ಮಾದಕ ವ್ಯಸನಗಳಿಂದ ದೂರವಿರಲು ಸಲಹೆ
Team Udayavani, Nov 20, 2019, 12:56 PM IST
ಬೆಳಗಾವಿ: ನಾವು ಸುರಕ್ಷಿತವಾಗಿ ಅಂತರ್ಜಾಲ ಬಳಕೆ ಮಾಡುವ ಜತೆಗೆ ಮಾದಕ ವ್ಯಸನಗಳಿಂದ ದೂರ ಇರಬೇಕು ಎಂದು ಮಕ್ಕಳ ರಕ್ಷಣಾ ಅಧಿಕಾರಿ ಲೋಕೇಶ ಹೇಳಿದರು.
ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಚೈಲ್ಡ್ಲೈನ್ 1098 ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿ ಹಮ್ಮಿಕೊಂಡಿದ್ದ ಅಂತರ್ಜಾಲ ಸುರಕ್ಷತೆ ಹಾಗೂ ಮಾದಕ ವ್ಯಸನ ಮುಕ್ತಿ ಕುರಿತ ಜಾಗೃತಿ ಜಾಥಾದಲ್ಲಿ ಅವರು ಮಾತನಾಡಿದರು. ದುಶ್ಚಟಗಳು ಮನುಷ್ಯನ ಜೀವನವನ್ನೇ ಹಾಳು ಮಾಡುತ್ತವೆ. ಇಂಥದರಿಂದ ದೂರ ಇದ್ದು ನಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು. ಬದುಕು ಸಾರ್ಥಕಗೊಳಿಸಲು ಪ್ರತಿಯೊಬ್ಬರೂ ಉತ್ತಮ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಅಧಿಕಾರಿ ಎಫ್.ಬಿ. ನದಾಫ್ ಮಾತನಾಡಿ, ಮಕ್ಕಳು ಹಾಗೂ ಪಾಲಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜಾಥಾ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು. ಮಕ್ಕಳ ಆಯೋಗದ ಸದಸ್ಯೆ ಭಾರತಿ ವಾಳ್ವೆಕರ ಜಾಥಾಗೆ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಆರಂಭಗೊಂಡ ಬೈಕ್ ಜಾಥಾ ಕಿತ್ತೂರು ಚನ್ನಮ್ಮ ವೃತ್ತ, ಬೋಗಾರವೇಸ್, ರೈಲ್ವೆ ನಿಲ್ದಾಣ ಮೂಲಕ ಗೋವಾವೇಸ್ ಬಸವೇಶ್ವರ ವೃತ್ತ ಬಳಿ ಮುಕ್ತಾಯಗೊಂಡಿತು.
ಸಂಸ್ಥೆಯ ಸಂಯೋಜಕ ಎಂ.ಕೆ. ಕುಂದರಗಿ ಜಾಥಾ ಆಯೋಜನೆ ಬಗ್ಗೆ ಮಾತನಾಡಿದರು. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಸಿಸ್ಟರ್ ಲೂದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ಉಮಾ ಭಂಡಾರಕರ, ರಾಜು ಬೋಜಪ್ಪಗೋಳ, ಬಸವರಾಜ ನಿರ್ವಾಣಿ, ಶಿವಲೀಲಾ ಹಿರೇಮಠ, ಸುಧಾ ಗಟ್ಟಿ, ನಿಂಗಪ್ಪ ಮರಿಕಟ್ಟಿ, ರಮೇಶ ಬೊಮ್ಮನವರ, ಪ್ರೀತಿ ಪಾಟೀಲ, ಕೋಮಲ ಕಮಡೊಳ್ಳಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ