ಇಂದಿನಿಂದ ರಸ್ತೆಗಿಳಿಯಲಿವೆ 252 ಬಸ್
Team Udayavani, May 19, 2020, 5:29 AM IST
ಬೆಳಗಾವಿ: ಎರಡು ತಿಂಗಳಿಂದ ಲಾಕ್ ಡೌನ್ದಿಂದಾಗಿ ಸ್ಥಗಿತಗೊಂಡಿದ್ದ ಬಸ್ ಸಂಚಾರ ಮೇ 19ರಿಂದ ಮತ್ತೆ ಆರಂಭಗೊಳ್ಳಲಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಗೆ ಹಾಗೂ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಬಸ್ಗಳು ಸಂಚರಿಸಲಿವೆ.
ವಾಕರಸಾ ಸಂಸ್ಥೆಯ ಬಸ್ಗಳು ಜಿಲ್ಲೆ ಸೇರಿದಂತೆ ಬೇರೆ ಜಿಲ್ಲೆಗಳಿಗೆ ಸಂಚರಿಸಲಿವೆ. ಮಂಗಳವಾರದಿಂದ ರಾಜ್ಯ ಸರ್ಕಾರ ವಿಧಿಸಿರುವ ನಿಯಮದಂತೆ ಬೆಳಗ್ಗೆ 7 ಗಂಟೆಯಿಂದ ಬಸ್ ಕಾರ್ಯಾಚರಿಸಲಿವೆ. ನಗರ ಸೇರಿದಂತೆ ಗ್ರಾಮೀಣ ಹಾಗೂ ವಿವಿಧ ಕಡೆ ಬಸ್ಗಳ ಸಂಚಾರ ನಡೆಯಲಿದೆ.
ಈಗಾಗಲೇ ಕೇಂದ್ರ ಹಾಗೂ ನಗರ ಬಸ್ ನಿಲ್ದಾಣದಲ್ಲಿ ಸಿದ್ಧತೆ ಮಾಡಿಕೊಂಡಿರುವ ವಾಕರಸಾಸಂಸ್ಥೆಯ ಸಿಬ್ಬಂದಿ, ಬಸ್ ನಿಲ್ದಾಣದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಪ್ರಯಾಣಿಕರಿಗಾಗಿ ಮಾರ್ಕಿಂಗ್ ಹಾಕಲಾಗಿದ್ದು, ಗುರುತು ಹಾಕಿರುವ ಸ್ಥಳದಲ್ಲಿಯೇ ಕಡ್ಡಾಯವಾಗಿ ಪ್ರಯಾಣಿಕರು ನಿಂತು ಬಸ್ ಹತ್ತಬೇಕು. ಬೆಳಗಾವಿ ಕೇಂದ್ರ ಬಸ್ ನಿಲ್ದಾಣಕ್ಕೆ ಒಂದು ಆಗಮನ ಹಾಗೂ ಒಂದು ನಿರ್ಗಮನ ಮಾತ್ರ ಇದೆ. ಗುಂಪು ಕಟ್ಟಿಕೊಂಡು ಪ್ರಯಾಣಿಕರು ನಿಲ್ದಾಣದೊಳಗೆ ಬರುವಂತಿಲ್ಲ. ಒಳಗೆ ಬರುವಾಗ ಸ್ಯಾನಿಟೈಸ್, ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುವುದು ಎಂದು ವಾಕರಸಾ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್. ಮುಂಜಿ ಪತ್ರಿಕೆಗೆ ತಿಳಿಸಿದರು.
ಬಸ್ಗಳನ್ನೂ ಸ್ಯಾನಿಟೈಸ್ ಮಾಡಿಯೇ ಸಂಚಾರಕ್ಕೆ ಕಳುಹಿಸಲಾಗುವುದು. ಕಡ್ಡಾಯವಾಗಿ ಪ್ರಯಾಣಿಕರು ಮಾಸ್ಕ್ ಧರಿಸಿರಬೇಕು. ಚಾಲಕ-ನಿರ್ವಾಹಕರೂ ಮಾಸ್ಕ್ ಧರಿಸಬೇಕಾಗುತ್ತದೆ. ದೂರ ಸಂಚಾರ ಬಸ್ನಲ್ಲಿ 30 ಪ್ರಯಾಣಿಕರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಂಚರಿಸುವ ಬಸ್ಗಳಲ್ಲಿ 32 ಸೀಟುಗಳಿದ್ದು, ಶೇ. 50ರಷ್ಟು ಮಾತ್ರ ಪ್ರಯಾಣಿಕರಿಗೆ ಅವಕಾಶ ಇದೆ ಎಂದು ತಿಳಿಸಿದರು.
ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಉಳಿದೆಡೆ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. 50 ವರ್ಷಕ್ಕಿಂತ ಮೇಲ್ಪಟ್ಟ ಚಾಲಕ-ನಿರ್ವಾಹಕರನ್ನು ಬಳಸಿಕೊಳ್ಳುವುದಿಲ್ಲ. ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಕ್ರಮೇಣವಾಗಿ ಬಸ್ ಕಾರ್ಯಾಚರಿಸಲಿವೆ ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು