ತರಕಾರಿ ತವೂರೂರಾಯ್ತು ಕಲ್ಲುಗುಡ್ಡೆ


Team Udayavani, Aug 24, 2019, 2:49 PM IST

24-April-27

ಸಿದ್ಧನಹಳ್ಳಿಯಲ್ಲಿ ಪ್ರವಾಹದಿಂದ ಹೊಲಗಳಲ್ಲಿ ಕಲ್ಲು ತುಂಬಿ ಗುಡ್ಡದಂತಾಗಿವೆ.

ಭೈರೋಬಾ ಕಾಂಬಳೆ
ಬೆಳಗಾವಿ:
ಬಳ್ಳಾರಿ ನಾಲಾದಲ್ಲಿ ಹಿಂದೆಂದೂ ಕಂಡು ಕೇಳರಿಯದಷ್ಟು ನೀರು ಬಂದು ಸುತ್ತಲಿನ ಕೃಷಿ ಜಮೀನುಗಳನ್ನೇ ನುಂಗಿದೆ. ಜಮೀನುಗಳಿಗೆ ನುಗ್ಗಿದ ಪ್ರವಾಹದ ನೀರಿನಿಂದ ತರಕಾರಿಯ ತವರೂರು ಎಂದೇ ಪ್ರಸಿದ್ಧಿಯಾದ ಸಿದ್ಧನಹಳ್ಳಿಯ ಹೊಲಗಳಲ್ಲಿ ರಾಶಿ ರಾಶಿ ಕಲ್ಲುಗಳು ಬಿದ್ದು ಗುಡ್ಡ ನಿರ್ಮಾಣಗೊಂಡು ಆತಂಕಕ್ಕೆ ಕಾರಣವಾಗಿದೆ.

ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದ ಸಿದ್ಧನಹಳ್ಳಿ ಎಂಬ ಮುಳುಗಡೆ ಪ್ರದೇಶದ ಹೊಲಗಳಲ್ಲಿ ನೀರು ನುಗ್ಗುವುದಷ್ಟೇ ಅಲ್ಲದೇ ರಾಶಿ ರಾಶಿ ಕಲ್ಲುಗಳು ಬಂದು ಬಿದ್ದಿವೆ. ಅತ್ಯಂತ ಫಲವತ್ತಾದ ಜಮೀನು ಹೊಂದಿರುವ ಈ ಗ್ರಾಮದ ರೈತರಲ್ಲಿ ಆತಂಕ ಮೂಡಿದ್ದು, ಕಣ್ಣೀರು ಕಪಾಳಕ್ಕೆ ಬಂದಿವೆ.

ಅನ್ನದಾತನ ಜೀವನ ಸರ್ವನಾಶ: ಬಳ್ಳಾರಿ ನಾಲಾಕ್ಕೆ ಹಿಂದೆಂದೂ ಕಂಡು ಕೇಳರಿಯದಷ್ಟು ನೀರು ಬಂದಿದೆ. 10-15 ದಿನಗಳ ಕಾಲ ಸುರಿದ ಭಾರೀ ಮಳೆಯಿಂದ ಕೃಷಿ ಜಮೀನುಗಳು ಕೊಚ್ಚಿ ಹೋಗಿವೆ. ಮುಂಗಾರು ಮಳೆ ಉತ್ತಮವಾಗಿ ಬರುವುದೆಂಬ ಆಸೆಯಿಂದ ರೈತರು ನಾಟಿ ಮಾಡಿದ್ದ ಭತ್ತ, ಜೋಳ, ಗೋವಿನ ಜೋಳ, ತರಕಾರಿ ಕೊಚ್ಚಿ ಹೋಗಿದೆ. ಮಳೆಯ ಅಂದಾಜು ನೋಡಿ ಗೊಬ್ಬರ ಹಾಕಿದ್ದರು. ಇನ್ನೇನು ಬೆಳೆ ಕೈಗೆ ಬರಬಹುದೆಂಬ ಆಸೆಯಿಂದ ಕಾಯುತ್ತ ಕುಳಿತಿದ್ದ ಅನ್ನದಾತನ ಬೆಳೆಯನ್ನು ಈ ಮಳೆ ಸರ್ವನಾಶ ಮಾಡಿದೆ.

ಇಡೀ ಜೀವನವನ್ನೇ ನುಂಗಿ ಹಾಕಿರುವ ಮಳೆಯಿಂದ ರೈತರು ಕಂಗಾಲಾಗಿದ್ದಾರೆ. ಎಲ್ಲೆಲ್ಲೂ ನೀರು ನುಗ್ಗಿ ಹೊಟ್ಟೆಗೆ ತಣ್ಣೀರು ಎರಚಿದೆ. ಮೇಲ್ಭಾಗದಿಂದ ಸಿದ್ಧನಹಳ್ಳಿ, ಮಾಸ್ತಿಹೊಳಿ ಗ್ರಾಮಗಳಿಗೆ ಇಳಿದು ಬಂದ ನೀರಿಗೆ ಹಚ್ಚ ಹಸುರಾಗಿದ್ದ ಬೆಳೆಗಳೆಲ್ಲ ನಾಲ್ಕೈದು ದಿನಗಳಲ್ಲಿ ಕೊಚ್ಚಿ ಹೋಗಿವೆ. ಮುಂದಿನ ಬದುಕಿನ ಬಗ್ಗೆ ಚಿಂತಾಕ್ರಾಂತರಾಗಿರುವ ರೈತರು ತಲೆಗೆ ಕೈ ಹಚ್ಚಿ ಕುಳಿತಿದ್ದಾರೆ.

ಹೊಲ ನೋಡಿ ರೈತರ ಕಣ್ಣೀರು: ಬಳ್ಳಾರಿ ನಾಲಾದಿಂದ ಹರಿದು ಬಂದ ನೀರಿನಿಂದ ಸಂಪೂರ್ಣ ಬೆಳೆಗಳೆಲ್ಲ ಸರ್ವನಾಶಗೊಂಡಿವೆ. ಭೂಮಿಯ ಮಣ್ಣೆಲ್ಲ ಕಿತ್ತುಕೊಂಡು ಹೊಲಗಳಲ್ಲಿ ದೊಡ್ಡ ಗುಂಡಿಗಳು ಬಿದ್ದಿವೆ. ದೂರದಿಂದ ಬೃಹತ್‌ ಆಕಾರದ ಮರಗಳು ಕೊಚ್ಚಿ ಬಂದು ಹೊಲಗಳಲ್ಲಿ ಬಿದ್ದಿವೆ. ಬೆಳೆ ಸಹಿತ ಮಣ್ಣನ್ನೂ ಕಿತ್ತುಕೊಂಡು ಹೋಗಿರುವ ಈ ಹಳ್ಳದ ನೀರು ಸದ್ಯ ಸಂಪೂರ್ಣ ಇಳಿಮುಖವಾಗಿದೆ. ರೈತರು ಈಗ ತಮ್ಮ ಗದ್ದೆಗಳಿಗೆ ಹೋಗಿ ಬೆಳೆ ನೋಡಿ ಕಣ್ಣೀರು ಹಾಕುತ್ತಿದ್ದಾರೆ.

ಜೂನ್‌, ಜುಲೈ ತಿಂಗಳಲ್ಲಿ ಮಳೆ ಮುನ್ಸೂಚನೆ ನೋಡಿ ಬಿತ್ತನೆ ಆರಂಭವಾಗುತ್ತದೆ. ಅದರಂತೆ ಈ ಸಲ ಬಹುತೇಕ ರೈತರು ಬಿತ್ತನೆ ಕಾರ್ಯ ಮುಗಿಸಿದ್ದರಿಂದ ಅಲ್ಪಸ್ವಲ್ಪ ಬೆಳೆಗಳು ಬಂದಿದ್ದವು. ಇನ್ನೇನು ನಾಲ್ಕೈದು ದಿನಗಳಲ್ಲಿ ತರಕಾರಿಗಳನ್ನು ಕಿತ್ತು ಮಾರುಕಟ್ಟೆಗೆ ಸಾಗಿಸುವ ತಯಾರಿ ನಡೆದಿತ್ತು. ನೀರಿನ ಪ್ರವಾಹದಲ್ಲಿ ಎಲ್ಲವೂ ಕೊಚ್ಚಿ ಹೋಗಿದೆ. ನಾಟಿ ಮಾಡಿದ್ದ ಭತ್ತದ ಒಂದೂ ಗಿಡ ಕೈಗೆ ಸಿಕ್ಕಿಲ್ಲ. ಇದು ಭೂಮಿಯೋ ಅಥವಾ ಗುಡ್ಡಗಾಡು ಪ್ರದೇಶವೋ ಎಂಬಂತೆ ಕಾಣಿಸುತ್ತಿದೆ ಎನ್ನುತ್ತಾರೆ ರೈತ ಯಲ್ಲಪ್ಪ ಪೂಜೇರಿ.

ಗ್ರಾಮದಲ್ಲಿ ಭುಗಿಲೆದ್ದ ಆಕ್ರೋಶ: ಪ್ರವಾಹ ಬಂದು ಇಷ್ಟೆಲ್ಲ ಅವಾಂತರ ಸೃಷ್ಟಿಸಿದ್ದರೂ ಯಾರೂ ಕಣ್ಣೆತ್ತಿ ನೋಡುತ್ತಿಲ್ಲ. ಕೇಂದ್ರ ಸಚಿವ ಸುರೇಶ ಅಂಗಡಿ ಬಿಟ್ಟರೆ ಇನ್ನೂ ಯಾರೂ ಇತ್ತ ಬಂದಿಲ್ಲ. ಕೃಷಿ ಇಲಾಖೆ ಅಧಿಕಾರಿಗಳು ಬಂದು ಸಮೀಕ್ಷೆ ಮಾಡಿಲ್ಲ. ಈ ಭಾಗದ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಎಲ್ಲ ಊರು ತಿರುಗಾಡುತ್ತಿದ್ದಾರೆ. ಆದರೆ ನಮ್ಮೂರಿಗೆ ಬಂದು ಸಾಂತ್ವನ ಹೇಳುತ್ತಿಲ್ಲ. ಅನೇಕ ಮನೆಗಳು ಬಿದ್ದು ಹೋಗಿ ಬೇರೆಯವರ ಮನೆಯಲ್ಲಿ ಬದುಕು ಸಾಗಿಸುತ್ತಿದ್ದಾರೆ. ನಮ್ಮ ಬಗ್ಗೆ ಯಾರಿಗೂ ಅನುಕಂಪ ಇಲ್ಲವಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮುಳುಗಡೆ ಪ್ರದೇಶ ಎಂಬ ಶಾಪ ನಮ್ಮನ್ನು ಅಂಟಿಕೊಂಡಿದೆ. ಅನೇಕ ವರ್ಷಗಳಿಂದ ಸಿದ್ಧನಹಳ್ಳಿ ಸೇರಿದಂತೆ ಸುತ್ತಲಿನ ಕೆಲ ಹಳ್ಳಿಗಳು ಬಳ್ಳಾರಿ ನಾಲಾ ಅಣೆಕಟ್ಟು ನಿರ್ಮಾಣಕ್ಕಾಗಿ ಸ್ಥಳಾಂತರ ಮಾಡುವುದಾಗಿ ಸರ್ಕಾರ ಹೇಳುತ್ತ ಬಂದಿದೆ. ಆದರೆ ಇನ್ನೂವರೆಗೆ ಸ್ಥಳಾಂತರ ಮಾಡದೇ, ಸೌಲಭ್ಯವನ್ನೂ ಕಲ್ಪಿಸದೇ ಜಿಲ್ಲಾಡಳಿತ ಚೆಲ್ಲಾಟ ಆಡುತ್ತಿದೆ. ಈ ಬಾರಿಯ ಮಳೆ ಸಂಪೂರ್ಣ ಜೀವನವನ್ನೇ ಕಸಿದುಕೊಂಡಿದೆ ಎಂದು ಗ್ರಾಮದ ನಿವಾಸಿ ಲಗಮಣ್ಣ ಸುಲಧಾಳ ಅಳಲು ತೋಡಿಕೊಂಡರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.