ಜೆಜೆಎಂಗೆ 8.17 ಕೋಟಿ ಅನುದಾನ ಬಿಡುಗಡೆ
Team Udayavani, Feb 16, 2021, 3:51 PM IST
ಘಟಪ್ರಭಾ: ಜಲಜೀವನ ಮಿಷನ್ ಕಾಮಗಾರಿಗಾಗಿ ರಾಜಾಪುರ, ತುಕ್ಕಾನಟ್ಟಿ, ದಂಡಾಪುರ, ದುರದುಂಡಿ ಹಾಗೂ ಬಡಿಗವಾಡ ಗ್ರಾಪಂಗಳಿಗೆ 8.17 ಕೋಟಿ ಅನುದಾನ ಬಿಡುಗಡೆಯಾಗಿದೆ. ಇದರಿಂದ ಸಾರ್ವಜನಿಕರಿಗೆ ಕುಡಿವ ನೀರಿನ ಸೌಲಭ್ಯಕ್ಕೆ ಮತ್ತಷ್ಟುಅನುಕೂಲವಾಗಲಿದೆ ಎಂದು ಅರಭಾವಿ ಶಾಸಕಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ರಾಜಾಪುರ ಗ್ರಾಮದಲ್ಲಿ 8.17 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಸೋಮವಾರ ಗುದ್ದಲಿ ಪೂಜೆನೆರವೇರಿಸಿ ಅವರು ಮಾತನಾಡಿದರು. ರಾಜಾಪುರದಲ್ಲಿ 1.42 ಕೋಟಿ, ತುಕ್ಕಾನಟ್ಟಿ-1.46ಕೋಟಿ, ದಂಡಾಪುರ ಗ್ರಾಪಂ ವ್ಯಾಪ್ತಿಯಲ್ಲಿ 1.31 ಕೋಟಿ,ದುರದುಂಡಿ ಗ್ರಾಪಂ ವ್ಯಾಪ್ತಿಯಲ್ಲಿ 2.49 ಕೋಟಿ ಹಾಗೂಬಡಿಗವಾಡ ಗ್ರಾಮದಲ್ಲಿ 1.49 ಕೋಟಿ ರೂ. ವೆಚ್ಚದಜೆಜೆಎಂ ಕಾಮಗಾರಿಗೆ ಅನುದಾನ ಬಂದಿದೆ ಎಂದರು.ರಾಜಾಪುರದಲ್ಲಿ 891 ನಲ್ಲಿಗಳಿಗೆ 2.50 ಲಕ್ಷ ಲೀಟರ್ಸಾಮರ್ಥ್ಯದ ಮೇಲ್ಮಟ್ಟದ ಜಲಸಂಗ್ರಹಾಲಯ, ತುಕ್ಕಾನಟ್ಟಿಯಲ್ಲಿ 1478 ನಲ್ಲಿಗಳಿಗೆ 1 ಲಕ್ಷ ಲೀ.ಸಾಮರ್ಥ್ಯದ ಮೇಲ್ಮಟ್ಟದ ಜಲಸಂಗ್ರಹಾಲಯ,ದಂಡಾಪುರ ಗ್ರಾಪಂ ವ್ಯಾಪ್ತಿಯ 888 ನಲ್ಲಿಗಳಿಗೆ 1 ಲಕ್ಷ ಲೀ, ದುರದುಂಡಿ-ಮಹಾಂತೇಶ ನಗರ, ಸತ್ತಿಗೇರಿತೋಟದ 2021 ನಲ್ಲಿಗಳಿಗೆ 3 ಲಕ್ಷ ಲೀ, ಬಡಿಗವಾಡಗ್ರಾಮದಲ್ಲಿ 911 ನಲ್ಲಿಗಳಿಗೆ 2 ಲಕ್ಷ ಲೀ., ಸಾಮರ್ಥ್ಯಮೇಲ್ಮಟ್ಟದ ಜಲಸಂಗ್ರಹಾಲಯ ನಿರ್ಮಿಸಲಾಗುವುದು ಎಂದರು.
ರೈತರ ಜಮೀನುಗಳಿಗೆ ನೀರು ಹಾಯಿಸಲು ಈಗಾಗಲೇ ಘಟಪ್ರಭಾ ಕಾಲುವೆಗಳಿಂದ ನೀರು ಹರಿಯುತ್ತಿದೆ. ಏಪ್ರಿಲ್-ಮೇ ತಿಂಗಳಲ್ಲಿ ಬೇಸಿಗೆ ಬರುವುದರಿಂದರೈತರಿಗೆ ಮತ್ತೂಮ್ಮೆ ಹಿಡಕಲ್ ಜಲಾಶಯದಿಂದ ನೀರುಬಿಡಲು ಕ್ರಮ ಕೈಗೊಳ್ಳಲಾಗುವುದು ಎಂದರು.ನಂತರ ರಾಜಾಪುರ ಹಾಗೂ ಸುತ್ತಲಿನ ಗ್ರಾಮಗಳ ವಿವಿಧ ಸಂಘ ಸಂಸ್ಥೆಗಳ ಪದಾಧಿ ಕಾರಿಗಳು ಶಾಸಕರನ್ನು ಸತ್ಕರಿಸಿದರು.
ತುಕ್ಕಾನಟ್ಟಿ ಜಿಪಂ ಸದಸ್ಯೆ ಕಸ್ತೂರಿ ಕಮತಿ, ತಾಪಂ ಸದಸ್ಯೆ ಸಂಗೀತಾ ಯಕ್ಕುಂಡಿ, ರಾಜ್ಯ ಕೃಷಿ ಮತ್ತುಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕ ರಾಜುಬೈರುಗೋಳ, ಟಿಎಪಿಸಿಎಂಎಸ್ ಉಪಾಧ್ಯಕ್ಷ ವಿಠ್ಠಲ ಪಾಟೀಲ, ಎಪಿಎಂಸಿ ಅಧ್ಯಕ್ಷ ಶ್ರೀಪತಿ ಗಣೇಶವಾಡಿ, ಘಯೋನೀಬ ಮಹಾ ಮಂಡಳ ಅಧ್ಯಕ್ಷ ಅಶೋಕಖಂಡ್ರಟ್ಟಿ, ಪ್ರಭಾ ಶುಗರ್ ಮಾಜಿ ನಿರ್ದೇಶಕ ಬಸವಂತ ಕಮತಿ, ಗ್ರಾಪಂ ಅಧ್ಯಕ್ಷ ಸಿದ್ರಾಯಿ ಮರಿಸಿದ್ದಪ್ಪಗೋಳ, ಪ್ರಭಾ ಶುಗರ್ ನಿರ್ದೇಶಕರಾದ ಲಕ್ಷ್ಮಣ ಗಣಪ್ಪಗೋಳ,ಶಿವಲಿಂಗ ಪೂಜೇರಿ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷಶಿವಮೂರ್ತಿ ಹುಕ್ಕೇರಿ, ಬಸು ಸನದಿ, ತುಕ್ಕಾನಟ್ಟಿ ಗ್ರಾಪಂ ಅಧ್ಯಕ್ಷ ಕುಮಾರ ಮರ್ದಿ, ಬಸವರಾಜ ಪಂಡ್ರೋಳ್ಳಿ,ಮಹಾದೇವ ತುಕ್ಕಾನಟ್ಟಿ, ಭೈರು ಯಕ್ಕುಂಡಿ, ರಾಮಚಂದ್ರ ಪಾಟೀಲ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ