ನರ್ಸ್ಗೆ ಅಶ್ಲೀಲ ಮೆಸೇಜ್ ಕಳಿಸಿದ್ಧ ಮುಖ್ಯಾಧ್ಯಾಪಕ ಅಮಾನತು
Team Udayavani, Aug 6, 2021, 2:02 PM IST
ಚನ್ನಮ್ಮನ ಕಿತ್ತೂರು: ತಾಲೂಕಿನ ಸರಕಾರಿ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಮಾನಸಿಕ ಕಿರಕುಳ ನೀಡುತ್ತಿರುವ ದೂರು ಬಂದ ಹಿನ್ನೆಲೆ ದೇಗಾಂವ ಶಾಲೆಯ ಮುಖ್ಯಾಧ್ಯಾಪಕ ಸುರೇಶ ಚವಲಗಿ ಅವರನ್ನು ಅಮಾನತು ಮಾಡಿ ಬೆಳಗಾವಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎ.ಬಿ.ಪುಂಡಲೀಕ ಆದೇಶ ಹೊರಡಿಸಿದ್ದಾರೆ.
ದೇಗಾಂವ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕ ಸುರೇಶ ಚವಲಗಿ ತಮಗೆ ವಾಟ್ಸ್ ಆ್ಯಪ್ ನಲ್ಲಿ ಅಶ್ಲೀಲ ಮೆಸೇಜ್ ಕಳುಹಿಸಿ ಮಾನಸಿಕ ಕಿರಕುಳ ನೀಡುತ್ತಿದ್ದಾರೆಂದು ತಾಲೂಕಿನ ಸರಕಾರಿ ಆಸ್ಪತ್ರೆಯ ನರ್ಸ್ ಒಬ್ಬರು ತಮ್ಮ ಸಂಬಂಧಿಕರಿಗೆ ಮತ್ತು ಗ್ರಾಮಸ್ಥರಿಗೆ ತಿಳಿಸಿದ್ದರು. ಈ ಹಿನ್ನೆಲೆ ಗ್ರಾಮದ ಶಾಲೆಯಲ್ಲಿ ಬುಧವಾರ ಗ್ರಾಮಸ್ಥರು ಮುಖ್ಯಾಧ್ಯಾಪಕನಿಗೆ ಧರ್ಮದೇಟು ನೀಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಟಿ.ಬಳಿಗಾರ ಅವರಿಗೆ ಲಿಖೀತ ದೂರು ನೀಡಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ವರದಿ ಆಧರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಇಲಾಖಾ ವಿಚಾರಣೆ ಬಾಕಿ ಇಟ್ಟು ಸೇವೆಯಿಂದ ಅಮಾನತುಗೊಳಿಸಲಾಗಿದೆ.