5 ಲಕ್ಷ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ ಲಾಭ: ಸಿಎಂ

ಮಹಿಳೆಯರು ತಂತ್ರಜ್ಞಾನ ಅಳವಡಿಸಿಕೊಂಡು ನವೀನ ಮಾದರಿ ಉದ್ಯಮ ಪ್ರಾರಂಭಿಸಬೇಕು

Team Udayavani, Dec 23, 2022, 6:34 PM IST

5 ಲಕ್ಷ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ ಲಾಭ: ಸಿಎಂ

ಬೆಳಗಾವಿ: ಸ್ತ್ರೀ ಸಾಮರ್ಥಯ ಯೋಜನೆ ಅನುಷ್ಠಾನಕ್ಕಾಗಿ ಅಯವ್ಯಯದಲ್ಲಿ ರೂ.1000 ಕೋಟಿ ಅನುದಾನ ಮೀಸಲಿರಿಸಲಾಗಿದೆ. ಯೋಜನೆಯಿಂದ ರಾಜ್ಯದ 33 ಸಾವಿರ ಮಹಿಳಾ ಸಂಘದ 5 ಲಕ್ಷ ಮಹಿಳೆಯರಿಗೆ ಲಾಭವಾಗಿದೆ. ಸ್ತ್ರೀ ಸಾಮರ್ಥಯ ಯೋಜನೆಯಿಂದ ದೇಶದಲ್ಲಿ ದೊಡ್ಡ ಕ್ರಾಂತಿ ಉಂಟಾಗಲಿದೆ. ಮಹಿಳಾ ಸ್ವಸಹಾಯ ಸಂಘ ಉತ್ಪನ್ನಗಳ ಮಾರಾಟಕ್ಕೆ ರಾಜ್ಯದ ಐದು ಸ್ಥಳಗಳಲ್ಲಿ ಶಾಶ್ವತ ಪ್ರದರ್ಶನ ಮಾರಾಟ ಮಳಿಗೆ ನಿರ್ಮಾಣ ಮಾಡಲಾಗುವುದು ಎಂದು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಮತ್ತು ಬೆಳಗಾವಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಸಹಯೋಗದೊಂದಿಗೆ, ಬೆಳಗಾವಿಯ ಸರ್ದಾರ್‌ ಹೆ„ಸ್ಕೂಲ್‌ ಮೈದಾನದಲ್ಲಿ ಏರ್ಪಡಿಸಿರುವ ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ಬೃಹತ್‌ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟಿಸಿ ಆರಂಭಿಕ ಗ್ರಾಮೀಣ ಉದ್ಯಮ ಯೋಜನೆಯಡಿ ಸಮುದಾಯ ಉದ್ಯಮ ನಿಧಿ ವಿತರಿಸಿ ಅವರು ಮಾತನಾಡಿದರು.

ಸ್ತ್ರೀ ಸಾಮರ್ಥಯ ಯೋಜನೆ ಮೂಲಕ ದೇಶದ ಅಭಿವೃದ್ಧಿ ಮಾಡುತ್ತಿರುವುದು ನಮ್ಮ ತಾಯಂದಿರು. ಸ್ತ್ರೀ ಸಾಮರ್ಥಯದ ಮೌಲ್ಯಮಾಪನವಾಗಬೇಕು. ಮನೆ ಕೆಲಸ ಮಾಡುವ ಮಹಿಳೆಯರಿಗೂ ಗೌರವ ಸಿಗಬೇಕು. ಅವರ ಕೆಲಸಕ್ಕೆ ಆದಾಯ ಬರಬೇಕು ಎಂದು ಹೇಳಿದರು.

ಮಹಿಳೆಯರ ಅಭಿವೃದ್ಧಿಗಾಗಿ ಮುಂದಿನ ಆಯವ್ಯಯದಲ್ಲಿ ವಿಶೇಷ ಯೋಜನೆ ಘೋಷಣೆ ಮಾಡಲಾಗುವುದು. ಈಗ ಸರ್ಕಾರದಿಂದ ಗ್ರಾ.ಪಂ. ವ್ಯಾಪ್ತಿಯಲ್ಲಿ 2 ಮಹಿಳಾ ಸಂಘಗಳಿಗೆ 1 ಲಕ್ಷ ಸಹಾಯಧನ ಹಾಗೂ ಬ್ಯಾಂಕ್‌ ಸಾಲ ನೀಡಿ ಅವರ ಸ್ವ ಉದ್ಯೋಗ ನೆರವು ನೀಡಲಾಗಿದೆ. ಅಮƒತ ಯೋಜನೆಯಡಿ 5000 ಸಾವಿರ ಮಹಿಳೆಯರಿಗೆ ಸಹಾಯ ಒದಗಿಸಲಾಗಿದೆ.

ಕರಕುಶಲತೆ ಭಾರತೀಯ ನಾರಿಯರಿಗೆ ದೇವರು ಕೊಟ್ಟ ವರ. ಇದಕ್ಕೆ ಮಾರುಕಟ್ಟೆ ಒದಗಿಸಲು ಪ್ರದರ್ಶನ ಮೇಳ ಆಯೋಜಲಾಗಿದೆ. ಆನ್‌ ಲೈನ್‌ ಮಾರುಕಟ್ಟೆಗೆ ಮಹಿಳಾ ಸಂಘಗಳನ್ನು ಜೋಡಿಸಲು ಚಿಂತನೆ ನಡೆಸಲಾಗಿದೆ. ಮಹಿಳೆಯರು ತಂತ್ರಜ್ಞಾನ ಅಳವಡಿಸಿಕೊಂಡು ನವೀನ ಮಾದರಿ ಉದ್ಯಮ ಪ್ರಾರಂಭಿಸಬೇಕು ಎಂದರು.

ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ. ಸಿ.ಎನ್‌. ಅಶ್ವಥ್‌ ನಾರಾಯಣ್‌ ಮಾತನಾಡಿ, ಮುಖ್ಯಮಂತ್ರಿಗಳು ಮಹಿಳಾ ಸ್ವಸಹಾಯ ಸಂಘಗಳಿಗೆ ಶಕ್ತಿ ಹಾಗೂ ನಾಯಕತ್ವ ನೀಡಿ ಮಹಿಳೆಯರ ಸಬಲೀಕರಣಕ್ಕೆ ಹಗಲಿರುಳು ದುಡಿಯತ್ತಿದ್ದಾರೆ. ಮಾರುಕಟ್ಟೆ ಬಲವರ್ಧನೆಗೆ , ಕೌಶಲ್ಯ ಅಭಿವೃದ್ಧಿ ಇ ಕಾಮರ್ಸ್‌ ಸಂಸ್ಥೆಗಳೊಂದಿಗೆ ಒಡಂಬಡಿಕೆಯ ಮಾಡಿಕೊಳ್ಳಲಾಗಿದೆ. ಆವಿಷ್ಕಾರ, ಪ್ರಗತಿಪರ ತಂತ್ರಜ್ಞಾನದಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದು
ಇದರ ಲಾಭ ಮಹಿಳೆಯರಿಗೂ ಲಭಿಸಿ ನಮ್ಮ ನಾಡಿನ ಮಹಿಳೆಯರು ವಿಶ್ವ ಮಟ್ಟದ ಪ್ರಗತಿ ಹೊಂದಬೇಕು ಎಂದು ಹೇಳಿದರು.

ಶಾಸಕ ಅನಿಲ್‌ ಎಸ್‌. ಬೆನಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಬೆಳಗಾವಿ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಗಡಿಯನ್ನು ಹಂಚಿಕೊಂಡಿದ್ದು, ಬೆಳಗಾವಿಯಲ್ಲಿ ಶಾಶ್ವತ ಪ್ರದರ್ಶನ ಹಾಗೂ ಮಾರುಕಟ್ಟೆ ಸ್ಥಾಪಿಸಲು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಸೆಲ್ವಕುಮಾರ್‌ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಗ್ರಾಮೀಣ ಉದ್ಯಮ ಯೋಜನೆಯಡಿ ಕೊಪ್ಪಳ ಹಾಗೂ ಮೈಸೂರಿನ ತಾಲೂಕುಗಳ ಮಹಿಳಾ ಸ್ವ ಸಹಾಯ ಸಂಘಗಳಿಗೆ 50 ಲಕ್ಷ ರೂಪಾಯಿ ಚಕ್‌ ವಿತರಣೆ ಮಾಡಲಾಯಿತಲ್ಲದೆ ತಾಂತ್ರಿಕ ಬೆಂಬಲ ಸಂಸ್ಥೆಗಳಿಗೆ ಒಡಂಬಡಿಕೆಯ ಪತ್ರಗಳನ್ನು ವಿತರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಸರ್ಕಾರದ ಪ್ರಧಾನ ಕಾರ್ಯದರ್ಶಿ ಐ.ಎನ್‌.ಸ್‌ ಪ್ರಸಾದ್‌, ಜಿ.ಪಂ ಸಿಇಒ ದರ್ಶನ.ಎಚ್‌.ವಿ. ಉಪಸ್ಥಿತರಿದ್ದರು. ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಅಭಿಯಾನ ನಿರ್ದೇಶಕ ಡಾ. ರಾಗಪಿಯಾ.ಆರ್‌ ಸ್ವಾಗತಿಸಿದರು.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.