾಯಕ್ಕೆ ಅಂತಿಮ ಜಯ ಎಂಬುದು ಈ ನಾಟಕದ ಕಥಾ ಹಂದರ. ಈ ದೊಡ್ಡಾಟ ಆಡಿಸುವುದು ಅಷ್ಟು ಸುಲಭದ ಕೆಲಸವಲ್ಲ. ಇದಕ್ಕಾಗಿ ಸುಮಾರು 25 ಕಲಾವಿದರ ತಂಡ, ಏಳೆಂಟು ತಿಂಗಳ
ಸಿದ್ಧತೆ ಬೇಕು. ಸಂಭಾಷಣೆಗಳನ್ನು ಹೇಳಲು ಗಟ್ಟಿ ಧ್ವನಿ ಇರಬೇಕು. ಅಷ್ಟು ದಿನ ಕಾಲ ಧ್ವನಿ ಕೆಡದಂತೆ ಎಣ್ಣೆ ಮತ್ತಿರ ಆಹಾರ ಸೇವನೆ ಬಿಡಬೇಕಾಗುತ್ತದೆ.

ಯಕ್ಷಗಾನದ ಪ್ರತಿರೂಪದಂತಿರುವ ದೊಡ್ಡಾಟ ಇಂದು ಸಾಗರದಾಚೆ ತನ್ನ
ಪ್ರಯೋಗಗಳನ್ನು ಮಾಡಬೇಕಿತ್ತು. ಆದರೆ, ಪ್ರೋತ್ಸಾಹದ ಕೊರತೆಯಿಂದ ಕಲೆ ಸಂಪೂರ್ಣ ನಶಿಸಿ ಹೋಗಿದೆ. ದೊಡ್ಡಾಟ ಆಡಿಸುವವರು, ಆಡುವವರು ಇಲ್ಲ. ಹಿಂದೆ ತಂಡಗಳನ್ನು ಕಟ್ಟಿ ಗ್ರಾಮಗಳಲ್ಲಿ, ಜಿಲ್ಲಾ ಕೇಂದ್ರ ಬೀದರನಲ್ಲಿ ಪ್ರಯೋಗ ಮಾಡಿದ್ದೇನೆ. ಕಲೆಯನ್ನು ಜೀವಂತವಾಗಿಡಲು ಸರ್ಕಾರ, ಅಕಾಡೆಮಿಗಳ ಮುಂದೆ ಸಾಕಷ್ಟು ಕಾಡಿಬೇಡಿದ್ದರೂ ಫಲ ಸಿಗಲಿಲ್ಲ. ದೊಡ್ಡಾಟ ಆಡಿಸಲು ಆಸಕ್ತಿವುಳ್ಳವರಿಗೆ ತರಬೇತಿ ನೀಡಲು ನಾನು ಸಿದ್ಧನಿದ್ದರೂ ಯಾರೂ ಸಹ ಮುಂದೆ ಬರಲಿಲ್ಲ ಎಂದು ಬೇಸರ ವ್ಯಕ್ತಪಡಿಸುತ್ತಾರೆ ಗುರುನಾಥ ಕೋಟೆ.

2006ರಲ್ಲಿ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಪ್ರಶಸ್ತಿಗೆ
ಭಾಜನರಾಗಿರುವ ಗುರುನಾಥ ಅವರಿಗೆ ಹಲವು ಪ್ರಶಸ್ತಿ, ಸಮ್ಮಾನಗಳು ಸಿಕ್ಕಿವೆ.
ಎಲೆಮರೆ ಕಾಯಿಯಂತೆ ದುಡಿಯವ ಇವರಿಗೆ ಈಗ ಪ್ರಸಕ್ತ ವರ್ಷದ ನಾಟಕ ಅಕಾಡೆಮಿಯ ವಾರ್ಷಿಕ ರಂಗ ಪ್ರಶಸ್ತಿ ಹುಡುಕಿಕೊಂಡು ಬಂದಿದೆ. ಪ್ರಶಸ್ತಿಯು
50 ಸಾವಿರ ರೂ. ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.