ಕುಡಿವ ನೀರಿನ ಯೋಜನೆಗೆ 7.70 ಕೋಟಿ ರೂ. ಅನುದಾನ
Team Udayavani, Mar 12, 2020, 4:33 PM IST
ಚಿಕ್ಕೋಡಿ: ನೆರೆಯಿಂದ ಹಾನಿಗೊಳಗಾದ ತಾಲೂಕಿನ ಯಡೂರ, ಮಾಂಜರಿ ಗ್ರಾಮದ ಕುಡಿಯುವ ನೀರಿನ ಯೋಜನೆಗೆ ರಾಜ್ಯ ಸರ್ಕಾರ 7.70 ಕೋಟಿ ರೂ. ಅನುದಾನ ಮಂಜೂರು ಮಾಡಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ತಿಳಿಸಿದ್ದಾರೆ.
ಬುಧವಾರ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಮಾಂಜರಿ ಹಾಗೂ ಮಾಂಜರಿವಾಡಿ ಮತ್ತು ಯಡೂರ ಹಾಗೂ ಇತರ ಎರಡು ಗ್ರಾಮಗಳಾದ ಯಡುರುವಾಡಿ, ಹೊಸಯಡೂರ ಗ್ರಾಮಗಳಿಗೆ ಕುಡಿಯುವ ನೀರಿನ ಸೌಕರ್ಯ ಕಲ್ಪಿಸಲು ಅನುದಾನ ಮಂಜೂರಾಗಿದೆ ಎಂದರು.
ಈ ಹಿಂದೆ ಸನ್ 2003-04ರಲ್ಲಿ ಈ ಯೋಜನೆ ಮಂಜೂರಾಗಿತ್ತು. ಆದರೆ ಕಳೆದ ಅಗಸ್ಟ್ ತಿಂಗಳಲ್ಲಿ ಭಾರಿ ಮಳೆಯಿಂದಾಗಿ ಭೀಕರ ಪ್ರವಾಹ ಉಂಟಾಗಿ ನದಿ ಪಾತ್ರದಲ್ಲಿ ಈ ಎರಡು ಗ್ರಾಮ ಪಂಚಾಯತಿಗಳಲ್ಲಿಯ ಕುಡಿಯುವ ನೀರಿನ ಯೋಜನೆಯ ಪಂಪ್ಸೆಟ್ಗಳು, ಪೈಪ್ಲೈನ್ಗಳು ಹಾಗೂ ವಿದ್ಯುತ್ ಉಪಕರಣಗಳು ಪೂರ್ತಿ ಹಾಳಾಗಿದ್ದವು. ಇದರಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸೌಕರ್ಯದಿಂದ ಭಾರಿ ತೊಂದರೆಯಾಗಿತ್ತು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಚಿವ ಕೆ.ಎಸ್. ಈಶ್ವರಪ್ಪನವರು ನೆರೆ ಹಾವಳಿ ವೀಕ್ಷಣೆಗೆ ಈ ಗ್ರಾಮಗಳಿಗೆ ಭೇಟಿ ನೀಡಿದಾಗ ಅವರಿಗೆ ಗ್ರಾಮಸ್ಥರ ಪರವಾಗಿ ಮನವಿ ಸಲ್ಲಿಸಲಾಗಿತ್ತು. ಸಚಿವರು ಮನವಿಗೆ ಸ್ಪಂದಿ ಸಿ ಹಾಗೂ ಅವರು ಖುದ್ದಾಗಿ ಪರಿಶೀಲಿಸಿದ್ದರು. ಸಚಿವರು ಯೋಜನೆಗೆ ಸರಕಾರದಿಂದ ತ್ವರಿತವಾಗಿ ಮಂಜೂರಾತಿ ನೀಡಿವದಾಗಿ ವಾಗ್ಧಾನ ನೀಡಿದ್ದರು. ಅದರಂತೆ ಮಾಂಜರಿ ಮತ್ತು ಮಾಂಜರಿವಾಡಿ ಗ್ರಾಮಗಳಿಗೆ 4 ಕೋಟಿ ಹಾಗೂ ಯಡೂರ ಮತ್ತು ಇತರೆ ಎರಡು(ಯಡುರುವಾಡಿ, ಹೊಸಯಡುರ) ಗ್ರಾಮಗಳಿಗೆ 3.70 ಕೋಟಿ ಅನುದಾನಕ್ಕೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಹೊಸ ಕುಡಿಯುವ ನೀರಿನ ಯೋಜನಗೆ ಅನುಮೋದನೆ ಸಿಕ್ಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ