ಪ್ರವಾಹ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಿ
Team Udayavani, Jun 17, 2021, 5:56 PM IST
ಬೈಲಹೊಂಗಲ: ಈ ವರ್ಷ ಮಳೆಗಾಲದಲ್ಲಿ ಅತಿವೃಷ್ಟಿಯಿಂದ ಪ್ರವಾಹ ಬಂದು ಹಾನಿಗೀಡಾಗ ಬಹುದಾದ ಪ್ರದೇಶದ ಜನರನ್ನು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸಲು ಹಾಗೂ ಪ್ರಾಣ ಹಾನಿ, ಜಾನುವಾರು ಹಾನಿಯಾಗದಂತೆ ಸಂರಕ್ಷಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲು ಗೋಕಾಕ ಹಾಗೂ ಮೂಡಲಗಿ ತಾಲೂಕಿನ ತಹಶೀಲ್ದಾರ್ ಹಾಗೂ ಕಾರ್ಯನಿರ್ವಾಹಕ ಅಧಿ ಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಶಶಿಧರ ಬಗಲಿ ಹೇಳಿದರು.
ಬೈಲಹೊಂಗಲ ಉಪವಿಭಾಗದಲ್ಲಿ ಬರುವ ಒಟ್ಟು ಆರು ತಾಲೂಕಿಗೆ ಸಂಬಂ ಧಿಸಿದಂತೆ ಪ್ರವಾಹ, ಅತಿವೃಷ್ಟಿ ಪೂರ್ವಸಿದ್ಧತೆ ಕೈಗೊಳ್ಳುವ ಸಲುವಾಗಿ ಉಪವಿಭಾಗದ ತಾಲೂಕು ಮಟ್ಟದ ಅ ಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಬೆಳೆ ಹಾನಿ, ಮನೆಗಳ ಹಾನಿ ಉಂಟಾದಲ್ಲಿ ಕೂಡಲೇ ತಂಡಗಳನ್ನು ರಚಿಸಿ ವರದಿ ನೀಡಲು ಸಂಬಂಧಪಟ್ಟ ತಾಲೂಕು ಮಟ್ಟದ ಅ ಧಿಕಾರಿಗಳು ಕಟ್ಟುನಿಟ್ಟಾಗಿ ಕ್ರಮಕೈಗೊಳ್ಳಬೇಕು. ವಿದ್ಯುತ್ ಕಂಬಗಳು, ಟ್ರಾನ್ಸ್ಫಾರ್ಮರ್ಗಳಿಂದ ಹಾನಿಯಾಗುವ ಸಂಭವವಿರುವ ಬಗ್ಗೆ ಪರಿಶೀಲಸಲು ಸಂಬಂಧಪಟ್ಟ ಹೆಸ್ಕಾಂ ಅಧಿ ಕಾರಿಗಳಿಗೆ ಸೂಚನೆ ನೀಡಲಾಯಿತು.
ಗ್ರಾಮೀಣ, ನಗರ ಪ್ರದೇಶಗಳಲ್ಲಿ ಚರಂಡಿಗಳನ್ನು ಸ್ವತ್ಛಗೊಳಿಸಿ ನೀರು ಸರಾಗವಾಗಿ ಹರಿದುಹೋಗಲು ತಾ.ಪಂ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ ಅಧಿ ಕಾರಿಗಳಿಗೆ ಸೂಚಿಸಿದರು. ಸಾಂಕ್ರಾಮಿಕ ರೋಗಗಳಿಗೆ ಸಂಬಂಧಿ ಸಿದಂತೆ ಅವಶ್ಯವಿರುವ ಔಷಧಗಳನ್ನು ಸಂಗ್ರಹಿಸಿಡಲು ತಾಲೂಕು ಆರೋಗ್ಯಾ ಧಿಕಾರಿಗಳಿಗೆ ಸೂಚಿಸಲಾಯಿತು. ಜಾನುವಾರುಗಳಿಗೆ ಯಾವುದೇ ರೋಗ ರುಜಿನ ಬಂದಲ್ಲಿ ಶೀಘ್ರ ಚಿಕಿತ್ಸೆ ಒದಗಿಸಲು ಅವಶ್ಯವಿರುವ ಔಷಧ , ಲಸಿಕೆಗಳನ್ನು ಸಂಗ್ರಹಿಸಿಡಲು ಪಶು ವೈದ್ಯಾ ಧಿಕಾರಿಗಳಿಗೆ ಸೂಚಿಸಿದರು.
ತಹಶೀಲ್ದಾರ್ಗಳಾದ ಬಸವರಾಜ ನಾಗರಾಳ, ಸೋಮಲಿಂಗಪ್ಪ ಹಲಗಿ, ಪ್ರಕಾಶ ಹೊಳೆಪ್ಪಗೋಳ, ಮಲ್ಲಿಕಾರ್ಜುನ ಹೆಗ್ಗನ್ನವರ, ತಾ.ಪಂ ಇಒ ಸುಭಾಶ ಸಂಪಗಾವಿ, ತಾಲೂಕು ಮಟ್ಟದ ಅ ಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ