ಪ್ರವಾಹ ನಿಂತರೂ ಸಂಕಷ್ಟ ತಪ್ಪಿಲ್ಲ: ಊರಿಗೆ ಬಂದ 9 ಅಡಿ, 35 ಕೆ.ಜಿ. ಹೆಬ್ಬಾವು
Team Udayavani, Oct 4, 2019, 8:48 AM IST
ಬೆಳಗಾವಿ: ಪ್ರವಾಹದ ಅಬ್ಬರದಿಂದ ಜಲಚರ ಪ್ರಾಣಿಗಳು ಊರೊಳಗೆ ಪ್ರವೇಶಿಸುತ್ತಿದ್ದು, ಬಳ್ಳಾರಿ ನಾಲಾ ಪಕ್ಕದಲ್ಲಿರುವ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ 9 ಅಡಿ ಉದ್ದದ ಹೆಬ್ಬಾವು ಸಿಕ್ಕಿದೆ.
ಗ್ರಾಮದ ಅಶೋಕ ಮಂಡು ಎಂಬವರು ತಮ್ಮ ಹೊಲದಲ್ಲಿ ಕೃಷಿ ಚಟುವಟಿಕೆ ನಡೆಸುತ್ತಿದ್ದಾಗ ಹೆಬ್ಬಾವು ಕಣ್ಣಿಗೆ ಬಿದ್ದಿದೆ. ಸುಮಾರು 35 ಕೆ.ಜಿ.ಗೂ ಹೆಚ್ಚು ತೂಕವುಳ್ಳ ಈ ಹೆಬ್ಬಾವು ಕಂಡು ಭಯಭೀತರಾಗಿದ್ದಾರೆ. ಹಾವು ಹಿಡಿಯುವ ತಜ್ಞರಾದ ಆನಂದ ಚಿಟ್ನಿ, ನಿರ್ಧರಾ ಚಿಟ್ನಿ ದಂಪತಿ ಬಂದು ಹೆಬ್ಬಾವು ರಕ್ಷಿಸಿದ್ದಾರೆ.
ಹೆಬ್ಬಾವು ಕಂಡ ಕೂಡಲೇ ಆತಂಕಗೊಂಡ ಗ್ರಾಮಸ್ಥರು ಕೂಡಲೇ ಸಮೀಪದ ಮೋದಗಾ ಗ್ರಾಮದ ಮೈನು ಎಂಬ ವ್ಯಕ್ತಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಮೈನು ಹೆಬ್ಬಾವು ಹಿಡಿದಿದ್ದಾರೆ. ಅದನ್ನು ಚೀಲದಲ್ಲಿ ತುಂಬಿಕೊಂಡು ತಂದಿದ್ದಾರೆ. ಬಳಿಕ ಯಳ್ಳೂರ ಗ್ರಾಮದ ಚಿಟ್ನಿ ದಂಪತಿ ಬೃಹತ್ ಗಾತ್ರದ ಹೆಬ್ಬಾವನ್ನು ಖಾನಾಪುರದ ಕಾಡಿಗೆ ಬಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ