ಪರಿಹಾರ ನೀಡದಿದ್ದರೆ ಅಹೋರಾತ್ರಿ ಧರಣಿ

ಈ ಯೋಜನೆಯಲ್ಲಿ ಸರಿಯಾದ ಅವಾರ್ಡ್‌ ಪ್ರಕ್ರಿಯೆ ನಡೆದಿಲ್ಲ.

Team Udayavani, Aug 18, 2022, 5:45 PM IST

ಪರಿಹಾರ ನೀಡದಿದ್ದರೆ ಅಹೋರಾತ್ರಿ ಧರಣಿ

ಸವದತ್ತಿ: ರೈತರ ಜಮೀನುಗಳ ಪಹಣಿಯಲ್ಲಿ ನೀರಾವರಿ ನಿಗಮದ ಹೆಸರು ಕಾನೂನು ಬಾಹಿರವಾಗಿ ನಮೂದಿಸಲಾಗಿದೆ ಹಾಗೂ ಬೆಳೆ ಮತ್ತು ಮನೆ ಹಾನಿ ಪರಿಹಾರಕ್ಕೆ ಒತ್ತಾಯಿಸಿ ಭಾರತೀಯ ಕಿಸಾನ ಸಂಘ ಹಾಗೂ ರಾಜ್ಯ ರೈತ ಸಂಘದಿಂದ ಗ್ರೇಡ್‌-2 ತಹಶೀಲ್ದಾರ್‌ ಎಂ.ವಿ. ಗುಂಡಪ್ಪಗೋಳ ಅವರಿಗೆ ಮನವಿ ಸಲ್ಲಿಸಿದರು.

ಮಲಪ್ರಭಾ ಹಿನ್ನೀರು ಮತ್ತು ಇದೀಗ ಕಾಲುವೆಗಳಿಗೆ ಭೂಸ್ವಾಧೀನವಾದ ಪ್ರಕರಣಗಳು ಕಾನೂನು ಬಾಹಿರವಾಗಿದೆ. 1970 ರ ದಾಖಲೆ ಪರಿಗಣಿಸಿ ಮುನ್ಸೂಚನೆ ನೀಡದೇ ಪಹಣಿಯಲ್ಲಿ ನೀರಾವರಿ ನಿಗಮದ ಹೆಸರು ನಮೂದಿಸಲಾಗಿದೆ.

ಈ ರೀತಿ ಬದಲಾವಣೆಯಾಗಲು ಕಾರಣವೇನೆಂದು ತಿಳಿಸಬೇಕು. ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮವಹಿಸಬೇಕು. ಈ ಯೋಜನೆಯಲ್ಲಿ ಸರಿಯಾದ ಅವಾರ್ಡ್‌ ಪ್ರಕ್ರಿಯೆ ನಡೆದಿಲ್ಲ. ಭೂ ಸ್ವಾಧೀನದಿಂದ ರೈತನ ಎಲ್ಲ ವ್ಯವಹಾರಗಳು ಸ್ಥಗಿತಗೊಂಡು ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಕೂಡಲೇ ದಾಖಲಾತಿ ಪರಿಶೀಲಿಸಿ ಸ್ವಾಧೀನ ಪಡಿಸಿಕೊಂಡ ಜಮೀನನ್ನು ರೈತರಿಗೆ ಮರಳಿಸಬೇಕು. ಕಂದಾಯ, ಭೂ ಸ್ವಾಧೀನ ಮತ್ತು ಸಮೀಕ್ಷಾಧಿಕಾರಿಗಳ ನೇತೃತ್ವದಲ್ಲಿ ಜಂಟಿ ಸಮೀಕ್ಷೆ ನಡೆಸಿ ತ್ವರಿತವಾಗಿ ನೊಂದ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಮಳೆಯಿಂದ ಬೆಳೆ ಹಾಗೂ ಮನೆಗಳು ಹಾನಿಗೀಡಾಗಿವೆ. ಇಲ್ಲಿಯವರೆಗೆ ಸರಕಾರದಿಂದ ಯಾವುದೇ ಪರಿಹಾರ ನೀಡಿಲ್ಲ. ಹಾನಿಯಾದ ಮನೆಗಳ ಪರಿಹಾರದ ಕುರಿತು ಕ್ರಮ ಕೈಗೊಂಡಿಲ್ಲ. ಕೂಡಲೇ ಕೃಷಿ ಇಲಾಖೆ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು. ಭೂಸ್ವಾಧೀನ ಹಾಗೂ ಹಾನಿ ಪರಿಹಾರ ನೀಡದಿದ್ದರೆ ಸೆ. 1 ರಂದು ತಹಶೀಲ್ದಾರ್‌ ಮತ್ತು ಜಿಲ್ಲಾ ಧಿಕಾರಿ ಕಚೇರಿ ಎದುರು ಆಹೋರಾತ್ರಿ ಧರಣಿ ನಡೆಸಲಾಗುವುದು ಎಂದು ರೈತರು ಎಚ್ಚರಿಸಿದರು.

ರಾಜ್ಯಾಧ್ಯಕ್ಷ ಚನ್ನಪ್ಪ ಪೂಜೇರ, ಜಿಲ್ಲಾಧ್ಯಕ್ಷ ರಾಘವೇಂದ್ರ ನಾಯಕ, ರೇಣಪ್ಪ ಗುಡೆನ್ನವರ, ಮುಸ್ತಾಕ ಸಯ್ಯದ, ಸುರೇಶ ಸಂಪಗಾಂವಿ, ವೀರೇಶ ಮಂಡೇದ, ಬರಮು ಕಮಲಾಪೂರ, ದ್ಯಾಮನಗೌಡ ಪಾಟೀಲ, ಶಿವು ಇಳಗೇರ, ಶಿವಾನಂದ ಸರದಾರ, ಅಲ್ಲಿಸಾಬ ನೂಲಗಿ, ಮಹಾಂತೇಶ ಚರಂತಿಮಠ ಹಾಗೂ ಪ್ರಮುಖರು ಇದ್ದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.