ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿ; ಶ್ವೇತಾ ಜೈನ್‌

ಉತ್ತಮ ಸಂಸ್ಕಾರ ನೀಡಿದರೆ ಅವರು ಎಂದಿಗೂ ನಮ್ಮ ಕೈ ಬಿಟ್ಟು ಹೋಗಲಾರರು

Team Udayavani, Mar 14, 2022, 5:55 PM IST

ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿ; ಶ್ವೇತಾ ಜೈನ್‌

ಬೆಳಗಾವಿ: ಜೈನ ಧರ್ಮೀಯರು ಸಂಘಟಿತರಾಗಬೇಕು. ತಮ್ಮಲ್ಲಿ ಕರಗತವಾಗಿರುವ ನಾಯಕತ್ವ ಗುಣಗಳ ಮೂಲಕ ಸಮಾಜ ಸೇವಾ ಚಟುವಟಿಕೆಗಳನ್ನು ಸಕ್ರಿಯವಾಗಿ ಮುಂದುವರಿಸಿಕೊಂಡು ಹೋಗಬೇಕು ಎಂದು ಮೂಡುಬಿದಿರೆಯ ಹಿರಿಯ ನ್ಯಾಯವಾದಿ ಹಾಗೂ ಮಂಗಳೂರಿನ ಭಾರತೀಯ ಮಿಲನ್‌ ಸಹ ಕಾರ್ಯದರ್ಶಿ ಶ್ವೇತಾ ಜೈನ್‌ ಹೇಳಿದರು.

ನಗರದ ಯಳ್ಳೂರ ರಸ್ತೆಯ ಶ್ರೀ ಅನ್ನಪೂರ್ಣೇಶ್ವರಿ ಮಂಗಲ ಕಾರ್ಯಾಲಯದಲ್ಲಿ ರವಿವಾರ ನಡೆದ ದಕ್ಷಿಣ ಕನ್ನಡ ದಿಗಂಬರ ಜೈನ ಮೈತ್ರಿಕೂಟದ ದಶಮಾನೋತ್ಸವದಲ್ಲಿ ಅವರು ಮಾತನಾಡಿದರು.

ಜೈನ ಧರ್ಮದ ವೀರ ಪರಂಪರೆ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯನ್ನು ಅನೇಕ ಜೈನ ಅರಸರು ಆಳಿದ್ದರು. ಅಂಥ ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂದು ಬೆಳಗಾವಿಯಲ್ಲಿ ಜೈನ ಮೈತ್ರಿಕೂಟ ಸ್ಥಾಪನೆ ಮಾಡಿಕೊಂಡ ಈ ಸಂಘಟನೆ ಇಂದು ದಶಮಾನೋತ್ಸವ ಆಚರಿಸಿಕೊಳ್ಳುತ್ತಿದೆ. ಸಂಘ-ಸಂಸ್ಥೆ ಕಟ್ಟುವುದು ಸುಲಭ. ಆದರೆ ಮುಂದುವರಿಸಿಕೊಂಡು ಹೋಗುವುದು ಕಷ್ಟ. ಉದ್ಯೋಗ ಸೇರಿದಂತೆ ವಿವಿಧ ಕೆಲಸ-ಕಾರ್ಯಕ್ಕೆ ಇಲ್ಲಿಗೆ ಬಂದು ಸಂಘ-ಸಂಸ್ಥೆ ಕಟ್ಟಿಕೊಂಡು ತಮ್ಮ ಮೂಲ
ಸಂಸ್ಕೃತಿಯನ್ನು ಮುಂದುವರಿಸಿಕೊಂಡು ಹೋಗುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ಅಭಿನಂದಿಸಿದರು.

ಜೈನ ಧರ್ಮ ಶ್ರೇಷ್ಠ ಧರ್ಮ. ಸಹಸ್ರಾರು ವರ್ಷಗಳ ಹಿಂದೆಯೇ ಪ್ರತಿಯೊಂದು ಜೀವಿಗಳಿಗೆ ಜೀವ ಇದೆ ಎಂದು ಪ್ರತಿಪಾದಿಸಿದೆ. ಮನಸ್ಸಿಗೆ ನೋವುಂಟು ಮಾಡುವುದು ಹಿಂಸೆ ಎಂದು ಭಗವಾನ್‌ ಮಹಾವೀರರು 2600 ವರ್ಷಗಳ ಹಿಂದೆ ಹೇಳಿದ್ದರು. ಅನ್ಯ ಧರ್ಮೀಯರೂ ಜೈನ ಧರ್ಮ ಶ್ರೇಷ್ಠ ಎಂದು ಹೇಳಿದ್ದಾರೆ. ಆದರೆ ಇಂದು ಜೈನ ಧರ್ಮೀಯರು ತಮ್ಮ ಧರ್ಮದ ಬಗ್ಗೆ ಅರಿತುಕೊಳ್ಳದೇ ನಡೆದುಕೊಳ್ಳುತ್ತಿರುವುದು ಕಳವಳದ ಸಂಗತಿ. ಧರ್ಮಪಾಲನೆ ಮಾಡಬೇಕು.

ನಮ್ಮ ಮಕ್ಕಳಿಗೆ ಸಂಸ್ಕಾರ ನೀಡಬೇಕು. ಉತ್ತಮ ಸಂಸ್ಕಾರ ನೀಡಿದರೆ ಅವರು ಎಂದಿಗೂ ನಮ್ಮ ಕೈ ಬಿಟ್ಟು ಹೋಗಲಾರರು. ಸಂಸ್ಕಾರ ನೀಡುವ ಕೆಲಸ ಆಗಬೇಕು. ಜೈನರಲ್ಲಿ ನಾಯಕತ್ವ ಗುಣ ಸ್ವಾಭಾವಿಕವಾಗಿದ್ದು, ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಳ್ಳಿ ಎಂದು ಜೈನ ಬಾಂಧವರಿಗೆ ಕಿವಿಮಾತು ಹೇಳಿದರು. ಅಂತರ್‌ ಧರ್ಮ ವಿವಾಹಗಳು ಇತ್ತೀಚೆಗೆ ಜೈನ ಧರ್ಮೀಯರಲ್ಲಿ ಹೆಚ್ಚುತ್ತಿದೆ. ಈ ಬಗ್ಗೆ ಸಮಾಜ ಎಚ್ಚೆತ್ತುಕೊಳ್ಳುವ ಅಗತ್ಯ ಇದೆ ಎಂದು ಗಮನ ಸೆಳೆದರು.

ಧಾರವಾಡ ಎಸ್‌ಡಿಎಂ ಸೊಸೆ„ಟಿಯ ಕಾರ್ಯದರ್ಶಿ ವಿ. ಜೀವಂಧರ ಕುಮಾರ್‌ ಮಾತನಾಡಿ, ಜೈನರಲ್ಲಿ ಯುವಕರನ್ನು ಸಂಘಟಿಸುವ ಕೆಲಸ ಆಗಬೇಕು. ಇಂಥ ಸಂಘಟನೆಗಳ ಅವಶ್ಯಕತೆ ಇಂದು ಬಹಳ ಇದೆ. ದಕ್ಷಿಣ ಕನ್ನಡ ಜೈನ ಮೈತ್ರಿಕೂಟದಂಥ ಸಂಘಟನೆಗಳಿಗೆ ಪ್ರೋತ್ಸಾಹ ಅಗತ್ಯ ಎಂದು ಹೇಳಿದರು.

ಬೆಳಗಾವಿಯ ದಕ್ಷಿಣ ಕನ್ನಡ ದಿಗಂಬರ ಜೈನ ಮೈತ್ರಿಕೂಟದ ಸ್ಥಾಪಕಾಧ್ಯಕ್ಷ ಶಿರ್ಲಾಲು ಬಿ.ಗುಣಪಾಲ ಹೆಗ್ಡೆ ಮಾತನಾಡಿ, ಬೆಳಗಾವಿಯಲ್ಲಿ ದಕ್ಷಿಣ ಕನ್ನಡ ದಿಗಂಬರ ಜೈನ ಮೈತ್ರಿಕೂಟ 12 ವರ್ಷಗಳ ಹಿಂದೆ ಹುಟ್ಟಿಕೊಂಡಿದೆ. ಹತ್ತು ಹಲವು ಸಾಮಾಜಿಕ ಕಾರ್ಯ ನಡೆಸಿಕೊಂಡು ಬರುತ್ತಿದೆ. ಒಂದು ಕುಟುಂಬದಂತೆ ಎಲ್ಲಾ ಸದಸ್ಯರು ದುಡಿಯುತ್ತಿದ್ದಾರೆ. ಭವಿಷ್ಯದ ದಿನಗಳಲ್ಲಿಯೂ ಜೈನ ಮೈತ್ರಿಕೂಟದ ಸೇವಾ ಕಾರ್ಯಗಳು ಸದಾ ಮುಂದುವರಿಯಲಿವೆ ಎಂದು ಹೇಳಿದರು.

ಬೆಳಗಾವಿ ದಕ್ಷಿಣ ಕನ್ನಡ ದಿಗಂಬರ ಜೈನ ಮೈತ್ರಿಕೂಟದ ಅಧ್ಯಕ್ಷ ಮಹಾವೀರ ಪೂವಣಿ ಅಧ್ಯಕ್ಷತೆ ವಹಿಸಿದ್ದರು. ಎಂ. ಅಜಿತ್‌ ಕುಮಾರ್‌ ಜೈನ್‌- ಶೋಭಾ ಜೈನ್‌ ದಂಪತಿ, ಅಣ್ಣಾಸಾಹೇಬ ಚೌಗುಲೆ- ಸರೋಜಿನಿ ಅಣ್ಣಾಸಾಹೇಬ ಚೌಗುಲೆ ದಂಪತಿಗಳನ್ನು ಸನ್ಮಾನಿಸಲಾಯಿತು. ರತ್ನಾ ಅಜ್ರಿ, ಎಂ.ಅಜಿತ್‌ ಕುಮಾರ್‌ ಜೈನ್‌ ನಿರೂಪಿಸಿದರು.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.