ಮುಂದುವರಿದ ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ
Team Udayavani, Dec 10, 2018, 6:45 AM IST
ಬೆಳಗಾವಿ: ರೈತರನ್ನು ಕಡೆಗಣಿಸುತ್ತಿರುವ ಸಿಎಂ ಕುಮಾರಸ್ವಾಮಿ, ರಾಜಕೀಯ ನಾಟಕವಾಡುತ್ತಿದ್ದಾರೆ. ಸಕ್ಕರೆ ಕಾರ್ಖಾನೆ ಮಾಲೀಕರ ಅಣತಿಯಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರಬೂರು ಶಾಂತಕುಮಾರ ಆರೋಪಿಸಿದರು.
ಶನಿವಾರದಿಂದ ಅಹೋರಾತ್ರಿ ಧರಣಿ ನಡೆಸಿರುವ ರೈತರು, ಭಾನುವಾರವೂ ಜಿಲ್ಲಾಧಿಕಾರಿ ಕಚೇರಿ ಎದುರು ಕರಡಿ ಮಜಲು ಬಾರಿಸುತ್ತ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಭಾನುವಾರ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಕುರಬೂರು, ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ, ರೈತರ ಕಣ್ಣೀರು ಒರೆಸುವ ತಂತ್ರ ನಡೆಸಿದರೂ ಅದು ಪ್ರಯೋಜನವಾಗಿಲ್ಲ. ಕಳೆದ ಅಧಿವೇಶನದಲ್ಲಿ ರೈತರ ಸಮಸ್ಯೆ ಬಗೆಹರಿಸುವುದಾಗಿ ಹೇಳಿ ರೈತರನ್ನು ಬೆಂಬಲಿಸಿದ್ದರು. ಆದರೆ, ಈಗ ಅವರೇ ಸಿಎಂ ಆಗಿದ್ದರೂ ಸಮಸ್ಯೆಗೆ ಸ್ಪಂದಿಸದೆ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರ ಒಡೆತನದ ಕಾರ್ಖಾನೆಯಿಂದಲೇ ಬಾಕಿ ಹಣ ಇನ್ನೂ ರೈತರಿಗೆ ಸಿಕ್ಕಿಲ್ಲ. ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ ನೀಡಿ ರೈತರಿಗೆ ಅನ್ಯಾಯ ಮಾಡಿದ್ದಾರೆ. ಸರ್ಕಾರಕ್ಕೆ ಯಾವುದೇ ಮಾಲೀಕರು ತಪ್ಪು ಮಾಹಿತಿ ನೀಡಿದರೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಎರಡು ವರ್ಷಗಳ ಶಿಕ್ಷೆ ಹಾಗೂ ದಂಡ ವಿಧಿಸುವಂತಹ ಕಾನೂನು ರೂಪಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ