ಜಾಕ್‌ಪಾಟ್‌ ಜಿಲ್ಲೆ ಬೆಳಗಾವಿಗೆ ಭಾರೀ ನಿರಾಸೆ  

ಬಿಎಸ್‌ವೈ ಕಾಲದಲ್ಲಿ ನಾಲ್ಕು ಸ್ಥಾನ ಸಿಕ್ಕಿತ್ತು­ಈಗ ಕೇವಲ ಎರಡನೇ ಸ್ಥಾನ­ಎಲ್ಲರ ಲೆಕ್ಕಾಚಾರ ತಲೆಕೆಳಗೆ

Team Udayavani, Aug 5, 2021, 6:38 PM IST

f

ವರದಿ: ಕೇಶವ ಆದಿ

ಬೆಳಗಾವಿ: ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಒಂದರ ಮೇಲೊಂದರಂತೆ ಜಾಕ್‌ಪಾಟ್‌ ಹೊಡೆದಿದ್ದ ಗಡಿ ಜಿಲ್ಲೆ ಬೆಳಗಾವಿ, ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಮಾತ್ರ ನಿರಾಸೆ ಆನುಭವಿಸಬೇಕಾಗಿದೆ. ಕನಿಷ್ಟ ನಾಲ್ವರು ಸಚಿವರಾಗುವುದು ಖಚಿತ ಎಂದೇ ಭಾವಿಸಿದ್ದ ಜಿಲ್ಲೆಯ ಜನ ಎರಡಕ್ಕೇ ತೃಪ್ತಿಪಟ್ಟುಕೊಳ್ಳಬೇಕಾಗಿದೆ.

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗಿನಿಂದ ಜಿಲ್ಲೆಯಲ್ಲಿ ಯಾರ್ಯಾರು ಸಚಿವರಾಗಬಹುದು ಎಂಬ ಲೆಕ್ಕಾಚಾರ ನಿರಂತರವಾಗಿ ನಡೆದೇ ಇತ್ತು. ಹಿರಿಯ ಶಾಸಕರ ಜತೆ ಯುವ ಶಾಸಕರು ಸಹ ಮಂತ್ರಿಗಿರಿಗಾಗಿ ಎಲ್ಲಿಲ್ಲದ ಪ್ರಯತ್ನ ಮಾಡಿದ್ದರು. ಆದರೆ ಎಲ್ಲರ ಲೆಕ್ಕಾಚಾರವೂ ಕೊನೆಗೆ ತಲೆಕೆಳಗಾಯಿತು. ಇಬ್ಬರಿಗೆ ಸಚಿವ ಸ್ಥಾನ ಎನ್ನುವದಕ್ಕಿಂತ ಹಿಂದಿನ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಲಕ್ಷ್ಮಣ ಸವದಿ ಅವರನ್ನು ಕೈಬಿಟ್ಟಿದ್ದು ಹಾಗೂ ಜಾರಕಿಹೊಳಿ ಸಹೋದರರ ಹೆಸರನ್ನು ಪರಿಗಣಿಸದೇ ಇದ್ದದ್ದು ಜಿಲ್ಲೆಯ ಮಟ್ಟಿಗೆ ದೊಡ್ಡ ಆಘಾತ.

ಲಕ್ಷ್ಮಣ ಸವದಿ ಹಾಗೂ ಬಾಲಚಂದ್ರ ಜಾರಕಿಹೊಳಿ ಸಚಿವರಾಗುವುದು ಖಚಿತ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಅಂದುಕೊಂಡಂತೆ ಯಾವುದೂ ನಡೆಯಲಿಲ್ಲ. ಅನುಭವ ಹಾಗೂ ಪ್ರಭಾವ ಎರಡಕ್ಕೂ ಮನ್ನಣೆ ಸಿಕ್ಕಿಲ್ಲ. ಬಿಜೆಪಿ ವರಿಷ್ಠರು ಹಾಗೂ ಆರ್‌ಎಸ್‌ಎಸ್‌ ನಾಯಕರ ಜತೆ ಉತ್ತಮ ಸಂಪರ್ಕ ಹೊಂದಿದ್ದ ಲಕ್ಷ್ಮಣ ಸವದಿ ಸಚಿವರಾಗುವುದರಲ್ಲಿ ಅನುಮಾನ ಇಲ್ಲ ಎಂದೇ ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ಅಂದುಕೊಂಡಿದ್ದರು. ಸವದಿ ಸಹ ತಮ್ಮ ಮಟ್ಟದಲ್ಲಿ ಎಲ್ಲ ಪ್ರಯತ್ನ ಮಾಡಿದ್ದರು. ಸಚಿವ ಸ್ಥಾನಕ್ಕಾಗಿ ದೆಹಲಿಗೆ ಹೋಗಿ ಬಂದಿದ್ದರು. ಆದರೆ ಅವರ ಲೆಕ್ಕಾಚಾರ ಈ ಬಾರಿ ಕೈಕೊಟ್ಟಿತು. ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ತಪ್ಪಿದ್ದು ಏಕೆ, ಇದರ ಹಿಂದೆ ಯಾರ ತಂತ್ರ ಕೆಲಸ ಮಾಡಿದೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಇನ್ನು ಸಚಿವ ಸ್ಥಾನಕ್ಕೆ ಕುಡಚಿ ಶಾಸಕ ಪಿ.ರಾಜೀವ ಅವರ ಹೆಸರು ಬಹಳ ಜೋರಾಗಿ ಓಡಾಡುತ್ತಿತ್ತು. ಇನ್ನೊಂದು ಕಡೆ ತಮಗೆ ಸಚಿವ ಸ್ಥಾನ ಕೊಡದೇ ಇದ್ದರೆ ರಾಜೀವ ಅವರಿಗೆ ಕೊಡಬೇಕು ಎಂದು ಲಕ್ಷ್ಮಣ ಸವದಿ ಸಹ ಪ್ರಯತ್ನ ಮಾಡಿದ್ದರು ಎನ್ನಲಾಗುತ್ತಿದೆ. ಹೀಗಿರುವಾಗ ಲೆಕ್ಕಾಚಾರ ಎಲ್ಲಿ ತಪ್ಪಿತು ಎಂಬುದು ಅವರ ಬೆಂಬಲಿಗರನ್ನು ಕಾಡುತ್ತಿದೆ.

ಸವದತ್ತಿ ಶಾಸಕ ಹಾಗೂ ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ ಸಹ ಸಚಿವ ಸ್ಥಾನಕ್ಕೆ ಪ್ರಯತ್ನ ಮಾಡಿದ್ದರು. ತಮಗೆ ಅವಕಾಶ ನೀಡದೇ ಇದ್ದರೆ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂಬ ಸಂದೇಶವನ್ನು ಸಹ ಪಕ್ಷದ ವರಿಷ್ಠರಿಗೆ ರವಾನಿಸಿದ್ದರು. ಆದರೆ ಇದು ವರಿಷ್ಠರ ಮೇಲೆ ಯಾವುದೇ ಪರಿಣಾಮ ಬೀರಲೇ ಇಲ್ಲ. ಇನ್ನೊಂದು ಕಡೆ ಜೈನ ಸಮುದಾಯದ ಅಭಯ ಪಾಟೀಲ ಸಹ ಸಚಿವ ಸ್ಥಾನಕ್ಕಾಗಿ ತಮ್ಮದೇ ಆದ ಪ್ರಯತ್ನ ಮಾಡಿದ್ದರು. ಆದರೆ ಅವರ ಪ್ರಯತ್ನ ಸಾಕಾಗಲಿಲ್ಲ. ಸಚಿವ ಸ್ಥಾನದ ಆಸೆ ಹೊಂದಿದ್ದ ಅಭಯ ಗೆ ಮತ್ತೆ ನಿರಾಸೆ ಎದುರಾಗಿದೆ.

ಇನ್ನು ನಾನು ಎಂಟು ಬಾರಿ ಶಾಸಕನಾಗಿದ್ದೇನೆ. ಮುಖ್ಯಮಂತ್ರಿಯಾಗುವ ಅರ್ಹತೆ ಇದೆ ಎನ್ನುತ್ತಲೇ ಇರುವ ಹುಕ್ಕೇರಿಯ ಶಾಸಕ ಉಮೇಶ ಕತ್ತಿ ಮತ್ತೂಮ್ಮೆ ಸಚಿವ ಸ್ಥಾನ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯಡಿಯೂರಪ್ಪ ಆಪ್ತರ ಬಳಗದಲ್ಲಿ ಗುರುತಿಸಿಕೊಂಡಿರುವ ಕತ್ತಿ ಅವರಿಗೆ ಇದರಿಂದ ನಿರಾಸೆ ಆಗಿಲ್ಲ. ಬದಲಾಗಿ ಒಳ್ಳೆಯ ಉಡುಗೋರೆಯೇ ಸಿಕ್ಕಿದೆ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Delhi Liquor Scam: ತಿಹಾರ್‌ ಜೈಲಿನೊಳಗೆ ಬಿಆರ್‌ ಎಸ್‌ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ

Delhi Liquor Scam:ತಿಹಾರ್‌ ಜೈಲಿನೊಳಗೆ ಬಿಆರ್‌ ಎಸ್‌ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ

Liquor Policy Case: ಅರವಿಂದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ

Liquor Policy Case: ಅರವಿಂದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ

Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್‌ ಕದತಟ್ಟಿದ ಕೇಜ್ರಿವಾಲ್

Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್‌ ಕದತಟ್ಟಿದ ಕೇಜ್ರಿವಾಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.