ಒಕ್ಕಟ್ಟಿನಿಂದ ಬಸವ ಜಯಂತಿ ಆಚರಣೆಗೆ ಸಲಹೆ


Team Udayavani, Mar 12, 2020, 4:42 PM IST

BG-TDY-3

ಬೆಳಗಾವಿ: ಏಪ್ರಿಲ್‌ 26 ರಂದು ನಡೆಯಲಿರುವ ಬಸವ ಜಯಂತಿ ಆಚರಣೆಯ ಮೆರವಣಿಗೆ ಸಂದರ್ಭದಲ್ಲಿ ಶಿಸ್ತು ಸಮಯದ ನಿಬಂಧನೆ ಹಾಕಿಕೊಳ್ಳಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಚನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು .ವಚನ ಸ್ಪರ್ಧೆ ಶರಣರ ಬಗ್ಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಬೇಕು ಎಂದು ವೀರಶೈವ, ಲಿಂಗಾಯತ ಸಂಘಟನೆಗಳ ಪದಾಧಿಕಾರಿಗಳು ಹೇಳಿದರು.

ಬಸವ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ನಗರದ ವೀರಶೈವ ಮಹಾಸಭೆಯ ಸಭಾಗೃಹದಲ್ಲಿ ನಡೆದ ವೀರಶೈವ, ಲಿಂಗಾಯತ ಸಂಘಟನೆಗಳ ಪದಾಧಿಕಾರಿಗಳ ಸಭೆಯಲ್ಲಿ ಈ ಸಲಹೆ ನೀಡಿದ ಸದಸ್ಯರು, ಬಸವ ಜಯಂತಿ ಒಂದು ದಿನಕ್ಕೆ ಸೀಮಿತವಾಗಬಾರದು .ಶಿವಾಜಿ ಜಯಂತಿ ಆಚರಣೆ ಮಾದರಿಯಲ್ಲಿ ಬಸವ ಜಯಂತಿಯನ್ನು ಸಹ ಉತ್ಸಾಹದಿಂದ ಆಚರಿಸುವಂತಾಗಬೇಕು ಭಿನ್ನಾಭಿಪ್ರಾಯ ಬದಿಗಿಟ್ಟು ಬಸವ ಮನಸ್ಸುಗಳೆಲ್ಲ ಒಂದಾಗಿ ಆಚರಿಸುವಂತಾಗಬೇಕು ಎಂದು ಹೇಳಿದರು.

ಆಚರಣೆಯ ಪೂರ್ವಭಾವಿಯಾಗಿ ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ, ವಚನ ಸ್ಪರ್ಧೆ ಏರ್ಪಡಿಸಬೇಕು. ಮುಖ್ಯವಾಗಿ ಕಾರ್ಯಕ್ರಮದಲ್ಲಿ ಎಲ್ಲ ಪಂಗಡಗಳ ಎಲ್ಲ ಜನರು ಭಿನ್ನಾಭಿಪ್ರಾಯ ಮರೆತು ಉತ್ಸವ ನಡೆಸಲು ಮುಂದಾಗಬೇಕು. ಮನಸ್ಸುಗಳು ಘಾಸಿಯಾಗುವಂತೆ ಮಾತನಾಡುವುದು ಬೇಡ. ಬಸವಣ್ಣನವರನ್ನು ಒಂದು ಪಂಗಡಕ್ಕೆ ಸೀಮಿತ ಮಾಡುವುದು ಬೇಡ ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಮಾಜಿ ಉಪಮಹಾಪೌರ ಜ್ಯೋತಿ ಭಾವಿಕಟ್ಟಿ ಅವರನ್ನು ಬೆಳಗಾವಿಯಲ್ಲಿ ನಡೆಯಲಿರುವ ಬಸವ ಜಯಂತಿ ಉತ್ಸವ ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ನಂತರ ಮಾತನಾಡಿದ ಅವರು, ಬಸವ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ತಮಗೆ ಒಪ್ಪಿಸಿರುವ ಕಾರ್ಯವನ್ನು ಸಮಾಜದ ಎಲ್ಲರ ಸಲಹೆ, ಸೂಚನೆ ಸಹಕಾರದೊಂದಿಗೆ ಸಮರ್ಥವಾಗಿ ನಿಭಾಯಿಸುವುದಾಗಿ ಹೇಳಿದರು.

ಸಭೆಯಲ್ಲಿ ಡಾ.ಎಚ್‌.ಬಿ. ರಾಜಶೇಖರ್‌, ಸೋಮು ಮಾವಿನಕಟ್ಟಿ, ಮಾಜಿ ಶಾಸಕ ಎಸ್‌ .ಸಿ.ಮಾಳಗಿ, ಖಡಬಡಿ, ಯ.ರು.ಪಾಟೀಲ,

ಮುರುಗೇಶ ಶಿವಪೂಜಿ, ಮುದಕವಿ, ಎ.ಟಿ.ಪಾಟೀಲ, ಶೈಲಜಾ ಭಿಂಗೆ, ಎಸ್‌.ಆರ್‌. ಚೋಬಾರಿ, ಪ್ರತಿಭಾ ಕಳ್ಳಿಮಠ , ಸುನಂದಾ ಎಮ್ಮಿ , ದಿವ್ಯಾ ವಾಲಿ, ಸದಾಶಿವ ದೇವರಮನಿ ಉಪಸ್ಥಿತರಿದ್ದರು. ಗುರುದೇವಿ ಹುಲೆಪ್ಪನವರಮಠ ಕಾರ್ಯಕ್ರಮ ನಿರ್ವಹಿಸಿದರು. ಕೊರಬು ಸ್ವಾಗತಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.