ಪೊಲೀಸ್‌ ಇಲಾಖೆ ನಂಬರ್‌ ಒನ್‌ಗೆ ಕ್ರಮ

|ರಾಜ್ಯದ ಪ್ರತಿ ಠಾಣೆಗೆ ಇನ್ನೂ ಇಬ್ಬರು ಪಿಎಸ್‌ಐ ನೇಮಕ |ನಗರದಲ್ಲಿ ನಿರ್ಮಿಸಿದ ಪೊಲೀಸ್‌ ವಸತಿಗೃಹ ಉದ್ಘಾಟನೆ

Team Udayavani, Jul 2, 2019, 8:15 AM IST

bg-tdy-1..

ಬೆಳಗಾವಿ: ಪೊಲೀಸ್‌ ಸಿಬ್ಬಂದಿಗೆ ನಿರ್ಮಿಸಿದ ವಸತಿ ಗೃಹಗಳನ್ನು ಗೃಹ ಸಚಿವ ಎಂ.ಬಿ. ಪಾಟೀಲ ಉದ್ಘಾಟಿಸಿದರು.

ಬೆಳಗಾವಿ: ಪೊಲೀಸ್‌ ಇಲಾಖೆಯನ್ನು ಸಶಕ್ತಗೊಳಿಸಲು ಮತ್ತು ದೇಶದಲ್ಲಿಯೇ ನಂಬರ್‌ ಒನ್‌ ಆಗಲು ಕ್ರಮ ಕೈಗೊಳ್ಳಲಾಗುತ್ತಿದೆ. ಹಣಕಾಸಿನ ವ್ಯವಹಾರ, ಅಪರಾಧಗಳನ್ನು ತಡೆಗೆ ಪೊಲೀಸ್‌ ವ್ಯವಸ್ಥೆ ಇತರರಿಗೆ ಮಾದರಿ ಆಗಲಿದೆ ಎಂದು ಗೃಹ ಸಚಿವ ಎಂ.ಬಿ. ಪಾಟೀಲ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಬೆಳಗಾವಿ ವಿಭಾಗ ಮಟ್ಟದ ಐದು ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲಾಖೆಯನ್ನು ಸುಧಾರಿಸಲು ಅಗತ್ಯ ಕ್ರಮಕ್ಕೆ ಮುಂದಾಗಿದ್ದು, ಎಲ್ಲ ಅಪರಾಧಗಳ ಸೂಕ್ತ ತನಿಖೆ ನಡೆಸುವ ನಿಟ್ಟಿನಲ್ಲಿ ಪ್ರತಿ ಪೊಲೀಸ್‌ ಠಾಣೆಗೆ ಇಬ್ಬರು ಪಿಎಸ್‌ಐಗಳನ್ನು ನೇಮಕ ಮಾಡಲಾಗುವುದು ಎಂದರು.

ಕಾನೂನು ಮತ್ತು ಸುವ್ಯವಸ್ಥೆ ಹಾಗೂ ತನಿಖೆಗಾಗಿ ತಲಾ ಒಬ್ಬರನ್ನು ನೇಮಕ ಮಾಡಲಾಗುವುದು. ತನಿಖೆ ಚುರುಕು ಪಡೆದು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು. ಈ ನಿಟ್ಟಿನಲ್ಲಿ ಎಲ್ಲ ಸರ್ಕಾರಿ ಅಭಿಯೋಜಕರ ಜೊತೆಗೆ ಚರ್ಚಿಸಲಾಗಿದೆ. ಈ ಬಗ್ಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.

ಬೆಳಗಾವಿ ವಿಭಾಗ ಮಟ್ಟದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲಾಗಿದೆ. ಅಪರಾಧ ಚಟುವಟಿಕೆ, ಕಾನೂನು ಮತ್ತು ಸುವ್ಯವಸ್ಥೆ, ಕೊಲೆ, ಡಕಾಯಿತಿ, ಕಳ್ಳತನ, ಸರಗಳ್ಳತನ, ವಾಹನ ಕಳ್ಳತನ, ದನ-ಕರುಗಳ ಕಳವು, ಸಂಶಯಾಸ್ಪದ ಸಾವು, ಆತ್ಮಹತ್ಯೆ, ನಾಪತ್ತೆ, ಅತ್ಯಾಚಾರ, ವರದಕ್ಷಿಣೆ, ಮಹಿಳೆಯರ ಶೋಷಣೆ ದೂರು, ಜೂಜಾಟ ಹೀಗೆ ವಿವಿಧ ವಿಷಯಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ವಿವಿಧ ಕಡೆಗೆ 25 ಸಾವಿರ ಪೊಲೀಸ್‌ ಪೇದೆಗಳ ನೇಮಕ ಮಾಡಬೇಕಿದೆ. ಅಪರಾಧ ತಡೆಗೆ ಏನು ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಒತ್ತು ನೀಡಲಾಗಿದೆ. ಪ್ರಕರಣ ದಾಖಲಾದಾಗ ಪೊಲೀಸರಿಂದ ತನಿಖೆ ನಡೆದು ಶಿಕ್ಷೆ ಆಗುವ ಬಗ್ಗೆಯೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ಈ ಎಲ್ಲ ವಿಷಯಗಳ ಬಗ್ಗೆ ಮೂರು ತಿಂಗಳ ಕಾಲಾವಕಾಶ ನೀಡಲಾಗಿದೆ. ಮತ್ತೆ ಮೂರು ತಿಂಗಳು ಬಳಿಕ ಸಭೆ ನಡೆಸಲಾಗುವುದು ಎಂದರು.

ಅಪರಾಧ ತಡೆಯುವ ನಿಟ್ಟಿನಲ್ಲಿ ಜನರಿಗೆ ನ್ಯಾಯ ಒದಗಿಸಿ ಕೊಡುವ ಬಗ್ಗೆ ಆಯಾ ಗ್ರಾಮಗಳಲ್ಲಿ ಗ್ರಾಮ ಸಭೆ, ಸ್ಥಳೀಯರ ಸಹಕಾರ ಪಡೆದುಕೊಂಡು ಉತ್ತಮ ವಾತಾವರಣ ಸೃಷ್ಟಿಸಬೇಕು. ಇಡೀ ರಾಜ್ಯದಲ್ಲಿ ಪೊಲೀಸ್‌ ಇಲಾಖೆ ಉತ್ತಮ ಕೆಲಸ ನಿರ್ವಹಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದ ಯುವಕ ಶಿವು ಉಪ್ಪಾರ ಸಾವಿನ ಬಗ್ಗೆ ಈಗಾಗಲೇ ಇದು ಕೊಲೆ ಅಲ್ಲ. ಆತ್ಮಹತ್ಯೆ ಎಂದು ವರದಿ ಬಂದಿದೆ. ಗೋ ಹತ್ಯೆಗೂ ಯುವಕನ ಸಾವಿಗೂ ಸಂಬಂಧವಿಲ್ಲ. ಪ್ರಚೋದನೆ ಕೊಟ್ಟವರ ಬಗ್ಗೆಯೂ ಪೊಲೀಸ್‌ ತನಿಖೆ ನಡೆಸುತ್ತಿದೆ. ಇದರಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಅರಣ್ಯ ಸಚಿವ ಸತೀಶ ಜಾರಕಿಹೊಳಿ, ಶಾಸಕರಾದ ಗಣೇಶ ಹುಕ್ಕೇರಿ, ಲಕ್ಷ್ಮೀ ಹೆಬ್ಟಾಳ್ಕರ, ಅನಿಲ ಬೆನಕೆ, ಶ್ರೀಮಂತ ಪಾಟೀಲ, ಅಂಜಲಿ ನಿಂಬಾಳ್ಕರ, ಉತ್ತರ ವಲಯ ಐಜಿಪಿ ಎಚ್.ಜಿ ರಾಘವೇಂದ್ರ ಸುಹಾಸ್‌, ಪೊಲೀಸ್‌ ಆಯುಕ್ತ ಬಿ.ಎಸ್‌ ಲೋಕೇಶಕುಮಾರ, ಎಸ್‌ಪಿ ಸುಧೀರಕುಮಾರ್‌ ರೆಡ್ಡಿ, ಡಿಸಿಪಿ ಸೀಮಾ ಲಾಟ್ಕರ, ಯಶೋದಾ ವಂಟಗೋಡಿ ಸೇರಿದಂತೆ ಎಸಿಪಿ, ಇನ್ಸ್‌ಪೆಕ್ಟರ್‌ಗಳು ಹಾಗೂ ಸಿಬ್ಬಂದಿ ಇದ್ದರು.

ಪೊಲೀಸರಿಗೆ ಶೀಘ್ರ ಸಿಹಿ ಸಂದೇಶ:

ಪೊಲೀಸರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಔರಾದಕರ ವರದಿಯಲ್ಲಿಯ ಪ್ರಮುಖ ಅಂಶಗಳನ್ನು ಜಾರಿಗೆ ತರುವುದು ಇಶ್ಚಿತ. ಈಗಾಗಲೇ ಹಣಕಾಸು ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಸಭೆ ನಡೆಸಿದ್ದು, ಸಮಾನಾಂತರವಾಗಿ ನ್ಯಾಯ ನೀಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕೆಲವೇ ದಿನಗಳಲ್ಲಿ ಪೊಲೀಸರಿಗೆ ಸಿಹಿ ಸಂದೇಶ ನೀಡಲಾಗುವುದು. • ಎಂ.ಬಿ. ಪಾಟೀಲ,ಗೃಹ ಸಚಿವ
ಕಾರಾಗೃಹ-ಪೊಲೀಸ್‌ ಇಲಾಖೆ ಒಂದೇ:

ಗೃಹ ಇಲಾಖೆಯಲ್ಲಿ ಪೊಲೀಸ್‌ ಹಾಗೂ ಕಾರಾಗೃಹ ಎರಡೂ ಬರುತ್ತವೆ. ಔರಾದಕರ ವರದಿ ಜಾರಿಯಾದರೆ ಈ ಎರಡೂ ಸಿಬ್ಬಂದಿಗಳಿಗೆ ಅನುಕೂಲವಾಗಲಿದೆ. ನಮ್ಮ ಇಲಾಖೆ ಬಿಟ್ಟು ಕಾರಾಗೃಹ ಹೊರಗಿಲ್ಲ. ಹೆಸರಿನಲ್ಲಿಯೇ ಗೃಹ ಎಂಬುದಿದೆ. ಯಾರಿಗೂ ತಾರತಮ್ಯ ಮಾಡುವ ಪ್ರಶ್ನೆಯೇ ಇಲ್ಲ. ಔರಾದಕರ ವರದಿ ಜಾರಿಯಾಗಿ ನ್ಯಾಯ ಕಲ್ಪಿಸಿ ಕೊಡುವುದು ನಿಶ್ಚಿತ ಎಂದು ಗೃಹ ಸಚಿವ ಎಂ.ಬಿ. ಪಾಟೀಲ ತಿಳಿಸಿದರು.
ನಗರದಲ್ಲಿ ಪೊಲೀಸ್‌ ಸಿಬ್ಬಂದಿಗಳಿಗಾಗಿ ನಿರ್ಮಿಸಿರುವ ವಸತಿ ಗೃಹಗಳನ್ನು ಗೃಹ ಸಚಿವ ಎಂ.ಬಿ. ಪಾಟೀಲ ಉದ್ಘಾಟಿಸಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಸೋಮವಾರ 72 ವಸತಿ ಗೃಹಗಳನ್ನು ಉದ್ಘಾಟಿಸಲಾಗಿದೆ. ಇನ್ನು ಎರಡು ವಾರದಲ್ಲಿ ನಿಪ್ಪಾಣಿಯಲ್ಲಿ 24 ಹಾಗೂ ಕಿತ್ತೂರಿನಲ್ಲಿ 24 ವಸತಿ ಗೃಹಗಳು ಉದ್ಘಾಟನೆಗೊಳ್ಳಲಿದ್ದು, ಮೂರನೇ ಹಂತದಲ್ಲಿ ಬೆಳಗಾವಿ ಕಮೀಷನರೇಟ್ ವ್ಯಾಪ್ತಿಯ ಕಾಕತಿ ಠಾಣೆಯಲ್ಲಿ 12 ಕ್ವಾರ್ಟರ್ಸ್‌, ಹಿರೇಬಾಗೇವಾಡಿಯಲ್ಲಿ 26, ಶಹಾಪುರದಲ್ಲಿ 24 ಹಾಗೂ ನಗರ ವ್ಯಾಪ್ತಿಯಲ್ಲಿ 28 ವಸತಿಗೃಹಗಳು ಉದ್ಘಾಟನೆ ಆಗಲಿವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.