7ನೇ ಆರ್ಥಿಕ ಗಣತಿ ಕಾರ್ಯಕ್ಕೆ ಚಾಲನೆ


Team Udayavani, Jan 2, 2020, 12:41 PM IST

bg-tdy-3

ಬೆಳಗಾವಿ: ಆರ್ಥಿಕ ಗಣತಿ ಕಾರ್ಯವನ್ನು ಪ್ರಪ್ರಥಮ ಬಾರಿಗೆ ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ಕೈಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಎಸ್‌. ಬಿ. ಬೊಮ್ಮನಹಳ್ಳಿ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 7ನೇ ಆರ್ಥಿಕ ಗಣತಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 7ನೇ ಆರ್ಥಿಕ ಗಣತಿಯ ಕ್ಷೇತ್ರ ಕಾರ್ಯಾಚರಣೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ವಲಯದಲ್ಲಿರುವ ಸಂಘಟಿತ ಹಾಗೂ ಅಸಂಘಟಿತ ವಿಭಾಗಗಳ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಹೊಂದಿರುವ ಕೃಷಿ ಹಾಗೂ ಕೃಷಿಯೇತರ ಉದ್ಯಮಗಳ ಪಟ್ಟಿಯನ್ನು ಪ್ರತಿಯೊಂದು ಕಟ್ಟಡಕ್ಕೆ ಭೇಟಿ ನೀಡಿ ತಯಾರಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು. ಆರ್ಥಿಕ ಗಣತಿಯಲ್ಲಿ ಗಣತಿದಾರರು ತಮಗೆ ನಿರ್ದಿಷ್ಟ ಪಡಿಸಿದ, ಗಡಿಯೊಳಗೆ ಬರುವ ಪ್ರತಿ ಮನೆ, ಕಟ್ಟಡಗಳಿಗೂ ಭೇಟಿ ನೀಡುವುದರ ಮೂಲಕ ಅಲ್ಲಿ ನಡೆಯುವ ಉದ್ಯಮ ಅಥವಾ ವ್ಯಾಪಾರ ಘಟಕಗಳ, ಮಾಲೀಕರ ಲಿಂಗವಾರು, ಸಾಮಾಜಿಕ  ಪಂಗಡವಾರು ಮಾಹಿತಿಯನ್ನು, ಉದ್ಯಮವಾರು ಕೆಲಸಗಾರರ ಮಾಹಿತಿ, ಉದ್ಯಮಿ ಗಾಗಿ ಹಣಕಾಸಿನ ಮೂಲ ಇತ್ಯಾದಿ ಮಾಹಿತಿಯನ್ನು ಕಲೆ ಹಾಕುತ್ತಾರೆ ಎಂದರು.

ಈ ಮಾಹಿತಿಯನ್ನು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮತ್ತು ಯೋಜನೆಗಳನ್ನು ರೂಪಿಸಲು ಮಾತ್ರ ಉಪಯೋಗಿಸಲಾಗುತ್ತಿದ್ದು, ಎಲ್ಲ ಸಂಗ್ರಹಿಸಿದ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದರು.

ಸಾಮಾನ್ಯ ಸೇವಾ ಕೇಂದ್ರದ ಮುಖ್ಯಸ್ಥರು ಗಣತಿದಾರರು ಮತ್ತು ಮೇಲ್ವಿಚಾರರಿಗೆ ಜನಸಾಮಾನ್ಯರೊಂದಿಗೆ ಸೌಹಾರ್ದ ಯುತವಾಗಿ ಸಂವಹನ ನಡೆಸಿ ಅಪೇಕ್ಷಿತ ಮಾಹಿತಿಯನ್ನು ಸಂಗ್ರಹಿಸಲು ಸೂಕ್ತ ನಿರ್ದೇಶನಗಳನ್ನು ನೀಡಲು ಸೂಚಿಸಿದ ಜಿಲ್ಲಾಧಿಕಾರಿಗಳು ಈ ಗಣತಿ ಕಾರ್ಯವನ್ನು ರಾಜ್ಯದಲ್ಲಿಯೇ ಮಾದರಿಯಾಗುವಂತೆ ಜಿಲ್ಲೆಯಾದ್ಯಂತ ನಿರ್ವಹಿಸಿ ಗುಣಮಟ್ಟದ ಅಂಕಿ ಅಂಶಗಳನ್ನು ನಿಗದಿತ ಅವಧಿಯಲ್ಲಿ ಸಂಗ್ರಹಿಸಬೇಕು ಎಂದರು.

ಈ ಗಣತಿ ಕಾರ್ಯವು 2020 ಜನವರಿ 1ರಿಂದ ಮಾರ್ಚ್‌ 31ರವರೆಗೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನಡೆಯಲಿದೆ. ಜನ ಸಾಮಾನ್ಯರು ಸಹ ಸಾಮಾನ್ಯ ಸೇವಾ ಕೇಂದ್ರದಿಂದ ನೀಡಲಾದ ಗುರುತಿನಚೀಟಿಯೊಂದಿಗೆ ತಮ್ಮ ಮನೆ ಮತ್ತು ಉದ್ಯಮಗಳಿಗೆ ಆಗಮಿಸುವ ಗಣತಿದಾರರಿಗೆ ಮತ್ತು ಮೇಲ್ವಿಚಾರಕರಿಗೆ ಸಂಪೂರ್ಣ ಮಾಹಿತಿಯನ್ನು ನೀಡಿ ಸಹಕರಿಸಬೇಕು ಎಂದರು.

ಗಣತಿ ಸಂದರ್ಭದಲ್ಲಿ ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್‌ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಹಂತದ ಅಧಿಕಾರಿ, ಸಿಬ್ಬಂದಿಗಳಿಂದ ಸೂಕ್ತ ಸಹಕಾರ ಅಗತ್ಯವಾಗಿದೆ ಎಂದರು.  ರೇಖಾ ಬಿ. ಶೆಟ್ಟರ, ಪಿ.ಜಿ. ಕುಲಕರ್ಣಿ, ವೀರೇಶ ಪುರಾಣಿಕ, ಕಿರಣ ಜೋಶಿ ಉಪಸ್ಥಿತರಿದ್ದರು.

Ad

ಟಾಪ್ ನ್ಯೂಸ್

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Sarojadevi-1

ಬೆಳ್ಳಿಪರದೆಯ ಬೆರಗು ಕರುನಾಡಿನ ಮಹಿಳಾ ಸೂಪರ್‌ಸ್ಟಾರ್‌ ಬಿ.ಸರೋಜಾ ದೇವಿ

Horoscope: ಈ ರಾಶಿಯವರಿಗೆ ಎಲ್ಲ ರೀತಿಯಲ್ಲೂ ಅನುಕೂಲದ ದಿನ

Horoscope: ಈ ರಾಶಿಯವರಿಗೆ ಎಲ್ಲ ರೀತಿಯಲ್ಲೂ ಅನುಕೂಲದ ದಿನ

Rain: ನಿರಂತರ ಮಳೆ; ಬಂಟ್ವಾಳ, ಉಳ್ಳಾಲ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

Rain: ನಿರಂತರ ಮಳೆ; ಬಂಟ್ವಾಳ, ಉಳ್ಳಾಲ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

Mumbai: ದೇಶದ ಮೊದಲ ಟೆಸ್ಲಾ ಕಾರು ಮಳಿಗೆ ಇಂದು ಲೋಕಾರ್ಪಣೆ

Mumbai: ದೇಶದ ಮೊದಲ ಟೆಸ್ಲಾ ಕಾರು ಮಳಿಗೆ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ವಿಷಯುಕ್ತ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Belagavi: ವಿಷಯುಕ್ತ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

11

Khanapur: ಅಶೋಕ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಕೀಗ ಚಿಕಿತ್ಸೆ

10

Belagavi: ಹಳಿಗೆ ಬಂದ ರಾಚವಿ ಶೈಕ್ಷಣಿಕ ವರ್ಷ

5-belagavi

Belagavi: 5 ಸಾವಿರ ರೂ.ಗಾಗಿ ಜಾನಪದ ಕಲಾವಿದನ ಭೀಕರ ಹ*ತ್ಯೆ

14

Rabkavi Banhatti: ಲೋಕ ಅದಾಲತ್‌ನಲ್ಲಿ 1257 ಪ್ರಕರಣಗಳು ಇತ್ಯರ್ಥ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Sarojadevi-1

ಬೆಳ್ಳಿಪರದೆಯ ಬೆರಗು ಕರುನಾಡಿನ ಮಹಿಳಾ ಸೂಪರ್‌ಸ್ಟಾರ್‌ ಬಿ.ಸರೋಜಾ ದೇವಿ

wild-Animal

Editorial: ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಕ್ರಮ ಅತ್ಯಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.