ಚಿತ್ರನಟ ಸದಾಶಿವ ಬ್ರಹ್ಮಾವರ ಬೈಲಹೊಂಗಲ ಬಾಂಧವ್ಯ


Team Udayavani, Sep 21, 2018, 3:28 PM IST

21-sepctember-17.jpg

ಬೈಲಹೊಂಗಲ: ಬುಧವಾರ ನಿಧನರಾಗಿರುವ ಕನ್ನಡದ ಹಿರಿಯ ನಟ ಸದಾಶಿವ ಬ್ರಹ್ಮಾವರ ಅವರು ಬೈಲಹೊಂಗಲದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದ ಹಿರಿಯ ನಟ. ಮೂಲತಃ ಬ್ರಹ್ಮಾವರದವರಾದರೂ ಇಲ್ಲಿ ತಮ್ಮ ಪುತ್ರನೊಂದಿಗೆ ವಾಸಿಸುತ್ತ ಸ್ಥಳೀಯರಿಗೆ ಚಿರಪರಿಚಿತರಾಗಿದ್ದರು. ಪಟ್ಟಣದ ಎಲ್‌ಐಸಿಯ ಉದ್ಯೋಗಿಯಾಗಿರುವ ರವೀಂದ್ರ ಬ್ರಹ್ಮಾವರ ಸದಾಶಿವ ಅವರು ಪುತ್ರ. ಇಲ್ಲಿಯ ಪ್ರಭುನಗರದಲ್ಲಿ ಅವರ ಮನೆ. ಬೆಂಗಳೂರಿನಲ್ಲಿ ಸೆ. 19ರಂದು ಮಧ್ಯಾಹ್ನ ಸದಾಶಿವ ಬ್ರಹ್ಮಾವರ ನಿಧನ ಹೊಂದಿದ್ದರೂ ಪಟ್ಟಣದ ನಿವಾಸಿಗಳಿಗೆ ಸುದ್ದಿ ಗೊತ್ತಾಗಿಲ್ಲ. ಆದರೆ ಅವರ ಪುತ್ರ ಬುಧವಾರ ರಾತ್ರಿ ಬೆಂಗಳೂರಿಗೆ ತೆರಳಿದ್ದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ವಿಷಯ ಗೊತ್ತಾಗಿದೆ.

ನಟ ಬ್ರಹ್ಮಾವರ ಸಾವಿನ ಸುದ್ದಿ ಮಾಧ್ಯಮಗಳ ಮೂಲಕ ಗೊತ್ತಾಗಿದೆ. ಹಿರಿಯ ನಟನ ಸಾವಿನಿಂದ ಅಭಿಮಾನಿ ಬಳಗದಲ್ಲಿ ದುಃಖ ಮಡುಗಟ್ಟಿತ್ತು. ಅವರೊಂದಿಗೆ ಕಳೆದ 25 ವರ್ಷಗಳಿಂದ ಒಡನಾಟ ಹೊಂದಿದ ಚಿತ್ರನಟ ಶಿವರಂಜನ್‌ ಮೃತ ನಟನೊಂದಿಗಿನ ಬಾಂಧವ್ಯ ಮೆಲುಕು ಹಾಕಿದರು. ಚಲನಚಿತ್ರಗಳಾದ ಅಮೃತಸಿಂಧು, ರಾಜಾರಾಣಿ, ಕನಸೆಂಬ ಕುದುರೆಯನ್ನೇರಿ, ಕಿರುಚಿತ್ರ ಸಂಗೊಳ್ಳಿ ರಾಯಣ್ಣ, ಕಿತ್ತೂರ ಚನ್ನಮ್ಮ, ಸಂಪೂರ್ಣ ಸ್ವಚ್ಛ ಭಾರತ ಅಭಿಯಾನದಲ್ಲಿ ಅವರೊಂದಿಗೆ ನಟಿಸಿದ್ದ ಅನುಭವ ಅನನ್ಯ ಎಂದರು.

ಹಿರಿಯ ರಂಗಭೂಮಿ ಕಲಾವಿದ ಏಣಗಿ ಬಾಳಪ್ಪ ಅವರೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದ ಚಿತ್ರನಟ ಸದಾಶಿವ ಬ್ರಹ್ಮಾವರ ಅವರೊಂದಿಗೆ ರಂಗಭೂಮಿಯಲ್ಲಿ ಕೆಲಸ ನಿರ್ವಹಿಸಿದ್ದರು. ರಂಗಕರ್ಮಿ, ಚಿತ್ರನಟ ಸಿ.ಕೆ. ಮೆಕ್ಕೇದ ಅವರೊಂದಿಗೆ ಸಂಗೊಳ್ಳಿ ರಾಯಣ್ಣ ಮೊದಲಾದ ಕಿರುತೆರೆಯ ಧಾರಾವಾಹಿಗಳಲ್ಲಿ ನಟಿಸಿದ್ದರು.

ನಟ ಸದಾಶಿವ ಅವರು ಆಗಾಗ ಮನೆಯಿಂದ ಹೊರಗೆ ಸುತ್ತಾಡಲು ಹೊರಟಾಗ ಅವರನ್ನು ಗುರುತಿಸಿ ಸ್ಥಳೀಯರು ಅವರೊಂದಿಗೆ ಫೋಟೊ ತೆಗೆಸಿಕೊಳ್ಳುತ್ತಿದ್ದರು. ಹಲವು ವರ್ಷಗಳ ಹಿಂದೆ ಮನೆ ಬಿಟ್ಟು ಹೊರಗೆ ಹೋದಾಗ ವಯೋಸಹಜ ಮರೆವಿನಿಂದ ಮನೆಗೆ ವಾಪಸಾಗಲು ಸಾಧ್ಯವಾಗದೇ ಎಲ್ಲೆಲ್ಲೋ ಅಲೆಯುತ್ತಿರುವುದನ್ನು ಕಂಡ ಅಭಿಮಾನಿಯೊಬ್ಬರು ಅವರಿಗೆ ಬಸ್‌ ಚಾರ್ಜ್‌ ನೀಡಿ ಮನೆಗೆ ಕಳೆಸಿರುವುದು ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗಿತ್ತು.

ಮನೆಯಿಂದ ದೂರದ ಊರಿಗೆ ಹೋದಾಗ ಅಲ್ಲಿ ದೇವಸ್ಥಾನ ಕಂಡರೆ ತಮ್ಮ ಬಳಿ ಇದ್ದ ಹಣವನ್ನು ಹುಂಡಿಯಲ್ಲಿ ಹಾಕಿ ಕಿಸೆ ಖಾಲಿ ಮಾಡಿಕೊಂಡು ನಂತರ ಮನೆಗೆ ಮರಳಲಾಗದೇ ಪರದಾಡಿದ್ದೂ ಉಂಟು. ಇಂಥ ಘಟನೆಗಳು ಸಾಕಷ್ಟು ಬಾರಿ ಅವರ ಜೀವನದಲ್ಲಿ ನಡೆದಿವೆ. ಸಂತಾಪ: ಹಿರಿಯ ಚಲನಚಿತ್ರ ನಟ ಸದಾಶಿವ ಬ್ರಹ್ಮಾವರ ನಿಧನಕ್ಕೆ ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ, ಮಾಜಿ ಸಚಿವ ಶಿವಾನಂದ ಕೌಜಲಗಿ, ಶಾಸಕ ಮಹಾಂತೇಶ ಕೌಜಲಗಿ, ಜಿಲ್ಲಾ ಬಿಜೆಪಿ ಗ್ರಾಮೀಣ ಅಧ್ಯಕ್ಷ, ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ, ಮಾಜಿ ಶಾಸಕ ಜಗದೀಶ ಮೆಟಗುಡ್ಡ, ಚಿತ್ರನಟ ಶಿವರಂಜನ್‌ ಬೊಳನ್ನವರ, ಕಲಾವಿದ ಸಿ.ಕೆ. ಮೆಕ್ಕೇದ, ಕಲಾವಿದ ಮಲ್ಲವ್ವ ಮ್ಯಾಗೇರಿ ಸಂತಾಪ ಸೂಚಿಸಿದ್ದಾರೆ. 

ಶಿವಾನಿ ಹೋಟೆಲ್‌ ನಂಟು
ಪುತ್ರ ರವೀಂದ್ರ ಸದಾಶಿವ ಅವರನ್ನು ಇಲ್ಲಿನ ಶಿವಾನಿ ಹೋಟೆಲ್‌ಗೆ ಪ್ರತಿದಿನ ಬೆಳಗ್ಗೆ ಕರೆದುಕೊಂಡು ಬಂದು ಚಹ, ಉಪಹಾರ ಮಾಡಿಸಿಕೊಂಡು ಹೋಗುತ್ತಿದ್ದರು. ಅಲ್ಲದೇ ಸದಾಶಿವ ತಮ್ಮ ಮನೆಗೆ ಹೋದ ಮೇಲೆ ಸಂಗೀತ ಸಾಧನಗಳನ್ನು ನುಡಿಸುತ್ತ ಹಾಡುಗಳನ್ನು ಹಾಡುವ ಪರಿಪಾಠ ಬೆಳೆಸಿಕೊಂಡಿದ್ದರೆಂದು ಕುಟುಂಬದವರು ನೆನಪಿಸಿಕೊಳ್ಳುತ್ತಾರೆ.

ಸಿ.ವೈ. ಮೆಣಶಿನಕಾಯಿ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.