ಮತ್ತೆ ಮೂರು ಸೇತುವೆ ಜಲಾವೃತ
•ಜತ್ರಾಟ-ಭಿವಸಿ, ಅಕ್ಕೋಳ-ಸಿದ್ನಾಳ, ಬೋಜವಾಡಿ-ಕುನ್ನೂರ ಸೇತುವೆ ಮುಳುಗುವ ಸಾಧ್ಯತೆ
Team Udayavani, Jul 29, 2019, 8:48 AM IST
ಚಿಕ್ಕೋಡಿ: ದೂಧಗಂಗಾ ನದಿ ನೀರು ಏರಿಕೆಯಿಂದ ಸದಲಗಾ-ಭೋರಗಾಂವ ಹಳೆ ಸೇತುವೆ ಮೇಲೆ ನೀರು ಹರಿಯುತ್ತಿದೆ.
ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಭಾಗದ ಕೊಯ್ನಾ, ಮಹಾಬಳೇಶ್ವರ, ವಾರಣಾ, ನವಜಾ ಮತ್ತು ರಾಧಾನಗರಿ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಭಾರಿ ಮಳೆ ಸುರಿದಿದ್ದರಿಂದ ಕೃಷ್ಣಾ, ದೂದಗಂಗಾ ಮತ್ತು ವೇದಗಂಗಾ ನದಿಗಳ ನೀರಿನ ಮಟ್ಟದಲ್ಲಿ ಒಂದೇ ದಿನ 10 ಅಡಿಯಷ್ಟು ನೀರು ಏರಿಕೆಯಾಗಿದೆ.
ಗಡಿ ಭಾಗದ ನದಿಗಳ ನೀರಿನ ಹರಿವು ದಿಢೀರ್ ಹೆಚ್ಚಳಗೊಂಡಿದ್ದರಿಂದ ಚಿಕ್ಕೋಡಿ ತಾಲೂಕಿನ ಮೂರು ಸೇತುವೆಗಳು ರವಿವಾರ ಮುಳುಗಡೆಯಾಗಿ ಸಂಚಾರ ಕಡಿತಗೊಂಡಿದೆ. ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಲ್ಲೋಳ-ಯಡೂರ ಸೇತುವೆ, ದೂದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಾರದಗಾ-ಭೋಜ, ಮಲಿಕವಾಡ-ದತ್ತವಾಡ ಸೇತುವೆ ರವಿವಾರ ನಸುಕಿನ ಜಾವ ಮುಳುಗಡೆಗೊಂಡಿವೆ.
ಮೂರೂ ಸೇತುವೆ ಮೇಲೆ ಯಾರೂ ಸಂಚರಿಸದಂತೆ ನದಿ ತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ಡಂಗೂರ ಸಾರಿದೆ.
ವೇದಗಂಗಾ ನದಿ ನೀರಿನ ಹರಿವು ಸಹ ಜೋರಾಗಿರುವುದರಿಂದ ಜತ್ರಾಟ-ಭಿವಸಿ, ಅಕ್ಕೋಳ-ಸಿದ್ನಾಳ, ಬೋಜವಾಡಿ-ಕುನ್ನೂರ ಸೇತುವೆ ಮುಳುಗುವ ಸಾಧ್ಯತೆ ಹೆಚ್ಚಿದೆ.
ಮಹಾರಾಷ್ಟ್ರದ ಶಿರೋಳ ತಾಲೂಕಿನ ಸುಕ್ಷೇತ್ರ ನರಸಿಂಹವಾಡಿ ಹತ್ತಿರ ಕೃಷ್ಣಾ ನದಿ ಸೇರುವ ಪಂಚಗಂಗಾ ನದಿ ನೀರಿನ ಮಟ್ಟ ಹೆಚ್ಚಳವಾಗಿ ನಾಲ್ಕು ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ.
ಮಹಾರಾಷ್ಟ್ರ ರಾಜಾಪೂರ ಬ್ಯಾರೇಜ್ದಿಂದ ಕೃಷ್ಣಾ ನದಿಗೆ 81,286 ಕ್ಯೂಸೆಕ್ ನೀರು ಹರಿದು ಬರಲಾರಂಭಿಸಿದೆ. ದೂದಗಂಗಾ ಮತ್ತು ವೇದಗಂಗಾ ನದಿಗಳಿಂದ 11,968 ಕ್ಯೂಸೆಕ್ ನೀರು ಹರಿದು ಕೃಷ್ಣಾ ನದಿಗೆ ಸೇರುತ್ತದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ ಕೃಷ್ಣಾ ನದಿಗೆ ಒಟ್ಟು 93,254 ಕ್ಯೂಸೆಕ್ ನೀರು ಹರಿದು ಹಿಪ್ಪರಗಿ ಬ್ಯಾರೇಜ್ಗೆ ಹೋಗುತ್ತಿದೆ. ಹಿಪ್ಪರಗಿ ಬ್ಯಾರೇಜ್ದಿಂದ 8 ಗೇಟ್ಗಳ ಮೂಲಕ 65 ಸಾವಿರ ಕ್ಯೂಸೆಕ್ ನೀರು ಹರಿದು ಬಿಡಲಾಗುತ್ತಿದೆ ಎಂದು ತಹಶೀಲ್ದಾರ್ ಡಾ|ಸಂತೋಷ ಬಿರಾದಾರ ಮಾಹಿತಿ ನೀಡಿದರು.
ಚಿಕ್ಕೋಡಿ, ರಾಯಬಾಗ, ಅಥಣಿ, ಕಾಗವಾಡ ಹಾಗೂ ನಿಪ್ಪಾಣಿ ಪ್ರದೇಶಗಳಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿ ಜಿಟಿಜಿಟಿ ಮಳೆ ಸುರಿಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್