ಬೆಳಗಾವಿಗೆ ರಾಜಸ್ಥಾನದ ಅಜ್ಮೀರ್ ನಂಜು: ಒಂದೇ ದಿನ 22 ಪಾಸಿಟಿವ್ ಪ್ರಕರಣ
Team Udayavani, May 10, 2020, 12:46 PM IST
ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯನ್ನು ಶಾಂತವಾಗಿ ಇರಲು ಬಿಡದ ಮಹಾಮಾರಿ ಕೋವಿಡ್-19 ರವಿವಾರ ಮತ್ತೆ ಅಬ್ಬರಿಸಿದ್ದು, ಒಂದೇ ದಿನದಲ್ಲಿ 22 ಜನರಿಗೆ ಪಾಸಿಟಿವ್ ಸೋಂಕು ತಗುಲುವ ಮೂಲಕ ಆಘಾತಕಾರಿ ವಿಷಯ ಬೆಳಕಿಗೆ ಬಂದಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದೆ.
ಶನಿವಾರ ಒಂದು ದಿನ ಶಾಂತವಾಗಿದ್ದ ಕೋವಿಡ್-19 ಮಹಾಮಾರಿ ರವಿವಾರ ಮತ್ತೆ ಅಪ್ಪಳಿಸಿದೆ. ದೆಹಲಿಯ ನಿಜಾಮುದ್ದಿನ್ ತಬ್ಲೀಘಿ ಜಮಾತ್ ಮರ್ಕಜ್ ಗೆ ಹೋಗಿ ಬಂದಿದ್ದ ವ್ಯಕ್ತಿಗಳಿಂದ ಜಿಲ್ಲೆಯಲ್ಲಿ ಮಹಾಮಾರಿ ಪಸರಿಸುತ್ತಿರುವ ಬೆನ್ನಲ್ಲೇ ಈಗ ರಾಜಸ್ಥಾನದ ಅಜ್ಮೇರದಿಂದ ಬಂದ ವ್ಯಕ್ತಿಗಳಿಗೆ ಸೋಂಕು ತಗುಲಿದ್ದು, ಇನ್ನಷ್ಟು ಆತಂಕಕಾರಿ ವಿಷಯವಾಗಿದೆ
ಈ ಒಂದೂವರೆ ತಿಂಗಳ ಅವಧಿಯಲ್ಲಿ ಒಂದೇ ದಿನದಲ್ಲಿ ಇಷ್ಟೊಂದು ಪಾಸಿಟಿವ್ ಸೋಂಕು ತಗುಲಿದ್ದು ಇದೇ ಮೊದಲನೇಯದ್ದಾಗಿದೆ. 22 ಜನರಿಗೆ ಸೋಂಕು ತಗುಲಿದ್ದು, ಈವರೆಗೆ ಒಟ್ಟು 107ಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. 22 ಜನರ ಪೈಕಿ 13 ಮಂದಿ ಮಹಿಳೆಯರಿಗೆ ಸೋಂಕು ತಗುಲಿದೆ. ಬೆಳಗಾವಿಯ ಮೂರು ವರ್ಷದ ಕಂದಮ್ಮನಿಗೂ ತಗುಲಿದೆ.
ರಾಜಸ್ಥಾನದ ಅಜ್ಮೇರದಿಂದ ಪ್ರವಾಸ ಮಾಡುತ್ತ ಬಂದ ಈ ಸೋಂಕಿತರ ಸಂಪರ್ಕಕ್ಕೆ ಬಂದವರ ಶೋಧ ನಡೆಸಲು ಆರೋಗ್ಯ ಇಲಾಖೆ ಜಾಲ ಬೀಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ