ಪರಿಸರ ರಕ್ಷಣೆಗೆ ಮುಂದಾಗಿ
Team Udayavani, Jul 6, 2019, 10:28 AM IST
ಗೋಕಾಕ: ರೋಟರಿ ಸಂಸ್ಥೆ ಹಮ್ಮಿಕೊಂಡಿದ್ದ ವನಮಹೋತ್ಸವ ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ ನೀಡಿದರು.
ಗೋಕಾಕ: ಪ್ರಕೃತಿಯ ಸಮತೋಲನ ಕಾಪಾಡಿ ಉತ್ತಮ ಪರಿಸರವನ್ನು ಮುಂದಿನ ಪೀಳಿಗೆಗೆ ನೀಡಬೇಕಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ. ದೇವರಾಜ ಹೇಳಿದರು. ನಗರದ ಹೊರವಲಯದ ನೂತನ ಬಡಾವಣೆಯಲ್ಲಿ ಶುಕ್ರವಾರ ರೋಟರಿ ಸಂಸ್ಥೆಯವರು ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಹೆಚ್ಚುತ್ತಿರುವ ಜನಸಂಖ್ಯೆಗೆ ಮೂಲ ಸೌಲಭ್ಯ ಕಲ್ಪಿಸಲು ಅರಣ್ಯ ಪ್ರದೇಶ ನಾಶ ಮಾಡುತ್ತಿದ್ದು, ಇಂದು ಪ್ರಕೃತಿ ಸಮತೋಲನ ಕಾಪಾಡಲು ಅರಣ್ಯ ಉಳಿಸಿ ಬೆಳೆಸಬೇಕಾಗಿದೆ. ಇದಕ್ಕೆ ಸಂಘ ಸಂಸ್ಥೆಗಳು ಇಲಾಖೆಯೊಂದಿಗೆ ಕೈಜೋಡಿಸುತ್ತಿರುವುದು ಒಳ್ಳೆಯ ಬೆಳವಣಿಗೆ. ಸಾರ್ವಜನಿಕರು ಹಾಗೂ ರೈತರು ಜಾಗೃತರಾಗಿ ಅರಣ್ಯ ಉಳಿಸಿ ಬೆಳೆಸಿ ಪರಿಸರ ರಕ್ಷಣೆ ಮಾಡಲು ಮುಂದಾಗುವಂತೆ ಕರೆ ನೀಡಿದರು. ರೋಟರಿ ಅಧ್ಯಕ್ಷ ಸೋಮಶೇಖರ ಮಗದುಮ್ಮ, ಕಾರ್ಯದರ್ಶಿ ಡಾ| ಉದಯ ಆಜರಿ, ವಲಯ ಅರಣ್ಯಾಧಿಕಾರಿ ಕೆಂಪಣ್ಣ ವಣ್ಣೂರ, ರೋಟರಿ ಸಂಸ್ಥೆಯ ಪ್ರಸಾದ ಸೊಲಾಪೂರಮಠ, ದಿಲೀಪ ಮೆಳವಂಕಿ, ಪರಮೇಶ್ವರ ಗುಲ್ಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ