ಅಗ್ನಿಪಥ ಪ್ರತಿಭಟನೆ ತಡೆಯಲು ಬೆಳಗಾವಿಯಲ್ಲಿ ಪೊಲೀಸ್ ಸರ್ಪಗಾವಲು
Team Udayavani, Jun 20, 2022, 1:30 PM IST
ಬೆಳಗಾವಿ: ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆ ವಿರೋಧಿಸಿ ಪ್ರತಿಭಟನೆ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸೋಮವಾರ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ರೈಲ್ವೆ ನಿಲ್ದಾಣ ಸುತ್ತಲೂ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ನಗರದಲ್ಲಿ ಪ್ರತಿಭಟನೆ ನಡೆಸಲು ಯಾರೂ ಪ್ರವೇಶಿಸದಂತೆ ಬಿಗಿ ಕ್ರಮ ಕೈಗೊಳ್ಳಲಾಗಿದೆ. ರೈಲ್ವೇ ನಿಲ್ದಾಣದಲ್ಲಿ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ನಗರದ ಪ್ರಮುಖ ಬೀದಿಗಳಲ್ಲಿ ಪೊಲೀಸರು ನಿಂತಿದ್ದಾರೆ. ಪ್ರತಿಭಟನಾಕಾರರು ನಗರದಲ್ಲಿ ನುಸುಳದಂತೆ ಕಟ್ಟೆಚ್ಚರ ವಹಿಸಲಾಗಿದೆ.
ಪೊಲೀಸ್ ಕಮೀಷನರ್ ಡಾ. ಎಂ.ಬಿ. ಬೋರಲಿಂಗಯ್ಯ, ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾದಿ, ಕ್ರೈಂ ಡಿಸಿಪಿ ಪಿ.ವಿ.ಸ್ನೇಹಾ, ಎಸಿಪಿ, ಇನ್ಸಪೆಕ್ಟರ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಬಂದೋಬಸ್ತ್ ಮಾಡಿದ್ದಾರೆ. ಅಹಿತಕರ ಘಟನೆ ತಡೆಯಲು ಡ್ರೋಣ್ ಕ್ಯಾಮರಾ ಕಣ್ಗಾವಲು ಇಡಲಾಗಿದೆ.
ಇದನ್ನೂ ಓದಿ:ಈ ದೇಶದಲ್ಲಿ ಯಾರೂ ವಿಕ್ಟೋರಿಯಾ ರಾಣಿಯಾಗಲಿ, ರಾಜನಾಗಲಿ ಇಲ್ಲ: ರಾಹುಲ್ ಗೆ ಬಿಜೆಪಿ ತಿರುಗೇಟು
ನಗರದ ಚನ್ನಮ್ಮ ವೃತ್ತ, ಅಶೋಕ ವೃತ್ತ, ಬೋಗಾರವೇಸ್, ಗೋವಾವೇಸ್, ಕ್ಯಾಂಪ್ ಪ್ರದೇಶ, ಆರ್ ಪಿಡಿ ಕ್ರಾಸ್, ಪೀರನವಾಡಿ ನಾಕಾ ಸೇರಿದಂತೆ ಹಲವೆಡೆ ನಾಕಾಬಂದಿ ಹಾಕಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?