ಮಳೆಗೆ 350 ಹೆಕ್ಟೇರ್ ಒಣ ದ್ರಾಕ್ಷಿ ಹಾನಿ
Team Udayavani, Apr 11, 2021, 6:09 PM IST
ಕೋಹಳ್ಳಿ: ಅಥಣಿ ತಾಲೂಕಿನಲ್ಲಿ ಶುಕ್ರವಾರ ಸಂಜೆ ಸುರಿದ ಅಕಾಲಿಕ ಮಳೆಯಿಂದ ಶೇಡ್ಗಳಲ್ಲಿ ಹಾಕಿದಒಣದ್ರಾಕ್ಷಿ (ಮನೂಕ) ಹಾಳಾಗಿದ್ದು. ಶನಿವಾರ ಸ್ಥಳಕ್ಕೆತೋಟಗಾರಿಕೆ ಇಲಾಖೆ ಅಧಿ ಕಾರಿ ಅಕ್ಷಯಕುಮಾರ ಉಪಾಧ್ಯಾಯ ಭೇಟಿ ನೀಡಿ ಹಾನಿ ಬಗ್ಗೆ ಮಾಹಿತಿ ಪಡೆದರು.
ನಂತರ ಮಾತನಾಡಿದ ಅವರು, ಅಥಣಿ ತಾಲೂಕಿನಲ್ಲಿ ಸುಮಾರು 3000 ಹೆಕ್ಟೇರ್ ಪ್ರದೇಶದಲ್ಲಿ ದ್ರಾಕ್ಷಿಬೆಳೆಯಲಾಗುತ್ತಿದೆ. ಅದರಲ್ಲಿ ತಾಲೂಕಿನ ಪೂರ್ವಭಾಗದ ಕೋಹಳ್ಳಿ, ಕಕಮರಿ, ರಾಮತೀರ್ಥ, ಅರಟಾಳ, ಕೊಟ್ಟಲಗಿ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಶುಕ್ರವಾರಸಂಜೆ ಸುರಿದ ಭಾರಿ ಬಿರುಗಾಳಿ ಸಹಿತ ಮಳೆಗೆ ಈ ಎಲ್ಲಗ್ರಾಮಗಳ ಒಟ್ಟು 350 ಹೆಕ್ಟೇರ್ ಪ್ರದೇಶದ ಒಣದ್ರಾಕ್ಷಿ(ಮನೂಕ) ತೊಯ್ದು ನಾಶವಾಗಿ ಲಕ್ಷಾಂತರ ರೂ. ಹಾನಿಯಾಗಿದೆ ಎಂದರು.
ಮಾರುಕಟ್ಟೆಯಲ್ಲಿ ಒಣದ್ರಾಕ್ಷಿ ಕೆಜಿಗೆ 150 ರಿಂದ 200ರವರೆಗೆ ಮಾರಾಟವಾಗುತ್ತಿದೆ. ಆದರೆ ಶುಕ್ರವಾರ ಸಂಜೆ ಸುರಿದ ಬಾರಿ ಅಕಾಲಿಕ ಮಳೆಯಿಂದ ಒಣದ್ರಾಕ್ಷಿಯಗುಣಮಟ್ಟ ಹಾಳಾಗಿದೆ. ಇದರಿಂದ ಇದರ ಬೆಲೆಮಾರುಕಟ್ಟೆಯಲ್ಲಿ 80 ರೂ, ದಿಂದ 100 ರೂ, ವರೆಗೂ ಮಾತ್ರ ಮಾರಾಟವಾಗುತ್ತದೆ ಎನ್ನುತ್ತಾರೆ ರೈತರು.
ಪರಿಹಾರ ನೀಡಿ : ಈ ಭಾಗದ ಅನೇಕ ರೈತರು ದ್ರಾಕ್ಷಿ ಬೆಳೆಗೆ 2018-19 ಸಾಲಿನ ಹಿಂಗಾರು ಹಂಗಾಮಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಮಾಡಿಸಿದ್ದರು.ಆದರೆ ರೈತರಿಗೆ ವಿಮಾ ಕಂಪನಿಯವರು ಈವರೆಗೆಹಾನಿ ಪರಿಹಾರ ನೀಡಿಲ್ಲ. ಈಗ ಅಧಿಕಾರಿಗಳು ಹಾನಿಸರ್ವೇ ಮಾಡಿ 2019-20ರ ಸಾಲಿನ ವಿಮೆ ಪರಿಹಾರಬೇಗನೆ ಒದಗಿಸಬೇಕೆಂಬುದು ಈ ಭಾಗದ ರೈತರ ಆಗ್ರಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ