ಮುಂಬೈಗೆ ಸಾಗಿಸುತ್ತಿದ್ದ 20 ಟನ್ ಅನ್ನಭಾಗ್ಯ ಅಕ್ಕಿ ವಶ
Team Udayavani, Jul 4, 2017, 3:45 AM IST
ಚಿಕ್ಕೋಡಿ: ಹಾವೇರಿಯಿಂದ ಮುಂಬೈಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 20 ಟನ್ ಅನ್ನಭಾಗ್ಯ ಯೋಜನೆ
ಅಕ್ಕಿಯನ್ನು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ತಾಲೂಕಿನ ಕೋಗನೊಳ್ಳಿ ಟೋಲ್ ನಾಕಾ ಬಳಿ ನಿಪ್ಪಾಣಿ ಗ್ರಾಮೀಣ
ಪೊಲೀಸರು ಸೋಮವಾರ ವಶಪಡಿಸಿಕೊಂಡಿದ್ದಾರೆ.
ಅನ್ನ ಭಾಗ್ಯದ ಅಕ್ಕಿಯನ್ನು ಹಾವೇರಿಯಿಂದ ಮುಂಬೈಗೆ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ಲಾರಿಯನ್ನು ಪರಿಶೀಲಿಸಿ ಅದರಲ್ಲಿದ್ದ ಸುಮಾರು 4.15 ಲಕ್ಷ ರೂ. ಮೌಲ್ಯದ 437 ಅಕ್ಕಿ ಚೀಲಗಳು ಮತ್ತು 23 ಲಕ್ಷ ರೂ. ಬೆಲೆಯ ಲಾರಿಯನ್ನು ವಶಪಡಿಸಿಕೊಂಡು, ಚಾಲಕ ಆನಂದ ದಾದಾಸಾಹೇಬ (35), ಕ್ಲೀನರ್ ರವೀಂದ್ರ ಸದಾಶಿವ ಕರಜೆ (20) ಹಾಗೂ ಸಮಾಧಾನ ಶಂಕರ ಮೋಟೆ(23) ಎಂಬುವರನ್ನು ಬಂಧಿಸಿದ್ದಾರೆ. ಈ ಮೂವರು
ಸೊಲ್ಲಾಪುರ ಜಿಲ್ಲೆಯ ಸಾಂಗೋಲಾ ತಾಲೂಕಿನ ಗೇರಡಿ ಗ್ರಾಮದವರೆಂದು ತಿಳಿದು ಬಂದಿದೆ. ಈ ಕುರಿತು ನಿಪ್ಪಾಣಿ
ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು