ಮೈತ್ರಿ ಅಸ್ತಿತ್ವವೇ ಹಳ್ಳಿಗರಿಗೆ ಗೊತ್ತಿಲ್ಲ


Team Udayavani, Apr 21, 2019, 2:27 PM IST

Udayavani Kannada Newspaper
ಪ್ರಶ್ನೆ: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮುಂದೆ ಮೋದಿ ಅಲೆ ಕೈಹಿಡಿಯುತ್ತಾ ?

ಉತ್ತರ: ಬೆಳಗಾವಿ ಜಿಲ್ಲೆಯಲ್ಲಿ ಅದರಲ್ಲೂ ನಮ್ಮ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೈತ್ರಿಯ ವಾತಾವರಣವೇ ಕಾಣುತ್ತಿಲ್ಲ. ಈ ಭಾಗದಲ್ಲಿ ಜೆಡಿಎಸ್‌ ತನ್ನ ಅಸ್ತಿತ್ವವನ್ನೇ ಕಳೆದು ಕೊಂಡಿದೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಇದೆ ಎಂಬುದು ಬಹುತೇಕ ಹಳ್ಳಿಗಳಲ್ಲಿ ಗೊತ್ತೇ ಇಲ್ಲ. ಇಲ್ಲಿ ಏನೇ ಇದ್ದರೂ ಅದು ಮೋದಿ ಅಲೆ ಮಾತ್ರ.

ಪ್ರಶ್ನೆ: ರಾಷ್ಟ್ರೀಯವಾದ, ಸೈನಿಕರ ಸಾಧನೆ ಹೊರತುಪಡಿಸಿ ಸ್ಥಳೀಯವಾಗಿ ನಿಮ್ಮ ಸಾಧನೆ ಏನು..?

ಉತ್ತರ: ಬೆಳಗಾವಿ ನಗರದಲ್ಲಿ ವಾಹನ ಸಂಚಾರ ಸಮಸ್ಯೆಗೆ ಮುಕ್ತಿ ಹಾಡಲು ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಮೂರು ರೈಲ್ವೆ ಮೇಲು ಸೇತುವೆಗಳ ನಿರ್ಮಾಣ ಮಾಡಲಾಗಿದೆ. ಇಲ್ಲಿಯ ಉದ್ಯಮಿಗಳಿಗೆ ತಮ್ಮ ಉತ್ಪನ್ನಗಳನ್ನು ಹೊರದೇಶಗಳಿಗೆ ರಪ್ತು ಮಾಡಲು ಅನುಕೂಲವಾಗುವಂತೆ ಡಿಐಎಫ್‌ಟಿ ಕೇಂದ್ರ ಸ್ಥಾಪನೆ ಮಾಡಲಾಗಿದೆ. ವಿದ್ಯಾವಂತ ಯುವ ಸಮುದಾಯಕ್ಕೆ ಸಹಾಯವಾಗಲು ಪಾಸ್‌ಪೋರ್ಟ್‌ ಸೇವಾ ಕೇಂದ್ರ ತರಲಾಗಿದೆ. ಬೆಳಗಾವಿ ವಿಮಾನ ನಿಲ್ದಾಣವನ್ನು ಸಂಪೂರ್ಣ ಅಭಿವೃದ್ಧಿಪಡಿಸಿ ಉಡಾನ್‌ ಯೋಜನೆಯಡಿ ಆಯ್ಕೆಯಾಗುವಂತೆ ಮಾಡಲಾಗಿದೆ. ಲೋಂಡಾ- ಮೀರಜ್‌ ದ್ವಿಪಥ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರದಿಂದ ಅನುದಾನ ಮಂಜೂರು ಮಾಡಿಸಲಾಗಿದೆ.

ಪ್ರಶ್ನೆ; ರಾಜ್ಯ ಸರಕಾರದ ಅಬ್ಬರ ಎದುರಿಸಲು ಪ್ರಚಾರದ ವೈಖರಿ ಹಾಗೂ ತಂತ್ರಗಾರಿಕೆ ಹೇಗಿದೆ ?

ಉತ್ತರ: ಕ್ಷೇತ್ರದ ಯಾವ ಭಾಗದಲ್ಲೂ ರಾಜ್ಯ ಸರಕಾರದ ಅಬ್ಬರ ಇಲ್ಲ. ಮೈತ್ರಿ ಸರಕಾರದ ಭರವಸೆಗಳು ಬರೀ ಸುಳ್ಳು ಎಂಬುದು ಜನರಿಗೆ ಗೊತ್ತಾಗಿದೆ. ನಾವು ಮನೆ ಮನೆಗೆ ಹೋಗಿದ್ದೇವೆ. ಜನರಿಗೆ ಮನವಿ ಮಾಡಿದ್ದೇವೆ. ಜನರಿಗೆ ಬಳಿಗೆ ಹೋಗುವುದು. ಅವರ ಬೇಕು ಬೇಡಿಕೆಗಳಿಗೆ ಸ್ಪಂದಿಸುವುದು. ಅವರ ಸ್ಪಂದನೆಯೇ ನಮಗೆ ಶ್ರೀರಕ್ಷೆ. ಕೆಲವು ಕಡೆ ನೀವು ನಮ್ಮ ಹಳ್ಳಿಗೆ ಬಂದೇ ಇಲ್ಲ ಎಂದು ಹೇಳಿದರು. ಅಸಮಾಧಾನ ವ್ಯಕ್ತಪಡಿಸಿದರು. ಆದರೂ ನಿಮಗೆ ಬೆಂಬಲ ನೀಡುತ್ತೇವೆ ಎಂದರು. ಅದೂ ಸಹ ನಮಗೆ ಆಶೀರ್ವಾದವೇ. ಹೀಗಿರುವಾಗ ಈ ಸರಕಾರವನ್ನು ಎದುರಿಸಲು ಹೊಸ ತಂತ್ರಗಾರಿಕೆಯ ಅಗತ್ಯವಿಲ್ಲ.

ಪ್ರಶ್ನೆ: ಪ್ರತ್ಯೇಕ ಲಿಂಗಾಯತ ಧರ್ಮ ಈ ಬಾರಿಯ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆಯೇ ?

ಉತ್ತರ: ಯಾವುದೇ ಕಾರಣಕ್ಕೂ ಇಲ್ಲ. ಭಾರತದಲ್ಲಿ ಹಿಂದೂ ಧರ್ಮ ಬಿಟ್ಟರೆ ಉಳಿದೆಲ್ಲವೂ ಗೌಣ. ನಮ್ಮದು ಅಖಂಡ ಹಿಂದೂ ರಾಷ್ಟ್ರ. ಯಾವುದೇ ಧರ್ಮದ ವಿಷಯ ಅವರವರಿಗೆ ಬಿಟ್ಟಿದ್ದು. ಅದು ಚುನಾವಣೆಯಲ್ಲಿ ಬರುವುದೇ ಇಲ್ಲ.

ಪ್ರಶ್ನೆ; ಕ್ಷೇತ್ರದ ಅಭಿವೃದ್ಧಿ ಬಗ್ಗೆ ನಿಮ್ಮ ನೀಲನಕ್ಷೆ ಏನು ?

ಉತ್ತರ: ಮಹದಾಯಿ ನೀರನ್ನು ತ್ವರಿತವಾಗಿ ತರಬೇಕು ಎಂಬ ಆಲೋಚನೆ ಇದೆ. ಇದರಿಂದ ಸವದತ್ತಿ ಹಾಗೂ ರಾಮದುರ್ಗದ ಜನರಿಗೆ ಬಹಳ ಅನುಕೂಲವಾಗಲಿದೆ. ಇದಲ್ಲದೇ ಬೆಳಗಾವಿ ನಗರಕ್ಕೆ ವರ್ಷದ 12 ತಿಂಗಳೂ ನಿರಂತರವಾಗಿ ನೀರು ಸಿಗುವಂತೆ ಮಾಡಲು ಮಹಾರಾಷ್ಟ್ರದ ತಿಲಾರಿ ಡ್ಯಾಮ್‌ದಿಂದ ನೀರು ತರುವ ಯೋಜನೆ ಇದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.