ಕೋವಿಡ್ 19ಹತೋಟಿಗೆ ಕ್ರಮ: ಸಚಿವ ರಮೇಶ ಜಾರಕಿಹೂಳಿ
Team Udayavani, Apr 20, 2020, 5:17 PM IST
ಅಥಣಿ: ತಬ್ಲೀಕ್ ಜಮಾತನಿಂದಲೇ ಜಿಲ್ಲೆಯಲ್ಲಿ ಕೋವಿಡ್ 19 ಹರಡಲು ಕಾರಣವಾಯಿತು. ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹಾಗೂ ವಿವಿಧ ಮಂತ್ರಿಗಳು, ಶಾಸಕರ ಸಹಕಾರದಿಂದ ಕೊರೊನಾ ಹರಡದಂತೆ ಅಧಿಕಾರಿಗಳು ಹಗಲಿರುಳು ಶ್ರಮಿಸಿದ್ದಾರೆ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. ಬೇಸಿಗೆ ಬಂದಿರುವುದರಿಂದ ಜನತೆಗೆ ತೊಂದರೆಯಾಗದಂತೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಶಾಸಕ ಮಹೇಶ ಕುಮಟಳ್ಳಿ ಮಾತನಾಡಿ, ಶತಮಾನ ಕಂಡರಿಯದ ಸಮಸ್ಯೆಯಲ್ಲಿದ್ದೇವೆ. ಇಂತಹ ಸಂದರ್ಭದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ. ಕೆಲ ಜನ ಶಾಸಕರು ಕ್ಷೇತ್ರದಲ್ಲಿ ಇಲ್ಲ ಎಂದು ಆರೋಪ ಮಾಡುತ್ತಿದ್ದಾರೆ. ಆದರೆ ಎಲ್ಲ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಸಲಹೆ-ಸೂಚನೆ ಕೊಡುತ್ತಿದ್ದೇನೆ ಎಂದರು.
ಗ್ರೇಡ್-2 ತಹಶೀಲ್ದಾರ್ ರಾಜಕುಮಾರ ಬುರ್ಲಿ, ಇಒ ರವಿ ಬಂಗಾರಪ್ಪನವರ, ಡಿಎಸ್ಪಿ ಎಸ್. ವಿ. ಗಿರೀಶ್, ಸಿಪಿಐ ಶಂಕರಗೌಡ ಬಸನಗೌಡ, ಬಿ.ಎಸ್. ಯಾದವಾಡ, ಎಂ.ವಿ. ಬಿರಾದಾರಪಾಟೀಲ, ಶೇಖರ ಬಹೂರೂಪಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ
HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ
ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ