ಸಾವಯವ ಕೃಷಿಗೆ ಮುಂದಾಗಿ; ಸಚಿವ ಬಿ.ಸಿ ಪಾಟೀಲ

ರೈತರು ಬೆಳೆ ಪದ್ದತಿಯನ್ನು ಬದಲಾಯಿಸಿ ಈ ಪ್ರದೇಶದ ಭೂಮಿಯಲ್ಲಿ ಬಿದಿರು ಬೆಳೆಯಬೇಕು

Team Udayavani, May 2, 2022, 6:02 PM IST

ಸಾವಯವ ಕೃಷಿಗೆ ಮುಂದಾಗಿ; ಸಚಿವ ಬಿ.ಸಿ ಪಾಟೀಲ

ಅಡಹಳ್ಳಿ: ಕೃಷಿಗೆ ರಸಾಯನಿಕ ಗೊಬ್ಬರ ಹಾಗೂ ಕ್ರಿಮಿನಾಶಕ ಬಳಕೆ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹೀಗಾಗಿ ಸಾವಯವ ಕೃಷಿ ಪದ್ಧತಿಗೆ ರೈತರು ಬದಲಾಗಿ ಆರೋಗ್ಯ ಕಾಪಾಡಬೇಕು ಎಂದು ಕೃಷಿ ಸಚಿವ ಬಿ.ಸಿ ಪಾಟೀಲ ಹೇಳಿದರು.

ಸಮೀಪದ ಶೇಗುಣಶಿ ಗ್ರಾಮದಲ್ಲಿ ಶಂಕರ ಸ್ವಾಮೀಜಿ ಅಮೃತ ಮಹೋತ್ಸವ ಹಾಗೂ ಡಾ| ಮಹಾಂತ ದೇವರ ನಿರಂಜನ ಚರಪಟ್ಟಾಧಿಕಾರ ಸಮಾರಂಭ ನಿಮಿತ್ತ ರವಿವಾರ ನಡೆದ ಸಾವಯವ ಕೃಷಿ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ರೈತರು ಸ್ವಾವಲಂಬಿಯಾಗಿ ಬದುಕಬೇಕಾದರೆ ಒಕ್ಕಲುತನದ ಜೊತೆಗೆ ಉಪ ಕಸುಬುಗಳನ್ನು ಮಾಡಬೇಕು.ಸಾವಯವ ಕೃಷಿ ಮತ್ತು ಸಿರಿಧಾನ್ಯಗಳ ಬೆಳೆಯಲು ಸರ್ಕಾರ ಅನುದಾನ ನೀಡುತ್ತಿದೆ. ಕೃಷಿ ಮಹಾವಿದ್ಯಾಲಯದಲ್ಲಿ ಕಲಿಯಲು ರೈತರ ಮಕ್ಕಳಿಗೆ ಶೇ 50 ಮೀಸಲಾತಿ ಇದೆ.

ಅಥಣಿ ತಾಲೂಕಿನ ಕೊಕಟನೂರ ಗ್ರಾಮಕ್ಕೆ ಕೃಷಿ ಕಾಲೇಜು ಮಂಜೂರಾಗಿದೆ. ಆಧುನಿಕ ಯಂತ್ರೋಪಕರಣ ಬಳಸಿ ರೈತ ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು ಎಂದರು.

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೃಷ್ಣಾ ನದಿ ದಡದ ರೈತರು ಅತಿಯಾದ ನೀರು ಬಳಕೆ ಮಾಡಿ ಸವಳು- ಜವಳು ಸಮಸ್ಯೆ ಎದುರಿಸುತ್ತಿದ್ದು, ಇಸ್ರೇಲ್‌ ಮಾದರಿಯಲ್ಲಿ ಕೃಷಿ ಕೈಗೊಂಡು ಸಾವಯವ ಕೃಷಿ ಮೊರೆ ಹೋಗುವುದು ಅನಿವಾರ್ಯ ಎಂದರು.

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ಮಾತನಾಡಿ, ಬೆಳಗಾವಿ, ಬಾಗಲಕೋಟ ಹಾಗೂ ವಿಜಯಪೂರ ಈ ಮೂರು ಜಲ್ಲೆಯಲ್ಲಿಯೇ 1.50 ಲಕ್ಷ ಎಕರೆ ಭೂಮಿ ಸವಳು-ಜವಳಾಗಿದೆ. ಇದನ್ನು ಸರಿಪಡಿಸಲು ರೈತರು ಬೆಳೆ ಪದ್ದತಿಯನ್ನು ಬದಲಾಯಿಸಿ ಈ ಪ್ರದೇಶದ ಭೂಮಿಯಲ್ಲಿ ಬಿದಿರು ಬೆಳೆಯಬೇಕು ಎಂದು ತಿಳಿಸಿದರು.

ಗದಗ-ಡಂಬಳ ತೋಂಟದಾರ್ಯಮಠದ ಜಗದ್ಗುರು ಡಾ| ತೋಂಟದ ಸಿದ್ದರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಶ್ರೀಗಳ ಅಮೃತ ಮಹೋತ್ಸವ ಹಾಗೂ ನಿರಂಜನ ಪಟ್ಟಾ ಧಿಕಾರ ಕಾರ್ಯಕ್ರಮದಲ್ಲಿ ಧಾರ್ಮಿಕ, ಸಾಂಸ್ಕೃತಿಕ ವಿಚಾರಗೋಷ್ಠಿ ಕಾರ್ಯಕ್ರಮ ಆಯೋಜಿಸಿರುವುದು ವ್ಯಕ್ತತ್ವ ವಿಕಸನಕ್ಕೆ ಗ್ರಾಮಸ್ಥರು ಮುನ್ನುಡಿ ಬರೆದಿದ್ದಾರೆ ಎಂದರು.

ವಿಧಾನ ಪರಿಷತ್‌ ಸದಸ್ಯ ಹನುಮಂತ ನಿರಾಣಿ, ಬೆಂಗಳೂರ ಸಾವಯವ ಕೃಷಿ ಮಿಷನ್‌ ಅಧ್ಯಕ್ಷ ಆನಂದ ಶ್ರೀ, ವಿಜಯಪುರ ಕೃಷಿ ತಜ್ಞ ಎ.ಪಿ ಬಿರಾದಾರ ಹಾಗೂ ಬಿಳ್ಳೂರ ಗುರುಬಸವೇಶ್ವರ ವಿರಕ್ತಮಠದ ಮುರಘೇಂದ್ರ ಸ್ವಾಮೀಜಿ, ಚಿಕ್ಕೋಡಿ ಸಂಸದ ಅಣ್ಣಸಾಬ ಜೊಲ್ಲೆ ಮಾತನಾಡಿದರು.

ಶಂಕರ ಸ್ವಾಮೀಜಿ, ಡಾ| ಮಹಾಂತ ದೇವರು, ಪ್ರಭುಚನ್ನಬಸವ ಸ್ವಾಮೀಜಿ, ಶಿವಾನಂದ ಸ್ವಾಮೀಜಿ, ಶಾಸಕರಾದ ಮಹೇಶ ಕುಮಠಳ್ಳಿ, ಪಿ. ರಾಜೀವ, ದುರ್ಯೋಧನ ಐಹೊಳೆ,  ಶ್ರೀಶೈಲ ನಾರಗೊಂಡ, ಅಮೂಲ ನಾಯಿಕ, ಚಿದಾನಂದ ಸವದಿ, ಚಿಕ್ಕೋಡಿ ಕೃಷಿ ಇಲಾಖೆ ಉಪನಿರ್ದೇಶಕ ಎಲ್‌.ಐ. ರೂಡಗಿ ಸೇರಿದಂತೆ ಶ್ರೀಗಳು ಮತ್ತು ಗಣ್ಯರು ಉಪಸ್ಥಿತರಿದ್ದರು. ಎ.ವೈ ಗಲಗಲಿ ಸ್ವಾಗತಿಸಿದರು, ಗುರುದೇವ ಸ್ವಾಮೀಜಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.