ರಾತ್ರಿ ಪ್ರವಾಹಕ್ಕೆ ಸಿಲುಕಿ12 ಗಂಟೆಗಳನ್ನು ಮರದ ಮೇಲೆ ಕಳೆದು ಪ್ರಾಣ ಉಳಿಸಿಕೊಂಡ ವ್ಯಕ್ತಿ!
ಕೊಲ್ಲಾಪುರ ಸಾಂಗ್ಲಿ ಜಿಲ್ಲೆಯ ಗಡಿಯಲ್ಲಿರುವ ವಾರಣಾ ನದಿಯಲ್ಲಿ ಘಟನೆ
Team Udayavani, Jul 28, 2023, 7:47 PM IST
ಚಿಕ್ಕೋಡಿ:ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರ-ಸಾಂಗ್ಲಿ ಜಿಲ್ಲೆಯ ಗಡಿಭಾಗದ ಮಾಂಗ್ಲೆ-ಕಾಖೆ ಸೇತುವೆ ಬಳಿ ಗುರುವಾರ ರಾತ್ರಿ 9 ಗಂಟೆಯ ವೇಳೆಯಲ್ಲಿ ಪ್ರವಾಹಕ್ಕೆ ಸಿಲುಕಿದ ವ್ಯಕ್ತಿಯೋರ್ವ 12 ಗಂಟೆಗಳ ಕಾಲ ಮರದ ಮೇಲೆ ಜೀವ ಕೈಯಲ್ಲಿ ಹಿಡಿದು ಕುಳಿತಿದ್ದು, ಅವರನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ.
ಮಹಾರಾಷ್ಟ್ರದ ಲದೇವಾಡಿ ಗ್ರಾಮದ ಬಜರಂಗ ಖಾಮಕರ್ ( 58) ನೀರಿಗೆ ಬಿದ್ದ ವ್ಯಕ್ತಿ. ಈ ವೇಳೆ ಪ್ರವಾಹದ ನೀರಿನಲ್ಲಿ ಸುಮಾರು 700 ಮೀಟರ್ ನಷ್ಟು ಹರಿದು ನದಿಯ ಮಧ್ಯದಲ್ಲಿರುವ ಮರಕ್ಕೆ ಅಪ್ಪಳಿಸಿದರು. ಈ ಸಮಯದಲ್ಲಿ, ಅವರು ಮರದ ಕೊಂಬೆಗಳ ಬೆಂಬಲದೊಂದಿಗೆ ಇಡೀ ರಾತ್ರಿ ಮರದ ಮೇಲೆ ಕುಳಿತುಕೊಂಡು ಪ್ರಾಣ ಉಳಿಸಿಕೊಂಡಿದ್ದಾರೆ.
ರಾತ್ರಿ ಸಹಾಯಕ್ಕಾಗಿ ಕರೆದರೂ ಯಾರೂ ಬರಲಿಲ್ಲ. ಆದರೆ ಬೆಳಗ್ಗೆ ಹೊಲದಲ್ಲಿ ಕೆಲಸ ಮಾಡುತ್ತಿದ್ದವರನ್ನು ಕಂಡು ಸಹಾಯಕ್ಕಾಗಿ ಕೂಗಿಕೊಂಡಿದ್ದಾರೆ. ಈ ವೇಳೆ ಹೊಲದಲ್ಲಿರುವ ಜನರು ಕೊಲ್ಹಾಪುರ ಹಾಗೂ ಸಾಂಗ್ಲಿ ಜಿಲ್ಲಾ ಆಡಳಿತಕ್ಕೆ ಘಟನೆಯನ್ನು ತಿಳಿಸಿದರು. ಬಳಿಕ ಎನ್ಡಿಆರ್ಎಫ್ ತಂಡ ರಕ್ಷಣಾ ಕಾರ್ಯ ಕೈಗೆತ್ತಿಕೊಂಡಿದ್ದು, ಸುಮಾರು 12 ಗಂಟೆಗಳ ಬಳಿಕ ಬೆಳಗ್ಗೆ 10.30ರ ವೇಳೆಗೆ ದೋಣಿಯ ಸಹಾಯದಿಂದ ವ್ಯಕ್ತಿಯನ್ನು ಸುರಕ್ಷಿತವಾಗಿ ಹೊರಕ್ಕೆ ತರಲಾಯಿತು. ಬಜರಂಗನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ, ಆರೋಗ್ಯವಾಗಿರುವುದಾಗಿ ವೈದ್ಯರು ಹೇಳಿದ ಬಳಿಕ ಮನೆಗೆ ಕಳುಹಿಸಿದ್ದಾರೆ.
ಈ ಸಂದರ್ಭದಲ್ಲಿ ಶಿರಾಳಾ ತಹಶೀಲ್ದಾರ್ ಶ್ಯಾಮಲಾ ಖೋತ್ ಪಾಟೀಲ್, ಪನ್ಹಾಳಾ ತಹಶೀಲ್ದಾರ್ ಮಾಧವಿ ಶಿಂಧೆ ಜಾಧವ, ಶಿರಾಳಾ ಪೊಲೀಸ್ ನಿರೀಕ್ಷಕ ಸಿದ್ಧೇಶ್ವರ ಜಂಗಮ, ಕೋಡೋಲಿ ಪೊಲೀಸ್ ಠಾಣೆ ಪಿಎಸ್ ಐ ಶೀತಲಕುಮಾರ ದೋಯಿಜಡ ಉಪಸ್ಥಿರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ