ಡ್ರಗ್ಸ್‌ ದಂಧೆ ತಡೆಗೆ ಎಬಿವಿಪಿ ಆಗ್ರಹ


Team Udayavani, Sep 4, 2020, 5:16 PM IST

ಡ್ರಗ್ಸ್‌ ದಂಧೆ ತಡೆಗೆ ಎಬಿವಿಪಿ ಆಗ್ರಹ

ಸಾಂದರ್ಭಿಕ ಚಿತ್ರ

ಬೆ‌ಳಗಾವಿ: ಮಾದಕ ಪದಾರ್ಥಗಳ ವ್ಯವಹಾರದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಮಾದಕ ಪದಾರ್ಥಗಳ ಜಾಲ ದೊಡ್ಡಮಟ್ಟದಲ್ಲಿ ವ್ಯಾಪಿಸಿದೆ.ಕನ್ನಡ ಚಲನಚಿತ್ರ ರಂಗದ ನಟ-ನಟಿಯರು, ಪ್ರಭಾವಿಗಳು ಹಾಗೂ ರಾಜಕಾರಣಿಗಳ ಮಕ್ಕಳು ಇದರಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಶಾಲಾ- ಕಾಲೇಜುಗಳಲ್ಲೂ ಸಹ ಇದರ ದಂಧೆ ನಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಈ ಕಾರಣದಿಂದ ಇದರ ವ್ಯವಹಾರ ಹಾಗೂ ಜಾಲದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ದೇಶದ್ರೋಹಿ ಪ್ರಕರಣ ದಾಖಲಿಸಿ ಶಿಸ್ತುಕ್ರಮ ಜರುಗಿಸಬೇಕು. ಇದನಿಯಂತ್ರಣಕ್ಕಾಗಿ ಕಠಿಣ  ಕಾನೂನು ರೂಪಿಸಬೇಕು ಎಂದು ಒತ್ತಾಯಿಸಿದರು.

ಎಬಿವಿಪಿ ಮಹಾನಗರ ಘಟಕದ ಕಾರ್ಯದರ್ಶಿ ಕಿರಣ ದುಕಾನದಾರ್‌, ರೋಹಿತ್‌ ಉಮನಾಬಾದಿಮಠ, ಅಶ್ವಿ‌ನಿ ಕಂಚಿ, ಎಸ್‌.ಕಾರ್ತಿಕ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮನವಿ : ಬೈಲಹೊಂಗಲ: ಡ್ರಗ್ಸ್‌ ದಂಧೆ ಹಿಂದಿರುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲು ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಕಾರ್ಯಕರ್ತರು ಉಪವಿಭಾಗಾಧಿಕಾರಿಗೆ ಗುರುವಾರ ಮನವಿ ಸಲ್ಲಿಸಿದರು.

ಸ್ಯಾಂಡಲ್‌ವುಡ್‌ನೊಂದಿಗೆ ನಂಟಿರುವ ಡ್ರಗ್ಸ್‌ ಜಾಲವನ್ನು ಎನ್‌ಸಿಬಿ ಅಧಿಕಾರಿಗಳು ಬೇಧಿ ಸಿದ್ದು, ಪ್ರತಿಷ್ಠಿತ ಶ್ರೀಮಂತ ಕುಟುಂಬದ ವ್ಯಕ್ತಿಗಳು, ಸಿನಿಮಾ ನಟ-ನಟಿಯರು, ರಾಜಕಾರಣಿ ಮಕ್ಕಳು ಇದರ ಹಿಂದೆ ಇರುವ ಬಗ್ಗೆ ಆರೋಪ ಕೇಳಿ ಬರುತ್ತಿವೆ. ಡ್ರಗ್ಸ್‌ ಜಾಲದ ಪಿಡುಗಿನಿಂದ ದೇಶದ ಯುವಶಕ್ತಿಯನ್ನು ರಕ್ಷಿಸಲು ಡ್ರಗ್ಸ್‌ ಜಾಲವನ್ನು ಬುಡ ಸಮೇತ ನಿರ್ಮೂಲನೆ ಮಾಡಲು ರಾಜ್ಯ ಸರಕಾರ ಪ್ರಯತ್ನಿಸಬೇಕು.

ರಾಜ್ಯದ ಕೆಲ ಶಾಲಾ-ಕಾಲೇಜುಗಳಲ್ಲಿ ಡ್ರಗ್ಸ್‌ ಜಾಲ ವ್ಯವಸ್ಥಿತವಾಗಿ ಕೋಡ್‌ ವರ್ಡ್‌ಗಳ ಮೂಲಕ ಈ ದಂಧೆ ನಡೆಸುತ್ತಿದೆ. ಇದರಿಂದ ಕಾಲೇಜಿನಲ್ಲಿ ಡ್ರಗ್ಸ್‌ಗೆ ದಾಸರಾಗಿದ್ದು, ಇದು ಒಂದು ಸಾಮಾಜಿಕ ಪಿಡುಗಾಗಿ ಪರಿಣಮಿಸಿ, ಒಂದು ರೀತಿಯ ಪ್ಯಾಶನ್‌ ಆಗಿ ಯುವಕರಲ್ಲಿ ಬೆಳೆಯುತ್ತಿದೆ. ಈ ಜಾಲದ ಹಿಂದಿರುವ ಪ್ರಭಾವಿಗಳ ಹಸ್ತಕ್ಷೇಪ, ಒತ್ತಡಕ್ಕೆ ಮಣಿಯದೆ ಪೊಲೀಸ್‌ ಇಲಾಖೆ ಸಂಪೂರ್ಣ ಸ್ವತಂತ್ರವಾಗಿ ತನಿಖೆ ನಡೆಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ. ಜಿಲ್ಲಾ ಸಂಚಾಲಕ ಸಿದ್ಧಾರೂಢ

ಹೊಂಡಪ್ಪನ್ನವರ, ತಾಲೂಕು ಸಂಚಾಲಕ ಅಪ್ಪಣ್ಣ ಹಡಪದ, ಸಚಿನ ತಲ್ಲೂರ, ಸಂಜು ಪಂಚನ್ನವರ ಇದ್ದರು.

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.