ರೈತರ ಆರ್ಥಿಕ ಬೆಳವಣಿಗೆಗೆ ಶ್ರಮಿಸಲು ಸದಾ ಬದ್ಧ: ಹುಕ್ಕೇರಿ
ನೀರು ಮಿತವಾಗಿ ಬಳಸಿ, ನೀರಿನ ದುರ್ಬಳಕೆ ಮಾಡಬೇಡಿ, ಅವಶ್ಯಕವಾಗಿರುವಷ್ಟೇ ನೀರು ಬಳಸಿ.
Team Udayavani, Feb 8, 2022, 6:21 PM IST
ಚಿಕ್ಕೋಡಿ: ಹಿರೇಕೋಡಿ ಗ್ರಾಮದಲ್ಲಿ ರೈತರ ಬಹುದಿನಗಳ ಕನಸಾಗಿದ್ದ 1.95 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಂಡ ಶ್ರೀ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆಯನ್ನು ವಾಸ್ತು ಶಾಂತಿ ನೆರವೇರಿಸುವ ಮೂಲಕ ಚಿಕ್ಕೋಡಿ-ಸದಲಗಾ ಕ್ಷೇತ್ರದ ಶಾಸಕ ಗಣೇಶ ಹುಕೇರಿ ಲೋಕಾರ್ಪಣೆಗೊಳಿಸಿದರು.
ನಂತರ ಮಾತನಾಡಿದ ಅವರು, ನೀರಿನ ಮಿತಬಳಕೆ ಮೂಲಕ ಎಲ್ಲರ ಪ್ರಗತಿ ಸಾಧ್ಯ. ನಾವು ಸಬಲರಾಗಿ ಬದುಕಬೇಕಾದರೆ ಆರ್ಥಿಕವಾಗಿ ಸಬಲರಾಗಬೇಕು. ಆ ನಿಟ್ಟಿನಲ್ಲಿ ನಾನು ಹಾಗೂ ನಮ್ಮ ನಾಯಕ ಪ್ರಕಾಶ ಹುಕ್ಕೇರಿ ನೀರಾವರಿ ಯೋಜನೆ ಮೂಲಕ ರೈತರ ಬೆಳವಣಿಗೆಗೆ ಶ್ರಮಿಸುತ್ತಿದ್ದೇವೆ. ಯಾವ ಕಾಲದಲ್ಲಿ, ಯಾವ ಪ್ರದೇಶದಲ್ಲಿ, ಯಾವ ಬೆಳೆ ಬೆಳೆಯಬೇಕು? ಎಂಬುದನ್ನು ಅರಿತು ರೈತರು ನೀರಿನ ಸಂರಕ್ಷಣೆ ಮಾಡಬೇಕು ಎಂದು ಮನವಿ ಮಾಡಿದರು.
ನೀರು ಮಿತವಾಗಿ ಬಳಸಿ, ನೀರಿನ ದುರ್ಬಳಕೆ ಮಾಡಬೇಡಿ, ಅವಶ್ಯಕವಾಗಿರುವಷ್ಟೇ ನೀರು ಬಳಸಿ. ಈ ನಿಟ್ಟಿನಲ್ಲಿ ನೀರಿನ ಮಿತಬಳಕೆ ಬಗ್ಗೆ ರೈತರು ಮನಗಾಣಬೇಕು. ಮುಂದಿನ ದಿನಗಳಲ್ಲಿ ಇತರೆ ಗ್ರಾಮಗಳಲ್ಲೂ ನೀರಾವರಿ ಯೋಜನೆ ಮಾಡುವ ಮೂಲಕ ರೈತರ ಬದುಕು ಹಸನಾಗಿಸಲು ಶ್ರಮಿಸುವೆ ಎಂದ ಅವರು, ಶ್ರೀ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆ ಮೂಲಕ ಭೂಮಿಗೆ ನೀರುಣಿಸುವ ಮಹತ್ತರ ಕೆಲಸವು ಪೂರ್ಣಗೊಂಡಿದ್ದಕ್ಕೆ ರೈತರ
ಮೊಗದಲ್ಲಿ ಸಂತಸ ತಂದಿರುವುದು ನನಗೆ ಖುಷಿ ತರಿಸಿದೆ ಎಂದರು.
ಈ ಸಂದರ್ಭಧಲ್ಲಿ ಬಾಬರ ಪಟೇಲ್, ಸುರೇಶ ಚೌಗಲಾ, ಉಮೇಶ ಸಾತವಾರ, ಗುಡಿಮನಿ ಸೇರಿದಂತೆ ಗ್ರಾಮದ ಹಿರಿಯರು, ಮುಖಂಡರು, ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ