ವೈಚಾರಿಕ ಪ್ರಜ್ಞೆ ಮೂಡಿಸಿದ್ದ ಶರಣರು: ಡಾ| ಗುರುದೇವಿ

ಅಮಾವಾಸ್ಯೆ ಅನುಭಾವ ಗೋಷ್ಠಿ-ಅಂಧಶ್ರದ್ಧೆ-ಅಂಧಾನುಕರಣೆ ಅಲ್ಲಗಳೆದ ವಿಚಾರವಾದಿಗಳು

Team Udayavani, Jun 2, 2022, 5:12 PM IST

27

ಬೆಳಗಾವಿ: ಹನ್ನೆರಡನೇ ಶತಮಾನದ ಶರಣರು ಸಮಾಜದಲ್ಲಿ ಬೇರು ಬಿಟ್ಟಿದ್ದ ಮೂಢನಂಬಿಕೆ ತೊಡೆದುಹಾಕಿ ವೈಚಾರಿಕ ಪ್ರಜ್ಞೆ ಮೂಡಿಸಿದ್ದರು. ದುಡಿಮೆಯಲ್ಲಿಯೇ ಪರಮಾತ್ಮನನ್ನು ಕಂಡರು. ಅಂಧಾನುಕರಣೆ ಕಠೊರವಾಗಿ ಖಂಡಿಸಿದರು ಎಂದು ಹಿರಿಯ ಮಹಿಳಾ ಸಾಹಿತಿ ಡಾ| ಗುರುದೇವಿ ಹುಲೆಪ್ಪನವರಮಠ ಹೇಳಿದರು.

ನಗರದ ಲಿಂಗಾಯತ ಭವನದಲ್ಲಿ ಅಖೀಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಆಯೋಜಿಸಿದ್ದ ಅಮಾವಾಸ್ಯೆ ಅನುಭಾವ ಗೋಷ್ಠಿಯಲ್ಲಿ “ಶರಣರ ವಚನಗಳಲ್ಲಿ ಮೂಢನಂಬಿಕೆಯ ವಿರೋಧ’ ವಿಷಯ ಕುರಿತು ಮಾತನಾಡಿದರು.

ಪ್ರಖರ ವಿಚಾರವಾದಿಗಳಾದ ಶರಣರು ಮನುಕುಲದ ಮಾನ ಕಳೆವ, ಶೋಷಣೆ-ಹಿಂಸೆಗೆ ದಾರಿ ಮಾಡಿಕೊಡುವ ಅಂಧಶ್ರದ್ಧೆ ಮತ್ತು ಅಂಧಾನುಕರಣೆ ವಿರುದ್ಧ ಪ್ರತಿಭಟಿಸಿದರು. ಯಾವುದೇ ವ್ಯಕ್ತಿ, ಸ್ಥಳ, ಮತ್ತು ಸಮಯದ ಬಗೆಗೆ ಧನಾತ್ಮಕಭಾವ ತಳೆಯುವುದು ವಿಚಾರವಾದಿಗಳ ನಡೆ. ಅಂತಹ ನಡೆಯಲ್ಲಿ ವ್ಯಷ್ಟಿ ಮತ್ತು ಸಮಷ್ಟಿಯ ಉದ್ಧಾರ ಅಡಗಿದೆ ಎಂದರು.

ಸಂವಾದದಲ್ಲಿ ಪಾಲ್ಗೊಂಡಿದ್ದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಮಹಾವಿದ್ಯಾಲಯದ ಉಪನ್ಯಾಸಕ ಡಾ| ಸಾಹುಕಾರ ಕಾಂಬಳೆ ಮಾತನಾಡಿ, ಶರಣ ತತ್ವಗಳು ವೈಜ್ಞಾನಿಕ ಮತ್ತು ವೈಚಾರಿಕ ತಳಹದಿ ಮೇಲೆ ರೂಪುಗೊಂಡಿರುವಂತವು. ಮನುಕುಲದ ಸರ್ವಾಂಗೀಣ ಕಲ್ಯಾಣಕ್ಕಾಗಿ ಬಸವಣ್ಣನವರ ನೇತೃತ್ವದಲ್ಲಿ ಹೋರಾಡಿದ ಶರಣರು ಭಯ, ಬಡತನ ಮತ್ತು ಅಜ್ಞಾನ ಮೂಲವಾದ ಮೂಢನಂಬಿಕೆ ನಿರ್ಮೂಲನೆ ಮಾಡಲು ಶ್ರಮಿಸಿದ್ದು ಮಾನವ ಇತಿಹಾಸದಲ್ಲಿ ಅಪರೂಪದ ಘಟನೆ ಎಂದರು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಂಗಮೇಶ ತೆಲಸಂಗ್‌ ಮಾತನಾಡಿ, ಶರಣರು ಜಂಗಮ ತತ್ವ ಸಾಧಿಸಿ ಬೋಧಿಸಿದರು. ಜಂಗಮ ಎಂದರೆ ಚಲನಶೀಲ, ಕ್ರಿಯಾಶೀಲವಾದ ಸಮಾಜವಾಗಿದೆ. ಅದನ್ನು ತೃಪ್ತಿ ಪಡಿಸುವುದರಲ್ಲಿ ಜೀವನದ ಸಾರ್ಥಕತೆ ಅಡಗಿದೆ ಎಂದರು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ| ಹನುಮಂತಪ್ಪ ಸಂಜೀವನ್ನವರ ಮಾತನಾಡಿ, ಶರಣರು ಸದಾಚಾರ ಸಂಪನ್ನತೆಯಿಂದ ವಿಜೃಂಭಿಸುವ ಸಮಾಜ ನಿರ್ಮಿತಿಗೆ ಶ್ರಮಿಸಿದ ಮಹಾಮಾನವತಾವಾದಿಗಳು. ಬಹಿರಂಗದ ವ್ಯವಹಾರ ಸಾರಾಸಗಟಾಗಿ ಅಲ್ಲಗಳೆದು ಸಮಸ್ಯೆಗಳಿಗೆ ಪರಿಹಾರ ಸೂಚಿಸಿದ್ದರು. ಮೂಢನಂಬಿಕೆಗಳ ಅರ್ಥಹೀನತೆ, ಅಪಾಯ ಮನಗಂಡಿದ್ದ ಅವರು ಜನರು ಅಂತಹ ಅಂಧಾನುಕರಣೆ ಕೈಬಿಡುವಂತೆ ಕರೆ ನೀಡಿದ್ದರು ಎಂದರು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ವಿದ್ಯಾರ್ಥಿನಿ ಮಹೇಶ್ವರಿ ತೇಗೂರ ಮಾತನಾಡಿದರು. ಕಾರಂಜಿ ಮಠದ ಗುರುಸಿದ್ಧ ಸ್ವಾಮಿಗಳು ಆಶೀರ್ವಚನ ನೀಡಿ, ನಮ್ಮ ಜೀವನ ಬೆಳಗಿಸಿಕೊಳ್ಳಲು ಶರಣರು ಹಲವು ಮೌಲ್ಯಗಳೆಂಬ ದೀಪಗಳನ್ನು ವಚನಮುಖೇನ ದಯಪಾಲಿಸಿದ್ದಾರೆ. ಅವುಗಳಲ್ಲಿ ವೈಚಾರಿಕತೆಯೂ ಒಂದು. ಮಾಡುವ ಮಾಟದ ಸತ್ಯಾಸತ್ಯತೆ ಪರಿಶೀಲಿಸಿ ಮುನ್ನಡೆಯುವವನು ಎಡವಲಾರ. ಅಂಧಶ್ರದ್ಧೆಯಿಂದ ದೂರವಿರಲು ಶ್ರಮಿಸಿದವನು ಜೀವನದಲ್ಲಿ ಸುಖೀಯಾಗಿರುತ್ತಾನೆ ಎಂದರು.

ಅಖೀಲ ಭಾರತ ವೀರಶೈವ ಮಹಾಸಭೆ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷೆ ಶರಣೆ ರತ್ನಪ್ರಭಾ ಬೆಲ್ಲದ ಅಧ್ಯಕ್ಷತೆ ವಹಿಸಿದ್ದರು. ಶುಭಾ ಎಸ್‌. ತೆಲಸಂಗ ವಚನ ವಿಶ್ಲೇಷಣೆ ಮಾಡಿದರು. ಆಶಾ ಯಮಕನಮರಡಿ ಕಾರ್ಯಕ್ರಮ ನಿರ್ವಹಿಸಿದರು. ಈ ವೇಳೆ ಎಂ.ವೈ. ಮೆಣಸಿನಕಾಯಿ ವಂದಿಸಿದರು. ಚನ್ನಬಸಪ್ಪ ಚೊಣ್ಣದ ಇದ್ದರು.

ಟಾಪ್ ನ್ಯೂಸ್

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.