ಪ್ರತಿ ಜಿಲ್ಲೆಗೊಂದು ವಿಶೇಷ ನ್ಯಾಯಾಲಯ: ಸಚಿವ ಆರಗ ಜ್ಞಾನೇಂದ್ರ
Team Udayavani, Dec 26, 2022, 8:47 PM IST
ಬೆಳಗಾವಿ: ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದ ವಿಚಾರಣೆ ನಡೆಸಲು ಪ್ರತಿ ಜಿಲ್ಲೆಗೆ ಒಂದರಂತೆ ವಿಶೇಷ ನ್ಯಾಯಾಲಯ ಸ್ಥಾಪಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಮೇಲ್ಮನೆಯಲ್ಲಿ ಸೋಮವಾರ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಚಲವಾದಿ ನಾರಾಯಣ ಸ್ವಾಮಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಪೋಕ್ಸೊ ಕಾಯ್ದೆಯನ್ನು ಅನುಷ್ಠಾನ ಗೊಳಿಸಲಾಗುತ್ತಿದೆ. ಈ ಪ್ರಕರಣಗಳಲ್ಲಿ ನೊಂದವರ ಪರವಾಗಿ ನ್ಯಾಯಾಲಯಗಳಲ್ಲಿ ಸಮರ್ಥವಾಗಿ ವಾದ ಮಂಡಿಸಲು ವಿಶೇಷ ಸರಕಾರಿ ಅಭಿಯೋಜಕರನ್ನು ನೇಮಿಸಲಾಗಿದೆ ಎಂದರು.
ಈಗಾಗಲೇ ಮಹಿಳಾ ಸಹಾಯವಾಣಿ, ಮಕ್ಕಳ ಸಹಾಯವಾಣಿ, ಸ್ಪಂದನಾ ಸಹಾಯವಾಣಿಗಳು ಕಾರ್ಯ ನಿರ್ವಹಿಸುತ್ತಿವೆ. ಪೊಲೀಸರ ಗಸ್ತು ಪ್ರಮಾಣ ಹೆಚ್ಚಿಸಲಾಗಿದೆ. ಎಫ್ಐಆರ್ ದಾಖಲಿಸಿದ ಬಳಿಕ ವಿಳಂಬ ಮಾಡದೆ ಚಾರ್ಜ್ಶೀಟ್ ಸಲ್ಲಿಸಲು ಸೂಚಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್