3,574 ಕೋಟಿ ರೂ. ವೆಚ್ಚದ ಪೂರಕ ಅಂದಾಜು ಮಂಡನೆ
Team Udayavani, Dec 18, 2021, 6:15 AM IST
ಬೆಳಗಾವಿ: ರಾಜ್ಯ ಸರಕಾರ 3,574 ಕೋಟಿ 76 ಲಕ್ಷ ರೂ.ಗಾತ್ರದ ಪೂರಕ ಅಂದಾಜು ಮಂಡನೆ ಮಾಡಿದೆ. ಶುಕ್ರವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಪೂರಕ ಅಂದಾಜುಗಳ ಪಟ್ಟಿ ಮಂಡಿಸಿದರು.
ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಮೇಲೆ ಘೋಷಿಸಿರುವ ಅಮೃತ ಯೋಜನೆಗಳಿಗೆ ಅನುದಾನ ನೀಡಲು 75 ಕೋಟಿ ರೂ., ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದ ನಿಯೋಗ ದಾವೋಸ್ ಪ್ರವಾಸಕ್ಕೆ ತೆರಳಿದ್ದಕ್ಕೆ 4 ಕೋ. ರೂ. ಖರ್ಚು ಮಾಡಲಾಗಿದೆ.
ಆರೋಗ್ಯ ಕ್ಷೇತ್ರದಲ್ಲಿ ಬಾಕಿ ಇರುವ ವೇತನ, ಬಿಲ್ ನೀಡಿಕೆಗಾಗಿ ಹೆಚ್ಚಿನ ಮೊತ್ತ ಮೀಸಲಿಡಲಾಗಿದ್ದು, ಆರೋಗ್ಯ ಇಲಾಖೆಯ ವಿವಿಧ ವೆಚ್ಚಗಳಿಗಾಗಿ 217 ಕೋಟಿ ರೂ. ನಿಗದಿ ಮಾಡಲಾಗಿದೆ.
ಹೊಸದಾಗಿ ರಚನೆಯಾಗಿರುವ ವಿಜಯನಗರ ಜಿಲ್ಲೆಯ ಜಿಲ್ಲಾ ಕಚೇರಿಗಳಿಗೆ 3 ಕೋಟಿ 73 ಲಕ್ಷ ರೂ., ಅಬಕಾರಿ ಇಲಾಖೆಯ ಉಪ ನಿರೀಕ್ಷಕರಿಗೆ 316 ಬೈಕ್ ಖರೀದಿಗಾಗಿ 2 ಕೋಟಿ 41 ಲಕ್ಷ ರೂ., ವಿಧಾನಪರಿಷತ್ ಚುನಾವಣೆಗಾಗಿ 50 ಲಕ್ಷ ರೂ., ಮಹಾದಾಯಿ ಕ್ಲೇಮ್ ಕಮಿಷನ್ ಕಚೇರಿಗೆ 33 ಲಕ್ಷ ರೂ., ಡಿಜೆ ಹಳ್ಳಿ, ಕೆ.ಜೆ ಹಳ್ಳಿ ಕ್ಲೇಮ್ ಕಮೀಷನ್ ಕಚೇರಿಗಾಗಿ 50 ಲಕ್ಷ ರೂ., ಕಾರಾಗೃಹಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ 5 ಕೋಟಿ 55 ಲಕ್ಷ ರೂ., ವಕ್ಫ್ ಆಸ್ತಿಗಳ ವಿಶೇಷ ಸರ್ವೇ ಮಾಡಲು 50 ಲಕ್ಷ ರೂ., ಮಿನಿ ಒಲಿಂಪಿಕ್ ಕ್ರೀಡಾಕೂಟ ನಡೆಸಲು 2 ಕೋಟಿ 50 ಲಕ್ಷ ರೂ., ಜಲಸಂಪನ್ಮೂಲ ಇಲಾಖೆಯ ಪಶ್ಚಿಮವಾಹಿನಿ ಯೋಜನೆ ಬಿಲ್ ಪಾವತಿಗಾಗಿ 200 ಕೋಟಿ ರೂ., ಕೋವಿಡ್ ವೇಳೆ ವಿದ್ಯುತ್ ಬಿಲ್ ಮನ್ನಾ ಮಾಡಿದ್ದಕ್ಕಾಗಿ ಇಂಧನ ಇಲಾಖೆಗೆ 68 ಕೋಟಿ ರೂ., ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 100 ಕೋ. ರೂ ನಿಗದಿ., ಮುಖ್ಯ ಸಚೇತಕ ಅಜಯ ಸಿಂಗ್ ವೈದ್ಯಕಿಯ ವೆಚ್ಚ ಮರುಪಾವತಿಗಾಗಿ ಹೆಚ್ಚುವರಿಯಾಗಿ 2 ಲಕ್ಷ ರೂ., ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ ವೆಚ್ಚಕ್ಕೆ ಹೆಚ್ಚುವರಿಯಾಗಿ 20 ಲಕ್ಷ ರೂ. ನೀಡಲಾಗಿದೆ ಎಂದು ಪೂರಕ ಅಂದಾಜಿನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ:ನೆರೆ ಪರಿಹಾರಕ್ಕೆ ಕೇಂದ್ರದಿಂದ ಹೆಚ್ಚು ಹಣ ಬಿಡುಗಡೆ ಮಾಡಿಸಿ : ಎಸ್ ಆರ್ ಪಾಟೀಲ್ ಆಗ್ರಹ
ಎರಡನೇ ಪೂರಕ ಅಂದಾಜು
ಬಜೆಟ್ನಲ್ಲಿ ಅನುಮೋದನೆ ಪಡೆದಿದ್ದಕ್ಕಿಂತ 10,265.33 ಕೋಟಿ ರೂ. ಹೆಚ್ಚುವರಿ ವೆಚ್ಚ ಮಾಡಲು ಇದೇ ವರ್ಷದ ಸೆಪ್ಟಂಬರ್ನಲ್ಲಿ ಸದನದ ಒಪ್ಪಿಗೆ ಪಡೆಯಲಾಗಿತ್ತು. ಈಗ ಮತ್ತೆ 3,574.67 ಕೋಟಿ ರೂ. ವೆಚ್ಚದ ಎರಡನೇ ಪೂರಕ ಅಂದಾಜು ಮಂಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್