ಬೆಳಗಾವಿ: ಆರ್ ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದ 41 ಬಸ್ ಪ್ರಯಾಣಿಕರು ವಾಪಸ್ ಮುಂಬೈಗೆ
Team Udayavani, Feb 1, 2022, 10:03 AM IST
ಬೆಳಗಾವಿ: ಮುಂಬೈನಿಂದ ಬೆಂಗಳೂರಿಗೆ ತೆರಳುತ್ತಿದ್ದ ಎರಡು ಬಸ್ ಗಳನ್ನು ಕೊಗನೊಳ್ಳಿ ಚೆಕ್ಪೋಸ್ಟ್ ಬಳಿ ಮಂಗಳವಾರ ತಡೆದು ತಪಾಸಣೆ ನಡೆಸಿದಾಗ 41 ಪ್ರಯಾಣಿಕರ ಕೋವಿಡ್ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದ್ದಕ್ಕೆ ಎರಡೂ ಬಸ್ ಗಳನ್ನು ವಾಪಸ್ ಕಳುಹಿಸಲಾಗಿದೆ.
ಮುಂಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಶರ್ಮಾ ಟ್ರಾವೆಲ್ಸ್ ನಲ್ಲಿ ಒಟ್ಟು 28 ಪ್ರಯಾಣಿಕರ ಪೈಕಿ 24 ಜನರ ಬಳಿ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಇರಲಿಲ್ಲ. ಜತೆಗೆ ನ್ಯಾಷನಲ್ ಟ್ರಾವೆಲ್ ಬಸ್ ನಲ್ಲಿ ಬೆಂಗಳೂರಿಗೆ ಬರುತ್ತಿದ್ದ 28 ಜನರ ಪೈಕಿ 17 ಪ್ರಯಾಣಿಕರ ನೆಗೆಟಿವ್ ವರದಿ ಇರಲಿಲ್ಲ. ಎರಡೂ ಬಸ್ ಗಳಲ್ಲಿ ಬರುತ್ತಿದ್ದ 41 ಪ್ರಯಾಣಿಕರನ್ನು ಪೊಲೀಸರು ಮುಂಬೈಗೆ ವಾಪಸ್ ಕಳುಹಿಸಿದ್ದಾರೆ.
ಇದನ್ನೂ ಓದಿ:ಯೂಟ್ಯೂಬ್ ವಿಡಿಯೋದಲ್ಲಿ ಬಂಟ್ವಾಳದ ಯುವತಿ ಫೋಟೋ ದುರ್ಬಳಕೆ: ಸಾಫ್ಟ್ವೇರ್ ದಂಪತಿ ಬಂಧನ
ಬಸ್ ಸಿಬ್ಬಂದಿಗಳಾದ ಅಸ್ಲಂ ಉಲ್ಲಾಖಾನ್, ನೇಮುಥುಲ್ಲಾ ಖಾನ್, ಟಿಪ್ಪು ಸುಲಾನ್ ಹಾಗೂ ಬಸ್ ಮ್ಯಾನೇಜರ್ ವಿರುದ್ಧ ಕರ್ನಾಟಕ ಸಾಂಕ್ರಮಿಕ ರೋಗಗಳ ನಿಯಂತ್ರಣ ಕಾಯ್ದೆಯಡಿ ನಿಪ್ಪಾಣಿ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಸಿಪಿಐ ಸಂಗಮೇಶ ಶಿವಯೋಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ