ಚಳಿಗಾಲದ ಅಧಿವೇಶನದಲ್ಲಿ 14 ವಿಧೇಯಕ ಮಂಡನೆ


Team Udayavani, Dec 19, 2022, 6:55 AM IST

ಚಳಿಗಾಲದ ಅಧಿವೇಶನದಲ್ಲಿ 14 ವಿಧೇಯಕ ಮಂಡನೆ

ಸುವರ್ಣ ಸೌಧ: ಪ್ರಸಕ್ತ ಸಾಲಿನ ಚಳಿಗಾಲದ ಅಧಿವೇಶನದಲ್ಲಿ 14 ವಿಧೇಯಕ ಮಂಡನೆಯಾಗಲಿದೆ. ಇದರ ಜತೆಗೆ ಸದಸ್ಯರೊಬ್ಬರು ಖಾಸಗಿ ವಿಧೇಯಕ ಮಂಡನೆಗೂ ಅರ್ಜಿ ಸಲ್ಲಿಸಿದ್ದಾರೆ ಎಂದು ವಿಧಾನ ಪರಿಷತ್‌ ಸಭಾಪತಿ ರಘುನಾಥ್‌ ರಾವ್‌ ಮಲ್ಕಾಪುರೆ ಹೇಳಿದರು.

ಸುವರ್ಣ ಸೌಧದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸದಸ್ಯರು ಈ ಅಧಿವೇಶನದಲ್ಲಿ 1,452 ಪ್ರಶ್ನೆಗಳನ್ನು ಕೇಳಿದ್ದಾರೆ. ಇದನ್ನು 150ಕ್ಕೆ ಸೀಮಿತಗೊಳಿಸಿ, ಪ್ರತಿ ದಿನ 15 ಪ್ರಶ್ನೆಗಳಿಗೆ ಪ್ರಶ್ನೋತ್ತರದಲ್ಲಿ ಅವಕಾಶ ನೀಡಲಾಗುವುದು. 900ಕ್ಕೂ ಅಧಿಕ ಪ್ರಶ್ನೆಗಳಿಗೆ ಲಿಖೀತ ರೂಪದಲ್ಲಿ ಉತ್ತರ ನೀಡಲಾಗುವುದು ಎಂದರು.

ಸಮಯದ ಲಭ್ಯತೆಯ ಆಧಾರದಲ್ಲಿ ಸದನ ಸಲಹಾ ಸಮಿತಿಯ ತೀರ್ಮಾನದಂತೆ ಕೆಲ ವಿಷಯಗಳ ಚರ್ಚೆಗೂ ಅವಕಾಶ ನೀಡಲಾಗುವುದು. ಒಂದು ಖಾಸಗಿ ಮಸೂದೆ ಮಂಡಿಸುವ ಬಗ್ಗೆ ಮೇಲ್ಮನೆ ಸದಸ್ಯರಾದ ಎನ್‌. ರವಿಕುಮಾರ್‌ ಅವರು ಅರ್ಜಿ ಸಲ್ಲಿಸಿದ್ದಾರೆ. ಹಾಗೆಯೇ ಖಾಸಗಿ ನಿರ್ಣಯಕ್ಕೆ ಸಂಬಂಧಿಸಿದಂತೆ ಸದಸ್ಯರಾದ ಯು.ಬಿ.ವೆಂಕಟೇಶ್‌ ಅವರು ಅರ್ಜಿ ಸಲ್ಲಿದ್ದಾರೆ. ಇವುಗಳನ್ನು ಪರಿಶೀಲಿಸಿ, ಮುಂದಿನ ಕ್ರಮವಹಿಸಲಿದ್ದೇವೆ ಎಂದು ಹೇಳಿದರು.

ಸಭಾಪತಿ ಚುನಾವಣೆ
ಕಳೆದ 7 ತಿಂಗಳಿಂದ ಸಭಾಪತಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಡಿ.21ರಂದು ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಡಿ.20ರೊಳಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಸದ್ಯ ಸಭಾಪತಿ ಹುದ್ದೆಯಲ್ಲಿರುವುದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಸಂಬಂಧ ಮುಂದೆ ನಿರ್ಧರಿಸಲಾಗುವುದು ಎಂದು ಮಲ್ಕಾಪುರೆ ಹೇಳಿದರು.

ಸಲಹಾ ಸಮಿತಿ ನಿರ್ಧರಿಸಲಿದೆ: ಕಳೆದ ಅಧಿವೇಶನದಲ್ಲಿ ವಕ್ಫ್ ಆಸ್ತಿ ಕಬಳಿಕೆ ವರದಿಗೆ ಸಂಬಂಧಿಸಿದ ವಿಚಾರವನ್ನು ಸದಸ್ಯರೊಬ್ಬರು ಮಂಡಿಸಿದ ಸಂದರ್ಭದಲ್ಲಿ ಸರ್ಕಾರದ ಗಮನಕ್ಕೆ ತರಲಾಗಿತ್ತು ಮತ್ತು ಯಾವುದೇ ಸೂಚನೆ ಇಲ್ಲದೆ ಈ ರೀತಿ ವರದಿ ಮಂಡಿಸುವುದು ಸರಿಯಲ್ಲ ಎಂಬುದನ್ನು ಸೂಚಿಸಲಾಗಿತ್ತು. ಸಾಂವಿಧಾನಿಕ ಪರಂಪರೆಯಲ್ಲಿ ಆಡಳಿತಪಕ್ಷಕ್ಕೆ ಎಷ್ಟು ಜವಾಬ್ದಾರಿಯಿದೆಯೋ ಅಷ್ಟೇ ಜವಾಬ್ದಾರಿ ವಿರೋಧ ಪಕ್ಷಕ್ಕೂ ಇರುತ್ತದೆ. ಸಭಾಪತಿ ಪೀಠದ ಗಮನಕ್ಕೆ ಬಾರದೇ ಯಾವುದೇ ವಿಷಯ ಮಂಡನೆಯಾಗುವುದಿಲ್ಲ ಮತ್ತು ಅದಕ್ಕೆ ಅವಕಾಶ ನೀಡುವುದೂ ಇಲ್ಲ ಎಂದು ಮಲ್ಕಾಪುರೆ ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.