ಪುಣೆಯಿಂದ ಮಗನನ್ನು ಕರೆಯಲು ಹೋಗಿದ್ದ ಬೆಳಗಾವಿ ದಂಪತಿ ದುರ್ಮರಣ
Team Udayavani, May 10, 2020, 8:56 AM IST
ಬೆಳಗಾವಿ: ಪುಣೆಯಿಂದ ಕೊಲ್ಲಾಪುರಕ್ಕೆ ಮಗನನ್ನು ಕರೆದುಕೊಂಡು ಹೊರಟಿದ್ದ ಬೆಳಗಾವಿ ನಗರದ ನಾನಾವಾಡಿಯ ದಂಪತಿ ಮಹಾರಾಷ್ಟ್ರದ ಕರಾಡ ತಾಲೂಕಿನ ಉಂಬ್ರಜ್ ಸಮೀಪ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ನಾನಾವಾಡಿಯ ಅಮಿತ್ ಅಪ್ಪಾಜಿ ಗಾವಡೆ (38) ಹಾಗೂ ಡಾ. ಅನುಜಾ ಅಮೀತ್ ಗಾವಡೆ (35) ಅಸುನೀಗಿದ್ದಾರೆ. ಲಾಕ್ ಡೌನ್ ದಿಂದಾಗಿ ಪುಣೆಯಲ್ಲಿಯೇ ಸಿಕ್ಕಿ ಹಾಕಿಕೊಂಡಿದ್ದ ಮಗನನ್ನು ಕರೆದುಕೊಂಡು ಬರಲು ಈ ದಂಪತಿ ವ್ಯಾಗನಾರ್ ಕಾರ್ ನಲ್ಲಿ ಹೊರಟಿದ್ದರು.
ಆದರೆ ಕರಾಡ ತಾಲೂಕಿನ ಉಂಬ್ರಜ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಢಿಕ್ಕಿ ಹೊಡೆದಿದೆ. ಕಾರ್ ನಲ್ಲಿದ್ದ ದಂಪತಿ ಮೃತಪಟ್ಟಿದ್ದಾರೆ. ಚಾಲಕ ಕಾರಿನಲ್ಲಿಯೇ ಸಿಕ್ಕಿ ಹಾಕಿಕೊಂಡಿದ್ದನು. ಕಟರ್ ಸಹಾಯದಿಂದ ಬಾಗಿಲು ಮುರಿದು ಆತನನ್ನು ಹೊರಗೆ ತೆಗೆದು ರಕ್ಷಿಸಲಾಗಿದೆ.
ದಂಪತಿಯ ಮೃತದೇಹವನ್ನು ಶನಿವಾರ ಬೆಳಗಾವಿಗೆ ತಂದು ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ
HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ
ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ
MUST WATCH
ಹೊಸ ಸೇರ್ಪಡೆ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು