ಉತ್ತರ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನಕ್ಕೆ ಆಗ್ರಹ
•ಸರ್ಕಾರಕ್ಕೆ ಶಾಸಕ ಬೆನಕೆ ಮನವಿ•ಸಾಂಕ್ರಾಮಿಕ ರೋಗ ವಿರುದ್ಧ ಮುನ್ನಚ್ಚರಿಕೆ
Team Udayavani, Aug 14, 2019, 12:45 PM IST
ಬೆಳಗಾವಿ: ಗುರು ವಿವೇಕಾನಂದ ಸೊಸೈಟಿಯಿಂದ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 1 ಲಕ್ಷ ರೂ. ಡಿಡಿಯನ್ನು ಶಾಸಕ ಬೆನಕೆಗೆ ನೀಡಲಾಯಿತು.
ಬೆಳಗಾವಿ: ಪ್ರವಾಹದಿಂದ ನಗರ ಸೇರಿದಂತೆ ಜಿಲ್ಲಾದ್ಯಂತ ಜನಜೀವನ ಅಸ್ತವ್ಯಸ್ತವಾಗಿದ್ದು, ಉತ್ತರ ಮತ ಕ್ಷೇತ್ರದ ಪರಿಸ್ಥಿತಿ ಸುಧಾರಣೆಗಾಗಿ 100 ಕೋಟಿ ರೂ. ವಿಶೇಷ ಅನುದಾನ ನೀಡಬೇಕು ಎಂದು ಶಾಸಕ ಅನಿಲ ಬೆನಕೆ ಆಗ್ರಹಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 146 ಮಿಮೀ. ಆಗಬೇಕಾಗಿದ್ದ ಮಳೆ ಪ್ರಮಾಣ ಕಳೆದ 15 ದಿನಗಳ ಅವಧಿಯಲ್ಲಿ 360 ಮಿಮೀ. ಸುರಿದಿದೆ. ಇಷ್ಟು ದೊಡ್ಡ ಮಳೆಯಿಂದ ಇಡೀ ಜನಜೀವನ ಅಸ್ತವ್ಯಸ್ತಗೊಂಡಿದೆ. ಸರ್ಕಾರಿ ದಾಖಲೆಗಳ ಪ್ರಕಾರ 150 ಮನೆಗಳಿಗೆ ಹಾನಿಯಾಗಿದೆ. ಆದರೆ ಸದ್ಯ ನಾವು ಮಾಡಿರುವ ಸಮೀಕ್ಷೆ ಪ್ರಕಾರ 300ಕ್ಕಿಂತ ಹೆಚ್ಚು ಮನೆಗಳಿಗೆ ಹಾನಿಯಾಗಿರುವುದು ಕಂಡು ಬಂದಿದೆ. ರಸ್ತೆಗಳು, ದೊಡ್ಡ ಪ್ರಮಾಣದ ನಾಲಾಗಳು, ಗಟಾರುಗಳ ದುರಸ್ತಿಗೆ ಹಾಗೂ ಸಂಕಷ್ಟಕ್ಕೆ ಸಿಲುಕಿದ 10 ಸಾವಿರ ಕುಟುಂಬಗಳಿಗೆ ಅಗತ್ಯ ನೆರವು ನೀಡಲು ವಿಶೇಷ ಅನುದಾನ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.
ಸದ್ಯ ಮಳೆಯ ಅಬ್ಬರ ತಗ್ಗಿದ್ದರೂ ಇನ್ನೂ ಅನೇಕ ತಗ್ಗು ಪ್ರದೇಶಗಳು, ಬಡಾವಣೆಗಳು ಪ್ರವಾಹದ ಸಂಕಷ್ಟದಿಂದ ಹೊರ ಬಂದಿಲ್ಲ. ಅ ಪ್ರದೇಶಗಳಲ್ಲಿ ಅನಾರೋಗ್ಯ ವಾತಾವರಣ ಸೃಷ್ಟಿಯಾಗುತ್ತಿರುವುದರಿಂದ ಸಾಂಕ್ರಾಮಿಕ ಕಾಯಿಲೆ ವೇಗವಾಗಿ ಪಸರಿಸುವ ಸಾಧ್ಯತೆ ಇದೆ. ಹೀಗಾಗಿ ಎಲ್ಲ ಬಡಾವಣೆಗಳಲ್ಲಿ ಕಾಯಿಲೆ ನಿಯಂತ್ರಣ ಔಷಧ ಸಿಂಪಡಿಸಬೇಕು ಎಂದು ಪಾಲಿಕೆ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಪ್ರವಾಹದಿಂದ ಹಾನಿಗೊಳಗಾದ ಶಿವಾಜಿನಗರ, ವೀರಭದ್ರನಗರ, ಫುಲ್ಬಾಗ ಮಾಳ, ಕೋನವಾಳಗಲ್ಲಿ, ಪಾಟೀಲ ಮಾಳಾ, ಗ್ಯಾಂಗ್ವಾಡಿ, ವಡ್ಡರವಾಡಿ, ರುಕ್ಮಿಣಿನಗರದಲ್ಲಿ ಸಾವಿರಾರು ಜನ ನಿರಾಶ್ರಿತರಾಗಿದ್ದು, ಇವರ ಬದುಕು ಕಟ್ಟಿಕೊಡಲು ಸರಕಾರ ಬದ್ಧವಾಗಿದೆ.
ಧರ್ಮನಾಥ ಭವನ, ಅಂಬೇಡ್ಕರ ಭವನ ಪರಿಹಾರ ಕೇಂದ್ರಗಳಲ್ಲಿ ಸಂತ್ರಸ್ತರಿಗಾಗಿ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ. ದಾನಿಗಳ ನೆರವಿನಿಂದ ಊಟ, ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.
ಪ್ರವಾಹ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ ಸಂತ್ರಸ್ತರಿಗೆ ಹೆಚ್ಚಿನ ನೆರವು ನೀಡುವುದಾಗಿ ತಿಳಿಸಿದ್ದಾರೆ. ಮನೆಗಳ ಪುನರ್ ನಿರ್ಮಾಣಕ್ಕಾಗಿ ಐದು ಲಕ್ಷ ರೂ. ಸಹಾಯಧನ ಮಂಜೂರು ಮಾಡಲು ವಿನಂತಿಸಲಾಗಿದೆ. ಮುಖ್ಯಮಂತ್ರಿ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ನನ್ನ ಎರಡು ತಿಂಗಳ ಶಾಸಕರ ಮಾಸಿಕ ವೇತನ 72 ಸಾವಿರ ರೂ. ನೀಡುವುದಾಗಿ ಶಾಸಕ ಅನಿಲ ಬೆನಕೆ ಘೋಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ